KKRTC: ಸಂಸ್ಥೆಯ ವಾಹನ ದುರ್ಬಳಕೆ ಮಾಡಿಕೊಂಡ ಅಧಿಕಾರಿಯ ಪತ್ನಿ- ವಜಾ ಮಾಡಿದ್ದು ಮಾತ್ರ ಸಾಮಾನ್ಯ ನೌಕರನ!!

ವಿಜಯಪುರ: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ನಿಕಟಪೂರ್ವ ವಿಭಾಗೀಯ ಸಾರಿಗೆ ಅಧಿಕಾರಿ ಹಾಗೂ ಪದೇಪದೆ ನಿಗಮದ ಕಾನೂನುಗಳನ್ನು ಗಾಳಿಗೆ ತೂರಿ ಇಲಾಖಾ ವಾಹನಗಳನ್ನು ದುರ್ಬಳಕೆ ಮಾಡಿಕೊಳ್ಳುವ ದೇವಾನಂದ ಬಿರಾದಾರ ಅವರ ಪತ್ನಿ 2021 ರಲ್ಲಿ ಇಲಾಖಾ ವಾಹನ ಸಂಖ್ಯೆ KA 32 F 2238 ವನ್ನು ಗುಡಿ ಗುಂಡಾರಗಳನ್ನು ಸುತ್ತಲೂ ಬಳಸಿಕೊಂಡಿದ್ದರು.
ಅವರು ಇಲಾಖಾ ವಾಹನವನ್ನು ದುರ್ಬಳಕೆ ಮಾಡುತ್ತಿರುವ ವಿಡಿಯೋ ಇಲಾಖಾ ವಾಹನ ಅಧಿಕಾರಿಗಳಿಗಿಂತ ಅವರ ಫ್ಯಾಮಿಲಿಯವರು ಜಾಸ್ತಿ ಬಳಕೆ ಮಾಡುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು.
ಅದಕ್ಕೆ ಸಂಸ್ಥೆಯ ನೌಕರ ಎಂ.ಎನ್. ಇಳಕಲ್ (ಈಗ ಮಾಜಿ ಕಿರಿಯ ಸಹಾಯಕ ವಿಜಯಪುರ ವಿಭಾಗ) ಅವರ ಡೂಪ್ಲಿಕೇಟ್ ID ಸೃಷ್ಟಿಸಿ ಆ ಮುಖಾಂತರ ಮೇಡಂ ಇದು ವಿಜಯಪುರ ವಿಭಾಗದಲ್ಲಿ ಕಾಮನ್ ಇದಕ್ಕಿಂತ ಹೆಚ್ಚು ಭ್ರಷ್ಟಾಚಾರ ವಿಭಾಗದಲ್ಲಿ ನಡೆಯುತ್ತಿದೆ ಆನೆ ನಡೆದಿದ್ದೆ ದಾರಿ ಎಂದು ಕಾಮೆಂಟ್ ಹಾಕಿದ್ದರು ಎಂದು ಆರೋಪಿಸಿ ವಜಾ ಮಾಡಲಾಗಿದೆ.
ಇನ್ನು ಈ ಕಾಮೆಂಟ್ ಹಾಕಿದ್ದಕ್ಕೆ ವಿಜಯಪುರ ವಿಭಾಗದ ಭ್ರಷ್ಟ, ನೌಕರರ ವಿರೋಧಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಅವರು ಎಂ.ಎನ್. ಇಳಕಲ್ ಅವರನ್ನು ಅಧಿಕಾರಿಗಳ ಬಗ್ಗೆ ಹಾಗೂ ಸಂಸ್ಥೆಯ ಬಗ್ಗೆ ಇಲ್ಲ ಸಲ್ಲದ ಕಾಮೆಂಟ್ ಮಾಡಿರುತ್ತೀರಿ ಎಂದು ಅಮಾನತು ಮಾಡಿದ್ದರು.
