CRIMEನಮ್ಮಜಿಲ್ಲೆನಮ್ಮರಾಜ್ಯ

KKRTC: ಕಲಬುರಗಿ 2ರ ವಿಭಾಗೀಯ ನಿಯಂತ್ರಣಾಧಿಕಾರಿ ಲಂಚಾವತಾರಕ್ಕೆ ಬೇಸತ್ತು ಸ್ವಯಂ ನಿವೃತ್ತಿ ಪಡೆದ ಸಿಬ್ಬಂದಿ

ವಿಜಯಪಥ ಸಮಗ್ರ ಸುದ್ದಿ
  • VRS ಪಡೆದರೂ ನೆಮ್ಮದಿಕಳೆದುಕೊಂಡು ಇನ್ನೂ ಡಿಸಿ ಕಿರುಕುಳದಲ್ಲೇ ಹೆಣಗಾಟ
  • ಸಂಸ್ಥೆಯಿಂದ ಬರಬೇಕಾದ ಸೌಲಭ್ಯ ಕೊಡದೆ ಕಾಟ ಕೊಡುತ್ತಿರುವ ಡಿಸಿ ಸಿದ್ದಪ್ಪ ಗಂಗಾಧರ್‌

ಕಲಬುರಗಿ: ಕಲ್ಯಾಣ ಕರ್ನಾಕಟ ರಸ್ತೆ ಸಾರಿಗೆ ನಿಗಮದ ಕಲಬುರಗಿ 2ರ ವಿಭಾಗೀಯ ನಿಯಂತ್ರಣಾಧಿಕಾರಿಯ ಹಣ ದಾಹಕ್ಕೆ ನೌಕರನೊಬ್ಬ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆಸ್ಪತ್ರೆ ಸೇರಿರುವ ಘಟನೆ ಬೆಳಕಿಗೆ ಬಂದಿದೆ.

ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದಪ್ಪ ಗಂಗಾಧರ್‌ನ ಹಣ ದಾಹಕ್ಕೆ ವಿಭಾಗದ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಹಿಮಾನ್‌ ಮಸ್ಕಿ ಎಂಬುವರು ಬಲಿಯಾಗಿದ್ದಾರೆ.

ಇತ್ತ ಈ ಡಿಸಿಯ ಕಿರುಕುಳ, ಹಿಂಸೆಯನ್ನು ಸಹಿಸಲಾಗದೆ ರಹಿಮಾನ್‌ ಮಸ್ಕಿ 15 ಜನವರಿ 2025ಕ್ಕೆ ಅನ್ವಯವಾಗುವಂತೆ ಸ್ವಯಂ ನಿವೃತ್ತಿ (VRS) ಪಡೆದುಕೊಂಡಿದ್ದಾರೆ. ಸ್ವಯಂ ನಿವೃತ್ತಿ ಪಡೆದು 2 ತಿಂಗಳ ಮೇಲಾದರೂ ಅವರಿಗೆ ನಿವೃತ್ತಿ ನಂತರ ಸಿಗಬೇಕಿರುವ ಪಿಎಫ್‌, ಗ್ರಾಚ್ಯುಟಿ, ಇಎಲ್‌ ಹಣ ಸೇರಿದಂತೆ ವಿವಿಧ ಸೌಲಭ್ಯಗಳ ಹಣವನ್ನು ಮಂಜೂರು ಮಾಡದೆ ಕಾಡುತ್ತಿದ್ದಾನೆ ಈ ಭ್ರಷ್ಟ ಅಧಿಕಾರಿ ಸಿದ್ದಪ್ಪ.

