NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಸಾರಿಗೆ ಸಂಸ್ಥೆಯಿಂದಾಗಿ ನಿಮಗೆ ಕೆಲಸ ಸಿಕ್ಕಿದೆ, ಸಂಸ್ಥೆಯನ್ನು ಬೆಳೆಸಿ ನೀವು ಬೆಳೆಯಿರಿ – ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ 1,300 ನಿರ್ವಾಹಕ ಹಾಗೂ 504 ಇತರೆ ಸಿಬ್ಬಂದಿ ಸೇರಿ ಒಟ್ಟು 1,804 ಹುದ್ದೆಗಳನ್ನು ಮುಂದಿನ ದಿನಗಳಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ನಗರದ ಡಾ.ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಕೆಕೆಆರ್‌ಟಿಸಿ ಮಂಗಳವಾರ ಆಯೋಜಿಸಿದ್ದ ಹೊಸದಾಗಿ ಆಯ್ಕೆಯಾದ ಚಾಲಕ ಮತ್ತು ಚಾಲಕ ಕಂ ನಿರ್ವಾಹಕರಿಗೆ ನೇಮಕಾತಿ ಆದೇಶ ಪತ್ರ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಸಾರಿಗೆ ನಿಗಮಗಳಿಗೆ ಒಂಬತ್ತು ವರ್ಷಗಳಿಂದ ನೇಮಕಾತಿ ಮಾಡಿಕೊಳ್ಳದ ಹಾಗೂ 4 ವರ್ಷಗಳಿಂದ ಬಸ್ ಖರೀದಿಸದ ಪರಿಣಾಮ ಸಂಸ್ಥೆಯ ಮೇಲೆ ಸಾಕಷ್ಟು ಹೊರೆ ಬಿದಿತ್ತು. ಅಧಿಕಾರಕ್ಕೆ ಬಂದ ಬಳಿಕ ಪ್ರಯಾಣಿಕರಿಗಾಗಿ 644 ಬಸ್‌ಗಳನ್ನು ನೀಡಿ 1,619 ಸಿಬ್ಬಂದಿಯ ನೇಮಕವೂ ಮಾಡಿಕೊಳ್ಳಲಾಗಿದೆ. ಮುಂದಿನ ಮೂರ್ನಾಲ್ಕು ತಿಂಗಳಿನಲ್ಲಿ ಸಂಸ್ಥೆಗೆ ಹೆಚ್ಚುವರಿಯಾಗಿ 485 ಬಸ್‌ಗಳು ಸೇರ್ಪಡೆಯಾಗಲಿವೆ ಎಂದು ತಿಳಿಸಿದರು.

ಇನ್ನು ಶಕ್ತಿ ಯೋಜನೆಗೂ ಮುನ್ನ ರಾಜ್ಯದಲ್ಲಿ ನಿತ್ಯ ಬಸ್ ಸೇವೆ ಪಡೆಯುತ್ತಿದ್ದವರ ಸಂಖ್ಯೆ ಸರಾಸರಿ 84 ಲಕ್ಷ ಇತ್ತು. ಈಗ 1.10 ಕೋಟಿಗೆ ಏರಿಕೆಯಾಗಿದೆ. ಇದೂವರೆಗೆ 165 ಕೋಟಿ ಟಿಕೆಟ್‌ಗಳನ್ನು ಮಹಿಳೆಯರ ಉಚಿತ ಪ್ರಯಾಣಕ್ಕೆ ವಿತರಿಸಲಾಗಿದೆ. ಇದು ಸಾರಿಗೆ ಸಂಸ್ಥೆಗಳಿಗೆ ಶಕ್ತಿ ತುಂಬಿದ್ದು, ಹೆಚ್ಚಿನ ಬಸ್ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಸಾರಿಗೆ ಸಂಸ್ಥೆಯಿಂದಾಗಿ ನಿಮಗೆ ಕೆಲಸ ಸಿಕ್ಕಿದೆ. ಸಂಸ್ಥೆಯನ್ನು ಬೆಳೆಸಿ ನೀವು ಬೆಳೆಯಿರಿ. ಪ್ರಯಣಿಕರಿಗೆ ಉತ್ತಮ ಸೇವೆಯನ್ನು ಕಲ್ಪಿಸಿ ಎಂದು ಹೊಸ ಸಿಬ್ಬಂದಿಗೆ ಕಿವಿ ಮಾತು ಹೇಳಿದರು.

ಇನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ನಾವು ಕೊಟ್ಟಿದ್ದ ಖಾಲಿ ಇರುವ 50 ಸಾವಿರ ಹುದ್ದೆಗಳ ಭರ್ತಿ ಆಶ್ವಾಸನೆಗೆ ಈಗಲೂ ಬದ್ಧರಾಗಿದ್ದೇವೆ. ಮುಂದಿನ ಆರು ತಿಂಗಳಲ್ಲಿ 15,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಆ ಬಳಿಕ ಮತ್ತೆ 15 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ. ಪಾಟೀಲ, ‘ಕಾಡಾ’ ಅಧ್ಯಕ್ಷ ಎಂ.ಎ.ರಶೀದ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ. ಕೆಕೆಆರ್‌ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷ ಕುಮಾರ, ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ಆನಂದ ಬಂದರಕಳ್ಳಿ, ಸಿಎಂಇ ಸಂತೋಷ ಕುಮಾರ ಗೊಗೋರೆ, ಉಪ ಸಿಎಂಇ ಮಲಿಕಾರ್ಜುನ ದೇಗಲಮಡಿ. ವಿಭಾಗೀಯ ನಿಯಂತಣಾದಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