ಅಲ್ಲದೆ ನಿಮ್ಮ ಫೇಸ್ಬುಕ್ ID ಹ್ಯಾಕ್ ಆಗಿದ್ದು ಗೊತ್ತಿದ್ದರೂ ಸಹ ನೀವು CEN ಪೊಲೀಸ್ ಸ್ಟೇಷನ್ ವಿಜಯಪುರದಲ್ಲಿ ದೂರು ದಾಖಲು ಮಾಡಲು ವಿಫಲರಾಗಿರುತ್ತೀರಿ ಎಂದು 2022ರಲ್ಲಿ ನಿಬಂಧನೆ 23ರಲ್ಲಿ ಆಪಾದನಾ ಪತ್ರ ನೀಡಿದ್ದರು. ನಿಬಂಧನೆ 23ರಲ್ಲಿ ಜಾರಿ ಮಾಡಿರುವ ಆಪಾದನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದರು. ನಿಮ್ಮ ಫೇಸ್ಬುಕ್ ID ಹ್ಯಾಕ್ ಆಗಿದ್ದು ಅಂತಾ. ಇವರ ಫೇಸ್ಬುಕ್ ID ಹ್ಯಾಕ್ ಆಗಿದ್ದರೆ ಇವರು ಕಾಮೆಂಟ್ ಮಾಡಲಿಕ್ಕೆ ಹೇಗೆ ಸಾಧ್ಯ? ಹಾಗಾದರೆ ಇವರನ್ನು ದುರುದ್ದೇಶ ಪೂರ್ವಕವಾಗಿ ಅಮಾನತು ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಹಾಗೂ ಅಮಾನತು ಮಾಡಿರುವುದು ಕಾನೂನು ಬಾಹಿರವಾಗಿದೆ ಅಲ್ಲವೇ?
ಇನ್ನು ಈ ಪ್ರಕರಣದಲ್ಲಿ ಇಲಾಖಾ ವಿಚಾರಣೆ ನಡೆದು ವಿಚಾರಣಾಧಿಕಾರಿಗಳು ಭಾಗಶಃ ಎಂದು ವಿಚಾರಣಾ ಫಲಿತಾಂಶ ವರದಿ ನೀಡಿದ್ದಾರೆ. ಆ ವರದಿಯ ಆಧಾರದ ಮೇಲೆ ನೀತಿ ಸಂಹಿತೆ ಉಲ್ಲಘನೆ ಪ್ರಕಾರಣದಲ್ಲಿ ನಿವೃತ್ತಿ ಆಗುವುದಕ್ಕಿಂತ ಮುಂಚೆ 13 ದಿನ ಮೊದಲು ಅಮಾನತಾದ ಜೆ.ಎಂ.ಫೈಜ್ (ಆಗಿನ ವಿಭಾಗೀಯ ನಿಯಂತ್ರಣಾಧಿಕಾರಿ) ಅವರು ಎಂ.ಎನ್. ಇಳಕಲ್ ಅವರನ್ನು ವ್ಯಯಕ್ತಿಯ ದ್ವೇಷದಿಂದ ವಜಾ ಮಾಡಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿತ್ತು.
ಇಳಕಲ್ ಅವರು ಮಾಡದ ತಪ್ಪಿಗೆ ಕಾನೂನು ಬಾಹಿರವಾಗಿ ಅವರನ್ನು ವಜಾ ಮಾಡಿರುವುದು ತಪ್ಪಲ್ಲವೇ?. ಈ ವಿಷಯದಲ್ಲಿ ಎಂ.ಎನ್.ಇಳಕಲ್ ಅವರ ವಜಾ ಪ್ರಕರಣ ಸದ್ಯ ಕಾರ್ಮಿಕ ನ್ಯಾಯಾಲದಲ್ಲಿ ನಡೆಯುತ್ತಿದ್ದು ಇಲ್ಲಿ ನನಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಇಳಕಲ್ ಹೇಳುತ್ತಿದ್ದಾರೆ.
Related

You Might Also Like
NWKRTC: ಸಾರಿಗೆ ನೌಕರರ ವೇತನ ಹೆಚ್ಚಳ ಯಾವಾಗ? ನಾಟಕದ ಮೂಲಕ ಸರ್ಕಾರದ ಗಮನ ಸೆಳೆದ ನಗರ ಸಾರಿಗೆ ಸಿಬ್ಬಂದಿ
ಹುಬ್ಬಳ್ಳಿ: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು - ನೌಕರರಲ್ಲಿ ಹಾಗೂ ನೌಕರರು - ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ...
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...