KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಸಿಬ್ಬಂದಿಯಿಂದ ಘಟಕದಲ್ಲೇ ಸ್ವಂತ ಕಾರು ಸರ್ವಿಸ್ ಮಾಡಿಕೊಂಡ ಡಿಎಂ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ ನಾವು ಮಾಡಿದ್ದೆ ರೂಲ್ಸ್, ನಾವು ಹೇಳಿದಂತೆ ಕೇಳಬೇಕು ಎಂದು ಸಂಸ್ಥೆಯ ನೌಕರರನ್ನು ಜೀತದಾಳುಗಳಂತೆ ತಮ್ಮ ವೈಯಕ್ತಿಕ ಕೆಲಸಕ್ಕೆ ದೂಡುತ್ತಿದ್ದಾರೆ.
ಹೌದು! ಇದೇ ಏಪ್ರಿಲ್ 9 ರಂದು ನಿಗಮದ ವಿಜಯಪುರ ಘಟಕ 1 ರ ಘಟಕ ವ್ಯವಸ್ಥಾಪಕ ಸಂಗನಗೌಡ ಬಿರಾದಾರ ಅವರು ತಮ್ಮ ಸ್ವಂತ ವಾಹನ ಕೆಎ 48 M3941 ಕಾರನ್ನು ಘಟಕಕ್ಕೆ ತಂದು ಘಟಕದ ತಾಂತ್ರಿಕ ಸಿಬ್ಬಂದಿಗಳ ಮುಖಾಂತರ ಇಂಜಿನ್ ಆಯಿಲ್ ಬದಲಾವಣೆ, ಗ್ರೀಸಿಂಗ್, ಪಂಚೇರ್ ಹಾಕಿಸಿಕೊಂಡಿದ್ದು ಅಲ್ಲದೆ ವಾಷಿಂಗ್ ಕೂಡ ಮಾಡಿಸಿಕೊಂಡಿದ್ದಾರೆ.
ಇದಿಷ್ಟೇ ಅಲ್ಲದೆ ಕಾರಿಗೆ ಸಂಬಂಧಿಸಿದ ಇನ್ನಿತರೇ ಕೆಲಸಗಳನ್ನು ಕಾನೂನು ಬಾಹಿರವಾಗಿ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಗಳಿಂದ ಮಾಡಿಸಿಕೊಂಡಿದ್ದಾರೆ. ಇವರು ಈ ಹಿಂದೆಯೂ ವಿಜಯಪುರ ವಿಭಾಗದ ಇಂಡಿ ಘಕದ ಡಿಎಂ ಆಗಿದ್ದಾಗ ನೌಕರರಿಗೆ ಕಿರುಕುಳ ಕೊಡುತ್ತಿದ್ದರು ಎಂದು KKCC ಸೆಕ್ರೆಟರಿ ಅಲ್ಪ ಸಂಖ್ಯಾತರ ಘಟಕದ ಯಾಕೂಬ ನಾಟಿಕಾರ ಅವರು ಭ್ರಷ್ಟಚಾರದ ಆರೋಪ ಮಾಡಿದ್ದರಿಂದ ವಿಜಯಪುರ ಘಟಕಕ್ಕೆ ವರ್ಗಾವಣೆ ಮಾಡಲಾಗಿದೆ.
ಆದರೆ ಇಲ್ಲಿಯೂ ಕೂಡ ಅವರು ಮತ್ತೆ ತಮ್ಮ ಹಳೆ ಚಾಳಿಯನ್ನೇ ಮುಂದು ವರೆಸಿದ್ದಾರೆ. ಜತೆಗೆ ತಮ್ಮ ಸ್ವಂತ ಕಾರನ್ನು ಸರ್ವಿಸ್ ಮಾಡಿಕೊಡುವಂತೆ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಗೆ ಆದೇಶಿಸಿ ಅದನ್ನು ರೆಡಿ ಮಾಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಇಂಡಿ ಘಟದ ಡಿಎಂ ಕರ್ಮಕಾಂಡ: 1ರಿಂದ5 ದಿನ ರಜೆಗೆ ₹6K ಕೊಡಿ ಇಲ್ಲ ಗೈರು ತೋರಿಸುವೆ ಅಂತ ಬೆದರಿಸಿ ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ
ತಮ್ಮ ಸ್ವಂತ ವಾಹನವನ್ನು ಸಂಸ್ಥೆಯ ಘಕದಲ್ಲಿ ನಿರ್ವಹಣೆ ಮಾಡಿಸುವುದು ಸಂಸ್ಥೆಯ ನಿಯಮದಡಿ ದೊಡ್ಡ ಅಪರಾಧವಾಗುತ್ತದೆ. ಇನ್ನು ಮತ್ತೊಂದು ಶಾಂಕಿಂಗ್ ನ್ಯೂಸ್ ಎಂದರೆ ತಮ್ಮಸ್ವಂತ ವಾಹನಕ್ಕೆ ಘಟಕದಲ್ಲಿ ಹಗಲಲ್ಲೇ ಡೀಸೆಲ್ ಸಹ ತುಂಬಿಸಿರುತ್ತಾರೆ ಎಂಬ ಆರೋಪ ಇವರ ಮೇಲೆ ಇದೆ. ಸಂಸ್ಥೆಯ ಡೀಸೆಲ್ ಬಳಸಿದ್ದರಿಂದ ನಿಗಮಕ್ಕೆ ಆರ್ಥಿಕವಾಗಿಯೂ ಭಾರಿ ನಷ್ಟವಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ.