ಇದಕ್ಕೂ ಮುನ್ನಾ ಅಂದರೆ ರಹಿಮಾನ್‌ ಮಸ್ಕಿ ಅವರು ಸ್ವಯಂ ನಿವೃತ್ತ ಪಡೆಯುವುಕ್ಕೂ ಮುನ್ನಾ ಹಿರಿಯ ಸಹಾಯಕರಾಗಿ ಬಡ್ತಿ ಹೊಂದಬೇಕಿತ್ತು. ಆ ಬಡ್ತಿ ನೀಡುತ್ತೇನೆ, ಅದಕ್ಕಾಗಿ 2.25 ಲಕ್ಷ ರೂಪಾಯಿ ನೀನು ಕೊಡಬೇಕು ಎಂದು ಹೇಳಿ ಆ ಹಣವನ್ನೂ ಪಡೆದುಕೊಂಡಿದ್ದಾನೆ ಈ ಭ್ರಷ್ಟ.

ಭ್ರಷ್ಟ ಸಿದ್ದಪ್ಪನ ಜತೆಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಅವರ ಪಿಎ ಪ್ರಭು ಕೂಡ ಕೈ ಜೋಡಿಸಿದ್ದಾನೆ. ಪ್ರಭು ಕೂಡ ಡಿಸಿಗೆ ಹಣ ಕೊಡು ನಿನಗೆ ಬಡ್ತಿ ಕೊಡುತ್ತಾರೆ ಈ ಬಗ್ಗೆ ನಾನು ಕೂಡ ಮಾತನಾಡುತ್ತೇನೆ ಎಂದು ರಹಿಮಾನ್‌ಗೆ ಹೇಳಿ ಲಂಚ ಕೊಡುವುದಕ್ಕೆ ಪ್ರಚೋದನೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಮೊದಲೇ ಲಂಚ ಪಡೆಯುವುದೇ ಅಪರಾಧ ಆ ಲಂಚ ಪಡೆದ ಮೇಲಾದರೂ ಆತನಿಗೆ ಬಡ್ತಿ ಕೊಡಬೇಕಿತ್ತು. ಆದರೆ, ಆ ಕೆಲಸ ಕೂಡ ಮಾಡದೆ ಮತ್ತೆ ಕಿರುಕುಳ ನೀಡಿದ್ದಾನೆ ಡಿಸಿ ಸಿದ್ದಪ್ಪ. ಜತೆಗೆ ರಹಿಮಾನ್‌ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದಾಗ ಅವರಿಗೆ ಬರಬೇಕಿದ್ದ 1ತಿಂಗಳ ವೇತನವನ್ನು ಕೊಡದೆ ಗೈರುಹಾಜರಿ ತೋರಿಸಿ ಇವನ ಅಪ್ಪನ ಮನೆಯಿಂದ ಕೊಡುವ ರೀತಿಯಲ್ಲಿ ಕಿರುಕುಳ ನೀಡಿದ್ದಾನೆ.

ಇಷ್ಟೆಲ್ಲ ಆದ ಮೇಲೆ ನನಗೆ ಇವರ ಸಹವಾಸವೇ ಬೆಡ ಎಂದು ಸ್ವಯಂ ನಿವೃತ್ತಿಯನ್ನು 15ನೇ ಜನವರಿ 2025ರಿಂದ ಅನ್ವಯವಾಗುವಂತೆ ಪಡೆದುಕೊಂಡಿದ್ದರೂ ರಹಿಮಾನ್‌ಗೆ ನಿವೃತ್ತಿ ನಂತರ ಬರಬೇಕಿರುವ ಸೌಲಭ್ಯಗಳನ್ನು ಕೊಡದೆ ಈವರೆಗೂ ಕಾಡಿಸಿಕೊಂಡೆ ಬಂದಿದ್ದಾನೆ ಡಿಸಿ ಸಿದ್ದಪ್ಪ ಗಂಗಾಧರ್‌.

