ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಕೊಪ್ಪಳ ವಿಭಾಗದ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 19 ತಾಂತ್ರಿಕ ಸಹಾಯಕರಿಗೆ ಮುಂಬಡ್ತಿ ನೀಡಿ ಸ್ಥಳ ನಿಯೋಜನೆಯೊಂದಿಗೆ ವರ್ಗಾವಣೆ ಮಾಡಿ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದೇ ಜೂನ್24ರಂದು ಆದೇಶ ಹೊರಡಿಸಿರುವ ಡಿಸಿ ಅವರು, ತಾಂತ್ರಿಕ ಸಹಾಯಕರಾಗಿದ್ದ 19 ಮಂದಿಯನ್ನು ಕುಶಲಕರ್ಮಿ (ದರ್ಜೆ-03ರ) ಹುದ್ದೆಗೆ ಸ್ಥಳೀಯ ವೃಂದದಡಿಯಲ್ಲಿ ಮುಂಬಡ್ತಿ ನೀಡಲು ಉಲ್ಲೇಖ-2 ವಿಭಾಗ ಮುಂಬಡ್ತಿ ಸಮಿತಿ ಸಭೆ ಶಿಫಾರಸು ಮಾಡಿತ್ತು.
ಇದರನ್ವಯ ತಾಂತ್ರಿಕ ಸಹಾಯಕರವರಿಗೆ ಸಹಾಯಕ ಕುಶಲಕರ್ಮಿ ಹುದ್ದೆಗೆ ಮುಂಬಡ್ತಿ ನೀಡಲಾಗಿದ್ದು, ಹೀಗಾಗಿ ಕಾರ್ಯನಿರ್ವಹಣೆ (ಅಫಿಷಿಯೇಟಿಂಗ್) ಆಧಾರದ ಮೇಲೆ ಕಾರ್ಯನಿರ್ವಹಿಸಲು ಆದೇಶಿಸಿದ್ದು, ಈ 19 ಮಂದಿಗೂ ವೃತ್ತಿ ನಿಗದಿಪಡಿಸಿ, ಅದರಂತೆ ಸ್ಥಳ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂಬಡ್ತಿ ಪಡೆದವರ ವಿವರ: ಚಂದ್ರಶೇಖರ ಜೋತೆಣ್ಣವರ Auto Mechanic ಯಲಬುರ್ಗಾದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ. ಇನ್ನು ಮಂಜುನಾಥ ಪತ್ತಾರ್ Auto Mechanic ವಿಭಾಗೀಯ ಕಾರ್ಯಗಾರ. ದಯಾನಂದ ದೇವಾಂಗಮಠ ಮತ್ತು ಈಶಪ್ಪ ದಂಡಮ್ಮನವರ್ Auto Mechanic ಕುಕನೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ.
ವಿಜಯಕುಮಾರ ಹುದ್ದಾರ್ Auto Mechanic ಗಂಗಾವತಿಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ. ಶಿವಕುಮಾರ ನೂಲ್ವಿ Auto Mechanic ಯಲಬುರ್ಗಾದಿಂದ ಗಂಗಾವತಿಗೆ ವರ್ಗಾವಣೆ ಮಾಡಲಾಗಿದೆ. ಸಂಗಪ್ಪ (ಪ.ಪಂ) (ಸ್ವಂತ ಅರ್ಹತೆ) Auto Welder ವಿಭಾಗೀಯ ಕಾರ್ಯಗಾರದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ.
ಬಾಳನಗೌಡ (ಪ.ಪಂ) (ಸ್ವಂತ ಅರ್ಹತೆ) Auto Mechanic ಕುಷ್ಠಗಿಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ. ಶರಣಬಸಪ್ಪ ಹೊಳೆ Auto Mechanic ವಿಭಾಗೀಯ ಕಾರ್ಯಗಾರದಿಂದ ಗಂಗಾವತಿಗೆ ವರ್ಗಾವಣೆ ಮಾಡಲಾಗಿದೆ. ಶರಣಪ್ಪ ಭೀಮಪ್ಪ ಪೂಜಾರ (ಪ.ಪಂ) (ಸ್ವಂತ ಅರ್ಹತೆ) Auto Electrician ವಿಭಾಗೀಯ ಕಾರ್ಯಗಾರದಿಂದ ಯಲಬುರ್ಗಾಕ್ಕೆ ವರ್ಗಾವಣೆ ಮಾಡಲಾಗಿದೆ.
ವೀರಣ್ಣ ಶ್ರೀಶೈಲಪ್ಪ ಅಂಗಡಿ Auto Welder ಯಲಬುರ್ಗಾದಿಂದ ವಿಭಾಗೀಯ ಕಾರ್ಯಗಾರಕ್ಕೂ ಹಾಗೂ ಶ್ರೀನಿಧಿ ಕೆ. Auto Mechanic ವಿಭಾಗೀಯ ಕಾರ್ಯಗಾರದಿಂದ ಗಂಗಾವತಿಗೆ ವರ್ಗಾವಣೆ ಮಾಡಲಾಗಿದೆ. ಅದರಂತೆ ಸಾಲ್ಮನಿ ಲಕ್ಷ್ಮಣ Auto Welder ಅವರನ್ನು ಕೊಪ್ಪಳದಿಂದ ಗಂಗಾವತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪರಶುರಾಮ (ಪ.ಜಾ) (ಕೆಳಹಂತದಿಂದ) Auto Mechanic ಕುಷ್ಠಗಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ. ಗಂಗಾಧರ ನಾಯ್ (ಪ.ಜಾ) (ಕೆಳಹಂತದಿಂದ) Auto Mechanic ಯಲಬುರ್ಗಾದಿಂದ ಗಂಗಾವತಿಗೆ ವರ್ಗಾವಣೆ ಮಾಡಲಾಗಿದೆ.
ನಾಗೇಂದ್ರ ನಾಯ್ಕ್ಎಲ್.ಎಂ.(ಪ.ಜಾ) (ಕೆಳಹಂತದಿಂದ) Auto Welder ಯಲಬುರ್ಗಾದಿಂದ ಕುಷ್ಠಗಿಗೆ ವರ್ಗಾವಣೆ ಮಾಡಲಾಗಿದ್ದು, ಗೋಪಾಲ (ಪ.ಜಾ) (ಕೆಳಹಂತದಿಂದ) Auto Electrician ಕೊಪ್ಪಳದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ.
ಪವಾಡೆಪ್ಪ ದೊಡ್ಡಮನಿ (ಪ.ಜಾ) (ಕೆಳಹಂತದಿಂದ) Auto Mechinist ಕೊಪ್ಪಳದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದು ಮುಂಬಡ್ತಿ ನೀಡಿ ಅಲ್ಲೇ ಉಳಿಸಿಕೊಳ್ಳಲಾಗಿದೆ. ಕೌಶಲ್ಯ ಗಿರಿವಾಳ (ಪ.ಜಾ) (ಕೆಳಹಂತದಿಂದ) Auto Painter ಅವರನ್ನು ಕೊಪ್ಪಳದಿಂದ ಯಲಬುರ್ಗಾಕ್ಕೆ ಮುಂಬಡ್ತಿಯೊಂದಿಗೆ ವರ್ಗಾವಣೆ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...