ಇನ್ನು ವಿಜಯಪುರ ವಿಭಾಗದಲ್ಲಿ ರಿಉವ ವಿಭಾಗೀಯ ನಿಯಂತ್ರಣಾಧಿಕಾರಿ ಈ ಹಿಂದೆ ಇದೇ ವಿಭಾಗದಲ್ಲಿ ಭಾರಿ ಭ್ರಷ್ಟಾಚಾರ ಮಾಡಿ ವರ್ಗಾವಣೆ ಆಗಿದ್ದ ವ್ಯಕ್ತಿ ಈಗ ಮತ್ತೆ ಇದೇ ವಿಭಾಗಕ್ಕೆ ಬಂದು ಒಕ್ಕರಿಸಿದ್ದು ಈ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಯಣಪ್ಪ ಕುರುಬರ ಇವರಿಗೆ ದೂರು ಕೊಟ್ಟರೆ ನಮ್ಮನ್ನೇ ಅಮಾನತು ಮಾಡುತ್ತಾರೆ ಎಂದು ಸಿಬ್ಬಂದಿಗಳು ಹೆದರಿ ಇವರು ಹೇಳಿದಂತೆ ಕೇಳುತ್ತಿದ್ದಾರೆ.
ಒಟ್ಟಾರೆ ವಿಜಯಪುರ ವಿಭಾಗದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿನಂತೆ ಇಲ್ಲಿ ಇರುವ ಬಹುತೇಕ ಅಧಿಕಾರಿಗಳು ಸಂಸ್ಥೆಯ ನೌಕರರನ್ನು ಮತ್ತು ಸಂಸ್ಥೆಯ ವಸ್ತುಗಳನ್ನು ದುರುಪಯೋಗಪಡಿಸಿಕೊಂಡು ದೌಲತ್ ಮರೆಯುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಎಂಡಿ ರಾಚಪ್ಪ ಹಾಗೂ ಸಾರಿಗೆ ಮಂತ್ರಿ ರಾಮಲಿಂಗಾರೆಡ್ಡಿ ಅವರು ಕಡಿವಾಣ ಹಾಕಬೇಕು.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ರಾಮಲಿಂಗಾರೆಡ್ಡಿ ಅವರು ಕೂಡ ಈ ವಿಷಯದಲ್ಲಿ ತುರ್ತಾಗಿ ಕಟ್ಟುನಿಟ್ಟಿನ ಆದೇಶ ಮಾಡಿ ವಿಜಯಪುರ ಘಟಕದ ಘಟಕ ವ್ಯವಸ್ಥಾಪಕ ಸಂಗನಗೌಡ ಬಿರಾದಾರ ಹಾಗೂ ವೈಯಕ್ತಿಕ ವಾಹನವನ್ನು ಘಟಕದಲ್ಲಿ ಸರ್ವಿಸ್ ಮಾಡುವುದಕ್ಕೆ ಬಿಟ್ಟ ಭದ್ರತಾ ಸಿಬ್ಬಂದಿ ಅವರ ವಿರುದ್ಧವೂ ಕೂಡಲೇ ಇಲಾಖಾ ವಿಚಾರಣೆ ಬಾಕಿ ಇರಿಸಿ ವಿಚಾರಣಾ ಪೂರ್ವ ಅಮಾನತು ಮಾಡಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.
Related

You Might Also Like
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...
ಬೀಡನಹಳ್ಳಿ: ಸಂಭ್ರಮದ ಚಾಮುಂಡೇಶ್ವರಿ ವರ್ಧಂತಿ – ಭಕ್ತರಿಗೆ ಅನ್ನಸಂತರ್ಪಣೆ
ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು...
ಕೊಪ್ಪಳ: ಭಾರೀ ಮಳೆಗೆ ಕುಸಿದ ಮನೆ ಒಂದೂವರೆ ವರ್ಷದ ಮಗು ಸಾವು, 6 ಮಂದಿಗೆ ಗಾಯ
ಕೊಪ್ಪಳ: ಭಾರೀ ಮಳೆಗೆ ಮನೆ ಕುಸಿದು ಒಂದೂವರೆ ವರ್ಷದ ಮಗುವೊಂದು ಮೃಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮನೆ...
ದ.ಕ.ದಲ್ಲಿ ವರುಣನ ಅಬ್ಬರ- ಮಣ್ಣಗುಂಡಿ ಬಳಿ ಗುಡ್ಡಕುಸಿತ: BM ಹೆದ್ದಾರಿ ಬಂದ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಆದರೂ ಧರ್ಮಸ್ಥಳ,...
ಅತ್ತಹಳ್ಳಿಯ ಎ.ಸಿ.ಲಿಂಗೇಗೌಡರ ಪುತ್ರ ರಾಘವ ಲಿಂಗೇಗೌಡ ನಿಧನ
ಮೈಸೂರು: ನಗರದ ತಿ.ನರಸೀಪುರ ರಸ್ತೆಯ ಜಿ.ಎಲ್.ಗಾರ್ಡನ್ ನಿವಾಸಿ ಲಂಡನ್ನಲ್ಲಿ ಕೆಲಸದಲ್ಲಿದ್ದ ರಾಘವ ಲಿಂಗೇಗೌಡ (49) ಬುಧವಾರ ಸಂಜೆ ನಿಧನರಾದರು. ಮೂಲತಃ ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಅತ್ತಹಳ್ಳಿ...
BMTC ಚಾಲನಾ ಸಿಬ್ಬಂದಿಗಳ ಡ್ಯೂಟಿ ರೋಟಾ ಕೌನ್ಸೆಲಿಂಗ್ಗೆ ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ, ವಾಯುವ್ಯ ಹಾಗೂ ಕೇಂದ್ರೀಯ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲನಾ ಸಿಬ್ಬಂದಿಗಳನ್ನು ಹೊಸದಾಗಿ ಕೌನ್ಸೆಲಿಂಗ್...
KSRTC: ಆಗಸ್ಟ್ 5ರಿಂದ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪಕ್ಕ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...