KKRTC: ಕಲಬುರಗಿ 2ರ ವಿಭಾಗೀಯ ನಿಯಂತ್ರಣಾಧಿಕಾರಿ ಲಂಚಾವತಾರಕ್ಕೆ ಬೇಸತ್ತು ಸ್ವಯಂ ನಿವೃತ್ತಿ ಪಡೆದ ಸಿಬ್ಬಂದಿ

- VRS ಪಡೆದರೂ ನೆಮ್ಮದಿಕಳೆದುಕೊಂಡು ಇನ್ನೂ ಡಿಸಿ ಕಿರುಕುಳದಲ್ಲೇ ಹೆಣಗಾಟ
- ಸಂಸ್ಥೆಯಿಂದ ಬರಬೇಕಾದ ಸೌಲಭ್ಯ ಕೊಡದೆ ಕಾಟ ಕೊಡುತ್ತಿರುವ ಡಿಸಿ ಸಿದ್ದಪ್ಪ ಗಂಗಾಧರ್
ಕಲಬುರಗಿ: ಕಲ್ಯಾಣ ಕರ್ನಾಕಟ ರಸ್ತೆ ಸಾರಿಗೆ ನಿಗಮದ ಕಲಬುರಗಿ 2ರ ವಿಭಾಗೀಯ ನಿಯಂತ್ರಣಾಧಿಕಾರಿಯ ಹಣ ದಾಹಕ್ಕೆ ನೌಕರನೊಬ್ಬ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆಸ್ಪತ್ರೆ ಸೇರಿರುವ ಘಟನೆ ಬೆಳಕಿಗೆ ಬಂದಿದೆ.
ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದಪ್ಪ ಗಂಗಾಧರ್ನ ಹಣ ದಾಹಕ್ಕೆ ವಿಭಾಗದ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಹಿಮಾನ್ ಮಸ್ಕಿ ಎಂಬುವರು ಬಲಿಯಾಗಿದ್ದಾರೆ.
ಇತ್ತ ಈ ಡಿಸಿಯ ಕಿರುಕುಳ, ಹಿಂಸೆಯನ್ನು ಸಹಿಸಲಾಗದೆ ರಹಿಮಾನ್ ಮಸ್ಕಿ 15 ಜನವರಿ 2025ಕ್ಕೆ ಅನ್ವಯವಾಗುವಂತೆ ಸ್ವಯಂ ನಿವೃತ್ತಿ (VRS) ಪಡೆದುಕೊಂಡಿದ್ದಾರೆ. ಸ್ವಯಂ ನಿವೃತ್ತಿ ಪಡೆದು 2 ತಿಂಗಳ ಮೇಲಾದರೂ ಅವರಿಗೆ ನಿವೃತ್ತಿ ನಂತರ ಸಿಗಬೇಕಿರುವ ಪಿಎಫ್, ಗ್ರಾಚ್ಯುಟಿ, ಇಎಲ್ ಹಣ ಸೇರಿದಂತೆ ವಿವಿಧ ಸೌಲಭ್ಯಗಳ ಹಣವನ್ನು ಮಂಜೂರು ಮಾಡದೆ ಕಾಡುತ್ತಿದ್ದಾನೆ ಈ ಭ್ರಷ್ಟ ಅಧಿಕಾರಿ ಸಿದ್ದಪ್ಪ.
ಇದಕ್ಕೂ ಮುನ್ನಾ ಅಂದರೆ ರಹಿಮಾನ್ ಮಸ್ಕಿ ಅವರು ಸ್ವಯಂ ನಿವೃತ್ತ ಪಡೆಯುವುಕ್ಕೂ ಮುನ್ನಾ ಹಿರಿಯ ಸಹಾಯಕರಾಗಿ ಬಡ್ತಿ ಹೊಂದಬೇಕಿತ್ತು. ಆ ಬಡ್ತಿ ನೀಡುತ್ತೇನೆ, ಅದಕ್ಕಾಗಿ 2.25 ಲಕ್ಷ ರೂಪಾಯಿ ನೀನು ಕೊಡಬೇಕು ಎಂದು ಹೇಳಿ ಆ ಹಣವನ್ನೂ ಪಡೆದುಕೊಂಡಿದ್ದಾನೆ ಈ ಭ್ರಷ್ಟ.
