ಕಲಬುರಗಿ: ಇದೇ ಏ.14ರಂದು ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ ವಿಭಾಗಗಳು ಹಾಗೂ ಕಾರ್ಯಾಗಾರಗಳಿಗೆ ತಲಾ 20 ಸಾವಿರ ರೂ. ಹಣ ಮಂಜೂರು ಮಾಡಿ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿಗಮದ ವ್ಯವಸ್ಥಾಪಕ ನಿರ್ದೇಶಕರ ಏ.1ರಂದು ಮಾಡಿದ ಆದೇಶ ಮೇರೆಗೆ ಪ್ರತಿ ವರ್ಷದಂತೆ ಈ ವರ್ಷವು 14-04-2026 ರಂದು ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಸಮಾರಂಭವನ್ನು ಏರ್ಪಡಿಸಲು ನಿಗಮದ ಎಲ್ಲ ವಿಭಾಗ ಹಾಗೂ ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಆಚರಿಸಲು ಪ್ರತಿ ವಿಭಾಗಕ್ಕೆ 20,000 ರೂ.ಗಳಂತೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವ್ಯವಸ್ಥಾಪಕ ನಿರ್ದೇಶಕರವರ ಆದೇಶದಂತೆ, ಏ.14ರಂದು ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ತಮ್ಮ ವಿಭಾಗದಲ್ಲಿರುವ ಎಲ್ಲ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ನೌಕರರ ಸಂಘಟನೆಗಳ ಪದಾಧಿಕಾರಿಗಳನ್ನು, ಕಾರ್ಮಿಕ ಸಂಘಟನೆಯ ಮುಖಂಡರು ಹಾಗೂ ಎಲ್ಲ ನೌಕರರನ್ನು ಆಹ್ವಾನಿಸಿ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯಕ್ರಮವನ್ನು ಅಚ್ಚು-ಕಟ್ಟಾಗಿ ಆಯೋಜಿಸಬೇಕು ಎಂದು ತಿಳಿಸಿದ್ದಾರೆ.
Related










