ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಕೊಪ್ಪಳ ವಿಭಾಗದ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 19 ತಾಂತ್ರಿಕ ಸಹಾಯಕರಿಗೆ ಮುಂಬಡ್ತಿ ನೀಡಿ ಸ್ಥಳ ನಿಯೋಜನೆಯೊಂದಿಗೆ ವರ್ಗಾವಣೆ ಮಾಡಿ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದೇ ಜೂನ್24ರಂದು ಆದೇಶ ಹೊರಡಿಸಿರುವ ಡಿಸಿ ಅವರು, ತಾಂತ್ರಿಕ ಸಹಾಯಕರಾಗಿದ್ದ 19 ಮಂದಿಯನ್ನು ಕುಶಲಕರ್ಮಿ (ದರ್ಜೆ-03ರ) ಹುದ್ದೆಗೆ ಸ್ಥಳೀಯ ವೃಂದದಡಿಯಲ್ಲಿ ಮುಂಬಡ್ತಿ ನೀಡಲು ಉಲ್ಲೇಖ-2 ವಿಭಾಗ ಮುಂಬಡ್ತಿ ಸಮಿತಿ ಸಭೆ ಶಿಫಾರಸು ಮಾಡಿತ್ತು.
ಇದರನ್ವಯ ತಾಂತ್ರಿಕ ಸಹಾಯಕರವರಿಗೆ ಸಹಾಯಕ ಕುಶಲಕರ್ಮಿ ಹುದ್ದೆಗೆ ಮುಂಬಡ್ತಿ ನೀಡಲಾಗಿದ್ದು, ಹೀಗಾಗಿ ಕಾರ್ಯನಿರ್ವಹಣೆ (ಅಫಿಷಿಯೇಟಿಂಗ್) ಆಧಾರದ ಮೇಲೆ ಕಾರ್ಯನಿರ್ವಹಿಸಲು ಆದೇಶಿಸಿದ್ದು, ಈ 19 ಮಂದಿಗೂ ವೃತ್ತಿ ನಿಗದಿಪಡಿಸಿ, ಅದರಂತೆ ಸ್ಥಳ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂಬಡ್ತಿ ಪಡೆದವರ ವಿವರ: ಚಂದ್ರಶೇಖರ ಜೋತೆಣ್ಣವರ Auto Mechanic ಯಲಬುರ್ಗಾದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ. ಇನ್ನು ಮಂಜುನಾಥ ಪತ್ತಾರ್ Auto Mechanic ವಿಭಾಗೀಯ ಕಾರ್ಯಗಾರ. ದಯಾನಂದ ದೇವಾಂಗಮಠ ಮತ್ತು ಈಶಪ್ಪ ದಂಡಮ್ಮನವರ್ Auto Mechanic ಕುಕನೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ.
ವಿಜಯಕುಮಾರ ಹುದ್ದಾರ್ Auto Mechanic ಗಂಗಾವತಿಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ. ಶಿವಕುಮಾರ ನೂಲ್ವಿ Auto Mechanic ಯಲಬುರ್ಗಾದಿಂದ ಗಂಗಾವತಿಗೆ ವರ್ಗಾವಣೆ ಮಾಡಲಾಗಿದೆ. ಸಂಗಪ್ಪ (ಪ.ಪಂ) (ಸ್ವಂತ ಅರ್ಹತೆ) Auto Welder ವಿಭಾಗೀಯ ಕಾರ್ಯಗಾರದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ.
ಬಾಳನಗೌಡ (ಪ.ಪಂ) (ಸ್ವಂತ ಅರ್ಹತೆ) Auto Mechanic ಕುಷ್ಠಗಿಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ. ಶರಣಬಸಪ್ಪ ಹೊಳೆ Auto Mechanic ವಿಭಾಗೀಯ ಕಾರ್ಯಗಾರದಿಂದ ಗಂಗಾವತಿಗೆ ವರ್ಗಾವಣೆ ಮಾಡಲಾಗಿದೆ. ಶರಣಪ್ಪ ಭೀಮಪ್ಪ ಪೂಜಾರ (ಪ.ಪಂ) (ಸ್ವಂತ ಅರ್ಹತೆ) Auto Electrician ವಿಭಾಗೀಯ ಕಾರ್ಯಗಾರದಿಂದ ಯಲಬುರ್ಗಾಕ್ಕೆ ವರ್ಗಾವಣೆ ಮಾಡಲಾಗಿದೆ.
ವೀರಣ್ಣ ಶ್ರೀಶೈಲಪ್ಪ ಅಂಗಡಿ Auto Welder ಯಲಬುರ್ಗಾದಿಂದ ವಿಭಾಗೀಯ ಕಾರ್ಯಗಾರಕ್ಕೂ ಹಾಗೂ ಶ್ರೀನಿಧಿ ಕೆ. Auto Mechanic ವಿಭಾಗೀಯ ಕಾರ್ಯಗಾರದಿಂದ ಗಂಗಾವತಿಗೆ ವರ್ಗಾವಣೆ ಮಾಡಲಾಗಿದೆ. ಅದರಂತೆ ಸಾಲ್ಮನಿ ಲಕ್ಷ್ಮಣ Auto Welder ಅವರನ್ನು ಕೊಪ್ಪಳದಿಂದ ಗಂಗಾವತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪರಶುರಾಮ (ಪ.ಜಾ) (ಕೆಳಹಂತದಿಂದ) Auto Mechanic ಕುಷ್ಠಗಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ. ಗಂಗಾಧರ ನಾಯ್ (ಪ.ಜಾ) (ಕೆಳಹಂತದಿಂದ) Auto Mechanic ಯಲಬುರ್ಗಾದಿಂದ ಗಂಗಾವತಿಗೆ ವರ್ಗಾವಣೆ ಮಾಡಲಾಗಿದೆ.
ನಾಗೇಂದ್ರ ನಾಯ್ಕ್ಎಲ್.ಎಂ.(ಪ.ಜಾ) (ಕೆಳಹಂತದಿಂದ) Auto Welder ಯಲಬುರ್ಗಾದಿಂದ ಕುಷ್ಠಗಿಗೆ ವರ್ಗಾವಣೆ ಮಾಡಲಾಗಿದ್ದು, ಗೋಪಾಲ (ಪ.ಜಾ) (ಕೆಳಹಂತದಿಂದ) Auto Electrician ಕೊಪ್ಪಳದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ.
ಪವಾಡೆಪ್ಪ ದೊಡ್ಡಮನಿ (ಪ.ಜಾ) (ಕೆಳಹಂತದಿಂದ) Auto Mechinist ಕೊಪ್ಪಳದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ. ಕೌಶಲ್ಯ ಗಿರಿವಾಳ (ಪ.ಜಾ) (ಕೆಳಹಂತದಿಂದ) Auto Painter ಅವರನ್ನು ಕೊಪ್ಪಳದಿಂದ ಯಲಬುರ್ಗಾಕ್ಕೆ ಮುಂಬಡ್ತಿಯೊಂದಿಗೆ ವರ್ಗಾವಣೆ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.
Related

You Might Also Like
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...