ಭ್ರಷ್ಟ ಸಿದ್ದಪ್ಪನ ಜತೆಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಅವರ ಪಿಎ ಪ್ರಭು ಕೂಡ ಕೈ ಜೋಡಿಸಿದ್ದಾನೆ. ಪ್ರಭು ಕೂಡ ಡಿಸಿಗೆ ಹಣ ಕೊಡು ನಿನಗೆ ಬಡ್ತಿ ಕೊಡುತ್ತಾರೆ ಈ ಬಗ್ಗೆ ನಾನು ಕೂಡ ಮಾತನಾಡುತ್ತೇನೆ ಎಂದು ರಹಿಮಾನ್ಗೆ ಹೇಳಿ ಲಂಚ ಕೊಡುವುದಕ್ಕೆ ಪ್ರಚೋದನೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಮೊದಲೇ ಲಂಚ ಪಡೆಯುವುದೇ ಅಪರಾಧ ಆ ಲಂಚ ಪಡೆದ ಮೇಲಾದರೂ ಆತನಿಗೆ ಬಡ್ತಿ ಕೊಡಬೇಕಿತ್ತು. ಆದರೆ, ಆ ಕೆಲಸ ಕೂಡ ಮಾಡದೆ ಮತ್ತೆ ಕಿರುಕುಳ ನೀಡಿದ್ದಾನೆ ಡಿಸಿ ಸಿದ್ದಪ್ಪ. ಜತೆಗೆ ರಹಿಮಾನ್ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದಾಗ ಅವರಿಗೆ ಬರಬೇಕಿದ್ದ 1ತಿಂಗಳ ವೇತನವನ್ನು ಕೊಡದೆ ಗೈರುಹಾಜರಿ ತೋರಿಸಿ ಇವನ ಅಪ್ಪನ ಮನೆಯಿಂದ ಕೊಡುವ ರೀತಿಯಲ್ಲಿ ಕಿರುಕುಳ ನೀಡಿದ್ದಾನೆ.
ಇಷ್ಟೆಲ್ಲ ಆದ ಮೇಲೆ ನನಗೆ ಇವರ ಸಹವಾಸವೇ ಬೆಡ ಎಂದು ಸ್ವಯಂ ನಿವೃತ್ತಿಯನ್ನು 15ನೇ ಜನವರಿ 2025ರಿಂದ ಅನ್ವಯವಾಗುವಂತೆ ಪಡೆದುಕೊಂಡಿದ್ದರೂ ರಹಿಮಾನ್ಗೆ ನಿವೃತ್ತಿ ನಂತರ ಬರಬೇಕಿರುವ ಸೌಲಭ್ಯಗಳನ್ನು ಕೊಡದೆ ಈವರೆಗೂ ಕಾಡಿಸಿಕೊಂಡೆ ಬಂದಿದ್ದಾನೆ ಡಿಸಿ ಸಿದ್ದಪ್ಪ ಗಂಗಾಧರ್.
ಈ ಭ್ರಷ್ಟನಿಗೆ ಈತನ ಪಿಎ ರವಿ ಕುಲಕರಣಿ, ಎಂಡಿ ಪಿಎ ಪ್ರಭು ಸಾಥ್ ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೆ ಒಂದು ಆಶ್ಚರ್ಯ ಎಂದರೆ ಇಷ್ಟೆಲ್ಲ ಭ್ರಷ್ಟಾಚಾರ, ನೌಕರರಿಗೆ ಕಿರುಕುಳ ಕೊಡುತ್ತಿರುವುದು ಈ ಎಂಡಿ ರಾಚಪ್ಪ ಅವರಿಗೆ ಗೊತ್ತಾಗುತ್ತಿಲ್ಲವೆ. ಒಂದು ವೇಳೆ ಗೊತ್ತಿದ್ದರು ಜಾಣ ಮೌನ ವಹಿಸಿದ್ದಾರೆಯೇ ಎಂಡಿ ಎಂಬ ಅನುಮಾನ ಮೂಡುತ್ತಿದೆ.