ಈ ಭ್ರಷ್ಟನಿಗೆ ಈತನ ಪಿಎ ರವಿ ಕುಲಕರಣಿ, ಎಂಡಿ ಪಿಎ ಪ್ರಭು ಸಾಥ್‌ ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೆ ಒಂದು ಆಶ್ಚರ್ಯ ಎಂದರೆ ಇಷ್ಟೆಲ್ಲ ಭ್ರಷ್ಟಾಚಾರ, ನೌಕರರಿಗೆ ಕಿರುಕುಳ ಕೊಡುತ್ತಿರುವುದು ಈ ಎಂಡಿ ರಾಚಪ್ಪ ಅವರಿಗೆ ಗೊತ್ತಾಗುತ್ತಿಲ್ಲವೆ. ಒಂದು ವೇಳೆ ಗೊತ್ತಿದ್ದರು ಜಾಣ ಮೌನ ವಹಿಸಿದ್ದಾರೆಯೇ ಎಂಡಿ ಎಂಬ ಅನುಮಾನ ಮೂಡುತ್ತಿದೆ.

ಇಂಥ ಭ್ರಷ್ಟರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಇರುವಾಗ ಅಂದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿರುವಾಗ ಕಾಪಾಡುವವರು ಯಾರು ಎಂಬುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ. ಇಂಥ ಅಧಿಕಾರಿಗಳ ವಿರುದ್ಧ ಸಂಬಂಧಪಟ್ಟ ಎಂಡಿ, ಸಾರಿಗೆ  ಸಚಿವ ರಾಮಲಿಂಗಾರೆಡ್ಡಿ ಅವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಗಮನ ಹರಿಸಿ ಭ್ರಷ್ಟರಿಗೆ ಕಾನೂನಿನ ಪ್ರಕಾರ ತಕ್ಕ ಶಿಕ್ಷೆಗೆ ಗುರಿಪಡಿಸಬೇಕಿದೆ.

Deva
the authorDeva

Leave a Reply

error: Content is protected !!
Latest news
NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ ಸಾರಿಗೆ ನೌಕರರಿಗೆ ಬಿಡುಗಡೆಯಾಗಿರುವ 450 ಕೋಟಿ ರೂ.ನಲ್ಲಿ KSRTC ನೌಕರರಿಗೆ ಮೇ 11ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ... ಮೇ 20ರ ಪೂರ್ವ ನಿರ್ಧಾರಿತ ಮುಷ್ಕರ ಮಾಡಿ ಪೌರುಷ ತೋರಿಸಿ: ಜಂಟಿ ಸಮಿತಿಗೆ ಒಕ್ಕೂಟದ ಜಯರಾಮ್‌ ರಾಥೋಡ್‌ ಸವಾಲ್‌ KSRTC ನೌಕರರ ಕೂಟ- ಜಂಟಿ ಸಮಿತಿ ಸಭೆ ಸೇರುವ ಬಗ್ಗೆ ಎರಡು ದಿನದಲ್ಲಿ ನಿರ್ಣಯ: ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲದ ಅಡ್ಡಿ: ರಾಜ್ಯಪಾಲರ ಪವರ್ ಏನು, ಸುಪ್ರೀಂಕೋರ್ಟ್ ವಕೀಲರಾದ ಶಿವರಾಜು ಏನು ಹೇಳುತ್ತಾ... ರಾಜೀನಾಮೆ ನೀಡದೇ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ- ಸರ್ಕಾರ ವಜಾಗೊಳಿಸಿದ ರಾಜ್ಯಪಾಲ KSRTC: ನಿವೃತ್ತರಾದ 25ದಿನದೊಳಗೆ ಭವಿಷ್ಯ ನಿಧಿ ಪಾವತಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ವಿಳಂಬದ ಬಡ್ಡಿ ಬರಿಸಬೇಕು- ಪ... ಅನ್ನದಾತರಿಗೆ ಸಾಲ ಕೊಡಲು ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿ ಕೈಬಿಡಬೇಕು: ಆರ್‌ಬಿಐ ಅಧಿಕಾರಿಗಳಿಗೆ ಕುರುಬೂರು ಶಾಂತಕ... ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು