KKRTC: ಕಲಬುರಗಿ 2ರ ವಿಭಾಗೀಯ ನಿಯಂತ್ರಣಾಧಿಕಾರಿ ಲಂಚಾವತಾರಕ್ಕೆ ಬೇಸತ್ತು ಸ್ವಯಂ ನಿವೃತ್ತಿ ಪಡೆದ ಸಿಬ್ಬಂದಿ

- VRS ಪಡೆದರೂ ನೆಮ್ಮದಿಕಳೆದುಕೊಂಡು ಇನ್ನೂ ಡಿಸಿ ಕಿರುಕುಳದಲ್ಲೇ ಹೆಣಗಾಟ
- ಸಂಸ್ಥೆಯಿಂದ ಬರಬೇಕಾದ ಸೌಲಭ್ಯ ಕೊಡದೆ ಕಾಟ ಕೊಡುತ್ತಿರುವ ಡಿಸಿ ಸಿದ್ದಪ್ಪ ಗಂಗಾಧರ್
ಕಲಬುರಗಿ: ಕಲ್ಯಾಣ ಕರ್ನಾಕಟ ರಸ್ತೆ ಸಾರಿಗೆ ನಿಗಮದ ಕಲಬುರಗಿ 2ರ ವಿಭಾಗೀಯ ನಿಯಂತ್ರಣಾಧಿಕಾರಿಯ ಹಣ ದಾಹಕ್ಕೆ ನೌಕರನೊಬ್ಬ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆಸ್ಪತ್ರೆ ಸೇರಿರುವ ಘಟನೆ ಬೆಳಕಿಗೆ ಬಂದಿದೆ.
ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದಪ್ಪ ಗಂಗಾಧರ್ನ ಹಣ ದಾಹಕ್ಕೆ ವಿಭಾಗದ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಹಿಮಾನ್ ಮಸ್ಕಿ ಎಂಬುವರು ಬಲಿಯಾಗಿದ್ದಾರೆ.
ಇತ್ತ ಈ ಡಿಸಿಯ ಕಿರುಕುಳ, ಹಿಂಸೆಯನ್ನು ಸಹಿಸಲಾಗದೆ ರಹಿಮಾನ್ ಮಸ್ಕಿ 15 ಜನವರಿ 2025ಕ್ಕೆ ಅನ್ವಯವಾಗುವಂತೆ ಸ್ವಯಂ ನಿವೃತ್ತಿ (VRS) ಪಡೆದುಕೊಂಡಿದ್ದಾರೆ. ಸ್ವಯಂ ನಿವೃತ್ತಿ ಪಡೆದು 2 ತಿಂಗಳ ಮೇಲಾದರೂ ಅವರಿಗೆ ನಿವೃತ್ತಿ ನಂತರ ಸಿಗಬೇಕಿರುವ ಪಿಎಫ್, ಗ್ರಾಚ್ಯುಟಿ, ಇಎಲ್ ಹಣ ಸೇರಿದಂತೆ ವಿವಿಧ ಸೌಲಭ್ಯಗಳ ಹಣವನ್ನು ಮಂಜೂರು ಮಾಡದೆ ಕಾಡುತ್ತಿದ್ದಾನೆ ಈ ಭ್ರಷ್ಟ ಅಧಿಕಾರಿ ಸಿದ್ದಪ್ಪ.
ಇದಕ್ಕೂ ಮುನ್ನಾ ಅಂದರೆ ರಹಿಮಾನ್ ಮಸ್ಕಿ ಅವರು ಸ್ವಯಂ ನಿವೃತ್ತ ಪಡೆಯುವುಕ್ಕೂ ಮುನ್ನಾ ಹಿರಿಯ ಸಹಾಯಕರಾಗಿ ಬಡ್ತಿ ಹೊಂದಬೇಕಿತ್ತು. ಆ ಬಡ್ತಿ ನೀಡುತ್ತೇನೆ, ಅದಕ್ಕಾಗಿ 2.25 ಲಕ್ಷ ರೂಪಾಯಿ ನೀನು ಕೊಡಬೇಕು ಎಂದು ಹೇಳಿ ಆ ಹಣವನ್ನೂ ಪಡೆದುಕೊಂಡಿದ್ದಾನೆ ಈ ಭ್ರಷ್ಟ.