ಇಂಥ ಭ್ರಷ್ಟರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಇರುವಾಗ ಅಂದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿರುವಾಗ ಕಾಪಾಡುವವರು ಯಾರು ಎಂಬುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ. ಇಂಥ ಅಧಿಕಾರಿಗಳ ವಿರುದ್ಧ ಸಂಬಂಧಪಟ್ಟ ಎಂಡಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಗಮನ ಹರಿಸಿ ಭ್ರಷ್ಟರಿಗೆ ಕಾನೂನಿನ ಪ್ರಕಾರ ತಕ್ಕ ಶಿಕ್ಷೆಗೆ ಗುರಿಪಡಿಸಬೇಕಿದೆ.
Related

You Might Also Like
ಸಾರಿಗೆ ನೌಕರರ ಮುಷ್ಕರದ ಬಗ್ಗೆ ನನ್ನ ಅಭಿಪ್ರಾಯ-ಅನಿಸಿಕೆಗಳು
ಸಾರಿಗೆ ಮುಷ್ಕರ ಎಂಬುದು ಎಲ್ಲಾ ಅಧಿಕಾರಿಗಳು ಮತ್ತು ನೌಕರ ಸಿಬ್ಬಂದಿಗಳ ವೇತನಕ್ಕೆ ಸಂಬಂಧಪಟ್ಟಿರುವುದಾಗಿರುತ್ತದೆ.ಎಲ್ಲರೂ ಒಗ್ಗಟ್ಟಿನಿಂದ ಒಟ್ಟಾಗಿ ಮುಷ್ಕರ ಮಾಡಬೇಕಾಗಿದೆ. ಆದರೆ ನಮ್ಮ ನಿಗಮದಲ್ಲಿ ಅಧಿಕಾರಿಗಳು ಮತ್ತು ಆಡಳಿತ...
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...
ಬೀಡನಹಳ್ಳಿ: ಸಂಭ್ರಮದ ಚಾಮುಂಡೇಶ್ವರಿ ವರ್ಧಂತಿ – ಭಕ್ತರಿಗೆ ಅನ್ನಸಂತರ್ಪಣೆ
ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು...
ಕೊಪ್ಪಳ: ಭಾರೀ ಮಳೆಗೆ ಕುಸಿದ ಮನೆ ಒಂದೂವರೆ ವರ್ಷದ ಮಗು ಸಾವು, 6 ಮಂದಿಗೆ ಗಾಯ
ಕೊಪ್ಪಳ: ಭಾರೀ ಮಳೆಗೆ ಮನೆ ಕುಸಿದು ಒಂದೂವರೆ ವರ್ಷದ ಮಗುವೊಂದು ಮೃಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮನೆ...
ದ.ಕ.ದಲ್ಲಿ ವರುಣನ ಅಬ್ಬರ- ಮಣ್ಣಗುಂಡಿ ಬಳಿ ಗುಡ್ಡಕುಸಿತ: BM ಹೆದ್ದಾರಿ ಬಂದ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಆದರೂ ಧರ್ಮಸ್ಥಳ,...
ಅತ್ತಹಳ್ಳಿಯ ಎ.ಸಿ.ಲಿಂಗೇಗೌಡರ ಪುತ್ರ ರಾಘವ ಲಿಂಗೇಗೌಡ ನಿಧನ
ಮೈಸೂರು: ನಗರದ ತಿ.ನರಸೀಪುರ ರಸ್ತೆಯ ಜಿ.ಎಲ್.ಗಾರ್ಡನ್ ನಿವಾಸಿ ಲಂಡನ್ನಲ್ಲಿ ಕೆಲಸದಲ್ಲಿದ್ದ ರಾಘವ ಲಿಂಗೇಗೌಡ (49) ಬುಧವಾರ ಸಂಜೆ ನಿಧನರಾದರು. ಮೂಲತಃ ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಅತ್ತಹಳ್ಳಿ...
BMTC ಚಾಲನಾ ಸಿಬ್ಬಂದಿಗಳ ಡ್ಯೂಟಿ ರೋಟಾ ಕೌನ್ಸೆಲಿಂಗ್ಗೆ ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ, ವಾಯುವ್ಯ ಹಾಗೂ ಕೇಂದ್ರೀಯ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲನಾ ಸಿಬ್ಬಂದಿಗಳನ್ನು ಹೊಸದಾಗಿ ಕೌನ್ಸೆಲಿಂಗ್...