KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ

- ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ
ವಿಜಯಪುರ: ತನ್ನ ತಂದೆ ನಿಧನರಾಗಿದ್ದಕ್ಕೆ ರಜೆ ಹಾಕಿಕೊಂಡ ಚಾಲಕ ಕಂ ನಿರ್ವಾಹಕನಿಗೆ ಕೇವಲ 7 ದಿನ ಮಾತ್ರ ರೆಜೆಕೊಟ್ಟು ಬಳಿಕ ಗೈರುಹಾಜರಿ ತೊರಿಸುವ ಮೂಲಕ ದೌರ್ಜನ್ಯದಿಂದ ನಡೆದುಕೊಂಡಿದ್ದಾರೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ.
ಇನ್ನು 2020 ರಿಂದ 2021ರ ನಡುವೆ ನಾರಾಯಣಪ್ಪ ಕುರುಬರ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಇದೇ ವಿಜಯಪುರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಇವರ ವಿರುದ್ಧ ಸಾಕಷ್ಟು ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಮಹಿಳೆಯರಿಗೆ ಕಿರಕುಳ ನೀಡಿರುವ ಬಗ್ಗೆ ದುರುಗಳು ಬಂದಿದವು ಎಲ್ಲವನ್ನು ಗಮನಿಸಿದ ಮೇಲಧಿಕಾರಿಗಳು ಹಾಗೂ ಅಂದಿನ ಸಾರಿಗೆ ಸಚಿವರು ವರ್ಗಾವಣೆ ಮಾಡಿದ್ದರು.
ಆದರೆ ಇವರು ತಮ್ಮ ರಾಜಕೀಯ ಪ್ರಭಾವ ಬಳಸಿ ಮತ್ತೆ ವಿಜಯಪುರ ವಿಭಾಗಕ್ಕೆ ಡಿಸಿಯಾಗಿ ಬಂದು ಒಕ್ಕರಿಸಿದ್ದಾರೆ. ಬಂದಮೇಲೆ ಚಾಲಕ ಕಂ ನಿರ್ವಾಹಕ ಹಿರೆಗೆಪ್ಪ ತಳವಾರ ಅವರ ತಂದೆ 2023 ಅಕ್ಟೋಬರ್ 17ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈ ನಿಧನರಾಗುವುದಕ್ಕೂ ಮೊದಲ ಮೂರು ದಿನ ಅಂದರೆ ಅ.14ರಿಂದ ಅ.20ರವರೆಗೆ ರಜೆ ಮಂಜೂರು ಮಾಡಿದ್ದಾರೆ.
ಇಲ್ಲಿ ಚಾಲಕ ತನ್ನ ತಂದೆಯನ್ನು ಕಳೆದುಕೊಂಡ ಕೇವಲ ನಾಲ್ಕೆದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಎಂದು ಅ.21ರಿಂದ ಗೈರುಹಾಜರಿ ತೋರಿಸಿದ್ದಾರೆ. ಅಲ್ಲದೆ ಈ ಚಾಕಲ 15.09.2023ರಿಂದ 11.11.2023ರ ವರೆಗೆ ರಜೆ ತೆಗೆದುಕೊಂಡಿದ್ದಾರೆ. ಈ ನಡುವೆ ಈ ಮಧ್ಯೆ ಕೇವಲ 7 ದಿನ ರಜೆ ಮಂಜೂರು ಮಾಡಿ ಮತ್ತೆ ಗೈರುಹಾಜರಿ ತೋರಿಸಿದ್ದಾರೆ. ನಿರಂತರವಾಗಿ 58 ದಿನಗಳ ಕಾಲ ರಜೆಯಲ್ಲಿರುವ ವ್ಯಕ್ತಿಗೆ ಮಧ್ಯೆ 7 ದಿನ ರಜೆ ಮಂಜೂರು ಮಾಡುವುದಕ್ಕೆ ನಿಗಮದಲ್ಲಿ ನಿಯಮವಿದೆಯೇ?
ಇಲ್ಲಿ ನಿರಂತರವಾಗಿ ಗೈರು ಹಾಜರಿ ತೋರಿಸಬೇಕಿತ್ತು ಇಲ್ಲ ಚಾಲಕನ ತಂದೆ ನಿಧನರಾದ ದಿನದಿಂದ ಆತ ಡ್ಯೂಟಿಗೆ ಬರುವವರೆಗಾದರೂ ರಜೆ ಮಂಜೂರು ಮಾಡಬೇಕಿತ್ತು. ಇದಾವುದನ್ನು ಮಾಡದೆ 58 ದಿನಗಳ ರಜೆಯಲ್ಲಿ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ ಮಧ್ಯೆ ರಜೆ ಮಂಜೂರು ಮಾಡಿರುವ ಈ ಡಿಸಿಯ ನಡೆ ಗಮನಿಸಿದರೆ ಅನುಮಾನ ಮೂಡುತ್ತಿದೆ.
