NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ವಿಜಯಪುರ ವಿಭಾಗದ ನಿವೃತ್ತ ಡಿಸಿಯಿಂದ ಸಂಸ್ಥೆ ವಾಹನ ದುರರ್ಬಳಕೆ – ಯಾಕೂಬ ಪಟೇಲ್ ನಾಟಿಕಾರ ಆರೋಪ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲ್ಯಾಣ ರಥ ಪ್ರತಿಷ್ಠಿತ ಸಾರಿಗೆ ವಾಹನವನ್ನು ನಿವೃತ್ತ ವಿಭಾಗೀಯ ನಿಯಂತ್ರಣಾಧಿಕಾರಿ ಜೆ.ಎಂ. ಫೈಜ್‌ ಅವರು ಸಂಸ್ಥೆಯಿಂದ ನಿವೃತ್ತಿ ಆದರೂ ಸಹ ಪ್ರತಿಷ್ಠಿತ ವಾಹದಲ್ಲಿ ಬೆಂಗಳೂರುವರೆಗೆ ಹಾಗೂ ಮರಳಿ ವಿಜಯಪುರ ವರೆಗೆ ಟಿಕೆಟ್‌ ಪಡೆಯದೇ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಾರಿಗೆ ನೌಕರ ಕೂಟ ವಿಜಯಪುರ ವಿಭಾಗದ ಗೌರವ ಅಧ್ಯಕ್ಷ ಯಾಕೂಬ ಪಟೇಲ್ ನಾಟಿಕಾರ ಆರೋಪಿಸಿದ್ದಾರೆ.

ಅಲ್ಲದೆ ಈ ವಾಹನವನ್ನು ಹಾಲಿ ಪ್ರಭಾರಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ ಅವರು ದುರ್ಬಳಕೆ ಮಾಡಿಕೊಳ್ಳಲು ಸಾಥ್ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಅವರು, ವಿಜಯಪುರ ವಿಭಾಗದಲ್ಲಿ ನಿವೃತ್ತ ವಿಭಾಗೀಯ ನಿಯಂತ್ರಣಾಧಿಕಾರಿ ಫೈಜ್‌ ಅವರನ್ನು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅಮಾನತು ಮಾಡಲಾಗಿತ್ತು ಬಳಿಕ ನಿವೃತ್ತಿ ಹೊಂದಿದ್ದಾರೆ.

ಅವರನ್ನು ಇಲಾಖಾ ವಿಚಾರಣೆ ಬಾಕಿ ಉಳಿಸಿ ಸಂಸ್ಥೆಯಿಂದ ಸದ್ಯ ಬಿಡುಗಡೆ ಗೊಳಿಸಿದ್ದು, ಈ ಬಾಕಿ ಉಳಿದಿರುವ ವಿಚಾರಣೆಯಲ್ಲಿ ಕೇಂದ್ರ ಕಚೇರಿ ಬೆಂಗಳೂರಿಗೆ ಹೋಗಲು ವಿಜಯಪುರ ವಿಭಾಗದ ಕಲ್ಯಾಣ ರಥ ಪ್ರತಿಷ್ಠಿತ ಸಾರಿಗೆ ವಾಹನವನ್ನು ಟಿಕೆಟ್ ನೀಡದೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಸಂಸ್ಥೆಯ ಸುತ್ತೋಲೆಗಳನ್ವಯ ಪ್ರತಿಷ್ಠಿತ ಸಾರಿಗೆ ವಾಹನದಲ್ಲಿ ಅಧಿಕಾರಿಗಳು ಪ್ರಯಾಣಿಸಲು ಅರ್ಥ ಟಿಕೆಟನ್ನು ಪಡೆಯಬೇಕು. ಆದಿವರು ಟಿಕೆಟ್ ಪಡೆಯದೇ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇವರ ಈ ಕೃತ್ಯಕ್ಕೆ ಹಾಲಿ ಪ್ರಭಾರಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ ಅವರು ಸಾಥ್ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆರೋಪದ ವಿಷಯದಲ್ಲಿ ಪೂರ್ಣ ಪ್ರಮಾಣದ ತನಿಖೆ ಮಾಡಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಶಿಸ್ತಿನ ಕ್ರಮ ಜರಗಿಸಬೇಕು ಇನ್ನು ಆರೋಪದ ಸತ್ಯಾಸತ್ಯತೆ ತಿಳಿಯಲು KKRTC ವ್ಯವಸ್ಥಾಪಕ ನಿರ್ದೇಶಕರು ಸಿಸಿ ಟಿವಿ ಫುಟೇಜ್‌ ಪಡೆದುಕೊಂಡು ಪರಿಶೀಲಿಸಬೇಕು ಎಂದು ನಾಟಿಕಾರ ಮನವಿ ಮಾಡಿದ್ದಾರೆ.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