NEWSನಮ್ಮರಾಜ್ಯಸಂಸ್ಕೃತಿ

KKRTC: ಏ.14ರಂದು ಡಾ.ಅಂಬೇಡ್ಕ‌ರ್‌ ಜಯಂತಿ-ತಲಾ 20 ಸಾವಿರ ರೂ. ಮಂಜೂರು

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಇದೇ ಏ.14ರಂದು ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕ‌ರ್‌ ಅವರ ಜಯಂತಿ ಕಾರ್ಯಕ್ರಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ ವಿಭಾಗಗಳು ಹಾಗೂ ಕಾರ್ಯಾಗಾರಗಳಿಗೆ ತಲಾ 20 ಸಾವಿರ ರೂ. ಹಣ ಮಂಜೂರು ಮಾಡಿ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿಗಮದ ವ್ಯವಸ್ಥಾಪಕ ನಿರ್ದೇಶಕರ ಏ.1ರಂದು ಮಾಡಿದ ಆದೇಶ ಮೇರೆಗೆ ಪ್ರತಿ ವರ್ಷದಂತೆ ಈ ವರ್ಷವು 14-04-2026 ರಂದು ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಸಮಾರಂಭವನ್ನು ಏರ್ಪಡಿಸಲು ನಿಗಮದ ಎಲ್ಲ ವಿಭಾಗ ಹಾಗೂ ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಆಚರಿಸಲು ಪ್ರತಿ ವಿಭಾಗಕ್ಕೆ 20,000 ರೂ.ಗಳಂತೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕರವರ ಆದೇಶದಂತೆ, ಏ.14ರಂದು ಅಂಬೇಡ್ಕ‌ರ್‌ ಅವರ ಜಯಂತಿ ಕಾರ್ಯಕ್ರಮವನ್ನು ತಮ್ಮ ವಿಭಾಗದಲ್ಲಿರುವ ಎಲ್ಲ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ನೌಕರರ ಸಂಘಟನೆಗಳ ಪದಾಧಿಕಾರಿಗಳನ್ನು, ಕಾರ್ಮಿಕ ಸಂಘಟನೆಯ ಮುಖಂಡರು ಹಾಗೂ ಎಲ್ಲ ನೌಕರರನ್ನು ಆಹ್ವಾನಿಸಿ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯಕ್ರಮವನ್ನು ಅಚ್ಚು-ಕಟ್ಟಾಗಿ ಆಯೋಜಿಸಬೇಕು ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