ಇದಿಷ್ಟೇ ಅಲ್ಲದೆ ಈ ನಾರಾಯಣಪ್ಪ ಕುರುಬರ ವಿಭಾಗಕ್ಕೆ ಬಂದಾಗಿನಿಂದ ನೌಕರರ ರಜೆಯನ್ನು ಮಂಜೂರು ಮಾಡಲು 50:50 ಪದ್ಧತಿ ಅನುಸರಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಹಣ ನೀಡಿದವರಿಗೆ ರಜೆ ಮಂಜೂರು ಮಾಡುವುದು. ಹಣ ನೀಡದೆ ಇದ್ದವರಿಗೆ ರಜೆ ಮಂಜೂರು ಮಾಡದೇ ಪೆಂಡಿಂಗ್ ಇಡುವುದು ಅಥವಾ ದಂಡ ಹಾಕುವುದು ಮಾಡುತ್ತಿದ್ದಾರೆ. ಹಣ ಪಡೆದ ಬಳಿಕ ಪ್ರಕರಣಗಳನ್ನು ವಿಲೇವಾರಿಮಾಡುತ್ತಿದ್ದಾರೆ ಎಂಬ ಆರೋಪ ವಿಭಾಗದಲ್ಲಿ ಕೇಳಿಬರುತ್ತಿದೆ.
ಇನ್ನು ಈತನ ಮೂಲ ಹುದ್ದೆ ಉಪ ಮುಖ್ಯಕಾನೂನು ಅಧಿಕಾರಿ. ಆದರೆ ಮೂಲ ಹುದ್ದೆ ಆತನಿಗೆ ಬೇಕಾಗಿಲ್ಲ. ವಿಭಾಗೀಯ ನಿಯಂತ್ರಣಾಧಿಕಾರಿ ಹುದ್ದೆನೇ ಬೇಕು. ಅದೂ ವಿಜಯಪುರ ವಿಭಾಗವೇ ಬೇಕು. ಈ ಹಿಂದೆ ಭ್ರಷ್ಟಾಚಾರ ಪಕ್ಷಪಾತ ಮತ್ತು ಮಹಿಳೆಯರಿಗೆ ನೀಡಿರುವ ಕಿರಕುಳದ ಆಧಾರದ ಮೇಲೆ ವಿಜಯಪುರ ವಿಭಾಗದಿಂದ ಹುದ್ದೆ ತೋರಿಸದೆ ವರ್ಗಾವಣೆ ಮಾಡಲಾಗಿತ್ತು.
ಆದರೆ ಈಗ ತನ್ನ ರಾಜಕೀಯ ಒತ್ತಡ ಬಳಸಿಕೊಂಡು ಮತ್ತೆ ವಿಜಯಪುರ ವಿಭಾಗಕ್ಕೆ ಒಕ್ಕರಿಸಿದ್ದಾರೆ. ಈತ ಈ ಹಿಂದೆ ವಿಜಯಪುರ ಬಸ್ ನಿಲ್ದಾಣದಲ್ಲಿರುವ ನಂದಿನಿ ಕ್ಯಾಂಟೀನ್ ಬಾಡಿಗೆ ವಿಚಾರದಲ್ಲಿ ಸಂಧಾನ ಪ್ರಕಿಯೇ ಮೂಲಕ ಪ್ರತಿ ತಿಂಗಳು 9.5 ಲಕ್ಷ ಬಾಡಿಗೆ ಇದ್ದ ಕ್ಯಾಂಟೀನ್ಗೆ ಕೇವಲ 4 ಲಕ್ಷ ರೂ.ಗಳಿಗೆ ಬಾಡಿಗೆ ಫಿಕ್ಸ್ ಮಾಡಿಸಿ ಬಾಡಿಗೆದಾರರಿಂದ ಹಣ ಪಡೆದು ನಿಗಮಕ್ಕೆ ಸುಮಾರು 1.90 ಕೋಟಿ ರೂ.ಗಳಷ್ಟು ಆದಾಯ ಲಾಸ್ ಆಗಲು ನೇರವಾಗಿ ಕಾರಣರಾಗಿದ್ದಾರೆ.
