CRIMENEWSನಮ್ಮಜಿಲ್ಲೆ

KKRTC: ಹೊಸಪೇಟೆ ಬಸ್‌ ಗಾಜು ಪುಡಿಗಟ್ಟಿದ ಬೈಕ್‌ನಲ್ಲಿ ಬಂದ ಕಿಡಿಗೇಡಿಗಳು

ವಿಜಯಪಥ ಸಮಗ್ರ ಸುದ್ದಿ

ಗದಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ಗೆ ಬೈಕ್‌ನಲ್ಲಿ ಬಂದ ಮುಸುಕುದಾರಿ ಕಿಡಿಗೇಡಿಗಳು ಕಲ್ಲು ತೂರಿ ಪರಾರಿಯಾಗಿದ್ದಾರೆ.

ಹೊಸಪೇಟೆ ವಿಭಾಗದ ಬಸ್‌ ಹುಬ್ಬಳ್ಳಿಯಿಂದ ಹೊಸಪೇಟೆ ಬರುವಾಗ ಬಸ್‌ಗೆ ಕಲ್ಲು ತೂರಿದ್ದು ಬಸ್‌ನ ಮುಂದಿನ ಭಾಗದ ಗ್ಲಾಸ್‌ ಜಖಂ ಆಗಿದೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಚಾಲಕ ನಾವು ಹೊಸಪೇಟೆಗೆ ಬರುತ್ತಿದ್ದಾಗ ಕಲ್ಲು ತೂರಿದರು. ಈ ವೇಳೆ ಬಸ್‌ನಲ್ಲಿ 15 ಜನ ಪ್ರಯಾಣಿಕರಿದ್ದರು. ನಾವು ಕೂಡಲೆ ಅವರನ್ನು ಇಳಿಸಿ ಬೇರೆ ಬಸ್‌ಗ ಕಳಿಸಿ ನಾವು ಗದಗಕ್ಕೆ ಬಸ್‌ ತಂದು ನಿಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ನಾವು ಬಸ್‌ಅನ್ನು ಈಗ ಇಲ್ಲಿಯೇ ಸಿಲ್ಲಿಸಿದ್ದೇವೆ. ಕಾರಣ ಮತ್ತೆ ಹೊಸಪೇಟೆಗೆ ಬಸ್‌ ತೆಗೆದುಕೊಂಡು ಹೋಗುವಾಗ ಮತ್ತೆ ಏನಾದರು ತಂದರೆ ಆದರೆ ಏನು ಮಾಡುವುದು ಎಂಬ ಭಯವಿದೆ ಎಂದು ತಿಳಿಸಿದ್ದಾರೆ.

ನಿನ್ನೆ ಕೆಕೆಆರ್‌ಟಿಯ ಬಸ್‌ಗೆ ಹಾಗೂ ಇಂದು ಇದೇ ಕೆಕೆಆರ್‌ಟಿಸಿಯ ಹೊಸಪೇಟೆ ವಿಭಾಗದ ಬಸ್‌ಗೆ ಹಾಗೂ ಕೋಲಾರ ವಿಭಾಗದ ಬಸ್‌ಗೆ ಕಲ್ಲು ತೂರಿದ್ದು ಬಸ್‌ಗಳ ಗಾಜುಗಳನ್ನು ಪುಡಿಗಟ್ಟಿದ್ದಾರೆ.

ಇನ್ನು ಸರ್ಕಾರ ಹೀಗೆ ನೌಕರರ ನ್ಯಾಯಯುತ ಬೇಡಿಕೆಗೆ ಸ್ಪಂದಿಸದೆ ಹಠ ಹಿಡಿದು ಕುಳಿತರೆ ಇನ್ನಷ್ಟು ಅವಘಡಗಳು ಸಂಭವಿಸಬಹುದು ಹಾಗಾಗಿ ಕೂಡಲೇ ಸಿಎಂ ನೌಕರರ ಸಭೆ ಕರೆದು ಬೇಡಿಕೆ ಈಡೇರಿಸಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