Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಹಲವು ವರ್ಷಗಳಿಂದ ಬೇರುಬಿಟ್ಟ ಸಿಬ್ಬಂದಿಗಳ ಬದಲಾಯಿಸಿ: ಸಿಪಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಮೂರು ವರ್ಷ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಡಳಿತ ಸಿಬ್ಬಂದಿಗಳ ಬದಲಾವಣೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ಆದೇಶಿಸಿದ್ದಾರೆ.

ಈ ಸಂಬಂಧ ಕೆಕೆಆರ್‌ಟಿಸಿ ನಿಗಮದ ಎಲ್ಲ ವಿಭಾಗೀಯ ಕಚೇರಿ, ಘಟಕಗಳು ಹಾಗೂ ಯುನಿಟ್‌ಗಳಲ್ಲಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿ ಒಂದೇ ಶಾಖೆ/ ಒಂದೇ ವಿಷಯ ಸಂಕಲನವನ್ನು ನಿರ್ವಹಿಸುತ್ತಿರುವ ವಿಷಯ ನಿರ್ವಾನಕರುಗಳನ್ನು ಹಾಗೂ ಇತರೇ ಸಿಬ್ಬಂದಿಯನ್ನು ಮೂರು ವರ್ಷಗಳಿಗೊಮ್ಮೆ ಬದಲಾವಣೆ ಮಾಡುವಂತೆ ನಿರ್ದೇಶನ ವಿದೆ.

ಈ ನಿರ್ದೇಶನವಿದ್ದರೂ ಸಹ ಕೆಲವೊಂದು ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಷಯ ನಿರ್ವಾಹಕರು ಹಲವಾರು ವರ್ಷಗಳಿಂದ ಒಂದೇ ಕಡೆ ಕೆಲಸ ನಿರ್ವಹಿಸುತ್ತಿರುವುದಾಗಿ ಇತರ ಸಿಬ್ಬಂದಿಗಳಿಂದ/ ಸಂಘಟನೆಗಳಿಂದ ಹಲವಾರು ದೂರುಗಳು ಈ ಕಚೇರಿಗೆ ಬಂದಿವೆ.

ಮುಂದುವರೆದು ಈ ಕುರಿತು ಪರಿಶೀಲಿಸಿದ ಸೂಕ್ತಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ವಿಭಾಗೀಯ ಕಚೇರಿ/ಶಾಖೆ/ಘಟಕ/ಯುನಿಟ್‌ಗಳಲ್ಲಿ 03 ವರ್ಷಗಳಗಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಶಾಖೆ/ ಒಂದೇ ವಿಷಯ ಸಂಕಲನವನ್ನು ನಿರ್ವಹಿಸುತ್ತಿರುವ ವಿಷಯ ನಿರ್ವಾಹಕರನ್ನು ಹಾಗೂ ಇತರೇ ಸಿಬ್ಬಂದಿಯನ್ನು ಬದಲಾಯಿಸುವಂತೆ ಆದೇಶ ಹೊರಡಿಸಿದ್ದಾರೆ.

ಸೂಕ್ತಾಧಿಕಾರಿಗಳ ಆದೇಶದಂತೆ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ವಿಷಯ ನಿರ್ವಾಹಕರನ್ನು ಹಾಗೂ ಇತರೇ ಸಿಬ್ಬಂದಿಯನ್ನು ಕೂಡಲೇ ಬದಲಾಯಿಸಲು ಕ್ರಮವಹಿಸಿ, ಅನುಸರಣಾ ವರದಿಯನ್ನು ಈ ಕಚೇರಿಗೆ ಕೊಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