ಈ ಸಂಬಂಧ ಈತನ ಮೇಲೆ ದೂರು ಸಹ ದಾಖಲು ಮಾಡಲಾಗಿದೆ. ಆದರೆ ವಿಚಾರಣೆಯಲ್ಲಿ ತಮಗೆ ಬೇಕಾಗಿರುವ ಅಧಿಕಾರಿಗಳನ್ನು ವಿಚಾರಣಾಧಿಕಾರಿಗಳನ್ನಾಗಿ ನೇಮಿಸಿ ಕೊಂಡಿದ್ದಾರೆ. ಅಲ್ಲದೆ ವಿಜಯಪುರ ವಿಭಾಗದಲ್ಲಿ ಸಾಕಷ್ಟು ದುರುಗಳಿದ್ದರು ಮತ್ತೆ ವಿಜಯಪುರ ವಿಭಾಗಕ್ಕೆ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಬಂದು ಮತ್ತೆ ನೌಕರರ ಸುಲೆಗೆ ಮಾಡುವುದಕ್ಕೆ ನಿಂತಿದ್ದಾರೆ.
ಈತ ವಿಜಯಪುರ ವಿಭಾಗದಲ್ಲಿ ಮಾಡಿರುವ ಭ್ರಷ್ಟಾಚಾರ, ಪಕ್ಷಪಾತ ಮತ್ತು ಮಹಿಳೆಯರಿಗೆ ನೀಡಿರುವ ಕಿರಕುಳ ಹಾಗೂ ನಿಗಮಕ್ಕೆ ಸುಮಾರು 1.98 ಕೋಟಿ ರೂ.ಗಳಷ್ಟು ಆದಾಯ ನಷ್ಟ ಮಾಡಿ ಆರ್ಥಿಕವಾಗಿ ನಿಮಗಕ್ಕೆ ನಷ್ಟ ಮಾಡಿರುವ ಆರೋಪದ ಮೇಲೆ ಕೂಡಲೇ ವಿಚಾರಣ ಪೂರ್ವ ಅಮಾನತು ಮಾಡಿ ಸೂಕ್ತ ಶಿಸ್ತಿನ ಕ್ರಮ ಜರುಗಿಸಬೇಕು ಎಂದು ವಿಭಾಗದ ನೌಕರರು ಆಗ್ರಹಿಸಿದ್ದಾರೆ.
ವಿಭಾಗದಲ್ಲಿ ಪೆಂಡಿಂಗ್ ಇದ್ದ ರಜೆ ಪ್ರಕರಣಗಳನ್ನು ಇತ್ಯಾರ್ಥ ಮಾಡಿರುವ ಡಿಸಿ ಆದೇಶದ ಪಿಡಿಎಫ್ ಪ್ರತಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: Leave Order’s
Related

You Might Also Like
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....
KSRTC: 26 ವರ್ಷ ಸೇವೆಯ ನೌಕರರ ಮೂಲ ವೇತನ 31 ಸಾವಿರ- ಕೇವಲ 8ವರ್ಷ ಸೇವೆಯ ಸರ್ಕಾರಿ ನೌಕರರ ಮೂಲ ವೇತನ 48 ಸಾವಿರ!
ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಇದು ಅರ್ಥವಾಗುತ್ತಿಲ್ಲವೇಕೆ- ಒಕ್ಕೂಟದ ಪದಾಧಿಕಾರಿಗಳ ಪ್ರಶ್ನೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳ-ನೌಕರರ ವೇತನ ಸರ್ಕಾರಿ ಅಧಿಕಾರಿಗಳು-ನೌಕರರಿಗೆ...
ಕಿಸಾನ್ ಸಮ್ಮಾನ್ ಹಣ ಪ್ರತಿ ರೈತರಿಗೂ ಸಿಗಬೇಕು: ಸಂಸದ ಡಾ.ಸುಧಾಕರ್
ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ...
ನಕ್ಷೆ ಮಂಜೂರಾತಿ ಉಲ್ಲಂಘಿಸಿ ಹೆಚ್ಚುವರಿ ಮಹಡಿ- 12 ಕಟ್ಟಡಗಳ ತೆರವು: ಕರೀಗೌಡ
ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡಗಳ ವ್ಯತಿರಿಕ್ತ ಭಾಗ ಅಥವಾ ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದ್ದು, ಇಂದು 12 ಕಟ್ಟಡಗಳ ವ್ಯತಿರಿಕ್ತ ಭಾಗ/ ಹೆಚ್ಚುವರಿ...
ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಅರ್ಚಕನ ಬಂಧನ
ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಕೇರಳ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...