ಭ್ರಷ್ಟ ಸಿದ್ದಪ್ಪನ ಜತೆಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಅವರ ಪಿಎ ಪ್ರಭು ಕೂಡ ಕೈ ಜೋಡಿಸಿದ್ದಾನೆ. ಪ್ರಭು ಕೂಡ ಡಿಸಿಗೆ ಹಣ ಕೊಡು ನಿನಗೆ ಬಡ್ತಿ ಕೊಡುತ್ತಾರೆ ಈ ಬಗ್ಗೆ ನಾನು ಕೂಡ ಮಾತನಾಡುತ್ತೇನೆ ಎಂದು ರಹಿಮಾನ್ಗೆ ಹೇಳಿ ಲಂಚ ಕೊಡುವುದಕ್ಕೆ ಪ್ರಚೋದನೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಮೊದಲೇ ಲಂಚ ಪಡೆಯುವುದೇ ಅಪರಾಧ ಆ ಲಂಚ ಪಡೆದ ಮೇಲಾದರೂ ಆತನಿಗೆ ಬಡ್ತಿ ಕೊಡಬೇಕಿತ್ತು. ಆದರೆ, ಆ ಕೆಲಸ ಕೂಡ ಮಾಡದೆ ಮತ್ತೆ ಕಿರುಕುಳ ನೀಡಿದ್ದಾನೆ ಡಿಸಿ ಸಿದ್ದಪ್ಪ. ಜತೆಗೆ ರಹಿಮಾನ್ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದಾಗ ಅವರಿಗೆ ಬರಬೇಕಿದ್ದ 1ತಿಂಗಳ ವೇತನವನ್ನು ಕೊಡದೆ ಗೈರುಹಾಜರಿ ತೋರಿಸಿ ಇವನ ಅಪ್ಪನ ಮನೆಯಿಂದ ಕೊಡುವ ರೀತಿಯಲ್ಲಿ ಕಿರುಕುಳ ನೀಡಿದ್ದಾನೆ.
ಇಷ್ಟೆಲ್ಲ ಆದ ಮೇಲೆ ನನಗೆ ಇವರ ಸಹವಾಸವೇ ಬೆಡ ಎಂದು ಸ್ವಯಂ ನಿವೃತ್ತಿಯನ್ನು 15ನೇ ಜನವರಿ 2025ರಿಂದ ಅನ್ವಯವಾಗುವಂತೆ ಪಡೆದುಕೊಂಡಿದ್ದರೂ ರಹಿಮಾನ್ಗೆ ನಿವೃತ್ತಿ ನಂತರ ಬರಬೇಕಿರುವ ಸೌಲಭ್ಯಗಳನ್ನು ಕೊಡದೆ ಈವರೆಗೂ ಕಾಡಿಸಿಕೊಂಡೆ ಬಂದಿದ್ದಾನೆ ಡಿಸಿ ಸಿದ್ದಪ್ಪ ಗಂಗಾಧರ್.
ಈ ಭ್ರಷ್ಟನಿಗೆ ಈತನ ಪಿಎ ರವಿ ಕುಲಕರಣಿ, ಎಂಡಿ ಪಿಎ ಪ್ರಭು ಸಾಥ್ ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೆ ಒಂದು ಆಶ್ಚರ್ಯ ಎಂದರೆ ಇಷ್ಟೆಲ್ಲ ಭ್ರಷ್ಟಾಚಾರ, ನೌಕರರಿಗೆ ಕಿರುಕುಳ ಕೊಡುತ್ತಿರುವುದು ಈ ಎಂಡಿ ರಾಚಪ್ಪ ಅವರಿಗೆ ಗೊತ್ತಾಗುತ್ತಿಲ್ಲವೆ. ಒಂದು ವೇಳೆ ಗೊತ್ತಿದ್ದರು ಜಾಣ ಮೌನ ವಹಿಸಿದ್ದಾರೆಯೇ ಎಂಡಿ ಎಂಬ ಅನುಮಾನ ಮೂಡುತ್ತಿದೆ.
ಇಂಥ ಭ್ರಷ್ಟರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಇರುವಾಗ ಅಂದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿರುವಾಗ ಕಾಪಾಡುವವರು ಯಾರು ಎಂಬುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ. ಇಂಥ ಅಧಿಕಾರಿಗಳ ವಿರುದ್ಧ ಸಂಬಂಧಪಟ್ಟ ಎಂಡಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಗಮನ ಹರಿಸಿ ಭ್ರಷ್ಟರಿಗೆ ಕಾನೂನಿನ ಪ್ರಕಾರ ತಕ್ಕ ಶಿಕ್ಷೆಗೆ ಗುರಿಪಡಿಸಬೇಕಿದೆ.
Related

You Might Also Like
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...