NEWSನಮ್ಮಜಿಲ್ಲೆನಮ್ಮರಾಜ್ಯ

KKRTC:  ₹6 ಸಾವಿರ, ಮೊಬೈಲ್‌ ಇದ್ದ ಬ್ಯಾಗ್‌ ಬಿಟ್ಟುಹೋಗಿದ್ದ ಪ್ರಯಾಣಿಕರು- ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲನಾ ಸಿಬ್ಬಂದಿ

ವಿಜಯಪಥ ಸಮಗ್ರ ಸುದ್ದಿ

ಯಲಬುರ್ಗಾ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ಯಲಬುರ್ಗಾ ಘಟಕದ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟುಹೋಗಿದ್ದ ಬ್ಯಾಗನ್ನ ವಾರಸುದಾರರಿಗೆ ಮರಳಿಸುವ ಮೂಲಕ ಚಾಲನಾ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಯಲಬುರ್ಗಾ ಘಟಕದ ವಾಹನ (KA 37 F 0791) ಬೆಂಗಳೂರಿಂದ ಯಲಬುರ್ಗಕ್ಕೆ ಹೋಗುವಾಗ ಸರಸ್ವತಿ ಎಂಬ ಮಹಿಳಾ ಪ್ರಯಾಣಿಕರು ಚಿತ್ರದುರ್ಗದಿಂದ ಹೊಸಪೇಟೆಗೆ ಪ್ರಯಾಣ ಚೀಟಿಯನ್ನು ಪಡೆದಿದ್ದರು.

ಆದರೆ ಅವರು ಮಾರ್ಗ ಮಧ್ಯೆ ಕಾನಹೊಸಳಿಯಲ್ಲಿ ಇಳಿದಿದ್ದು ಈ ವೇಳೆ ಅವರು ತೌು ತಂದಿದ್ದ ಬ್ಯಾಗನ್ನು ಬಸ್ಸಿನಲ್ಲೇ ಮರೆತು ಬಿಟ್ಟುಹೋಗಿದ್ದರು. ಕಾರಣ ವಾರಸುದಾರರ ಸಂಬಂಧಿಕರು ಹೊಸಪೇಟೆಗೆ ಬಂದು ನಿರ್ವಾಹಕರನ್ನು ವಿಚಾರಿಸಿದಾಗ ನಿರ್ವಾಹಕರು ಬಸ್ಸಿನಲ್ಲಿದ್ದ ಬ್ಯಾಗನ್ನು ಪರಿಶೀಲಿಸಿ ಅದನ್ನು ಹೊಸಪೇಟೆ ಬಸ್ ನಿಲ್ದಾಣ ಅಧಿಕಾರಿ ಹತ್ತಿರ ತೆಗೆದುಕೊಂಡು ಹೋದರು.

ಬಳಿಕ ಬಸ್ ನಿಲ್ದಾಣ ಅಧಿಕಾರಿ ಅವರ ಸಮ್ಮುಖದಲ್ಲಿ ಬ್ಯಾಗನ್ನು ಪರಿಶೀಲಿಸಿ ಅದರಲ್ಲಿ ಮಹಿಳೆಯ ಆಧಾರ್ ಕಾರ್ಡ್ ಕೀಪ್ಯಾಡ್ ಮೊಬೈಲ್ ಹಾಗೂ ಒಂದು ಪರ್ಸಿದ್ದು ಅದರಲ್ಲಿ ಆರು ಸಾವಿರ ರೂಪಾಯಿ ಇತ್ತು. ಈ ಎಲ್ಲವನ್ನು ವಾರಸುದಾರರಿಗೆ ತಲುಪಿಸಲಾಯಿತು.

ಈ ವೇಳೆ ಚಾಲಕ ಮತ್ತು ನಿರ್ವಾಹಕರು ಇದ್ದು ವಾರಸುದಾರರಿಗೆ ನೀಡುವ ಮೂಲಕ ಪ್ರಾಮಾಣಿಕತೆ ಮೆರೆದ ಚಾಲನಾ ಸಿಬ್ಬಂದಿಯನ್ನು ಬಸ್ ನಿಲ್ದಾಣ ಅಧಿಕಾರಿ ಶ್ಲಾಘಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