KKSRTC: ಕರ್ತವ್ಯದ ಮೇಲೆ ಸಿಬ್ಬಂದಿ ಗಾಯಗೊಂಡಲ್ಲಿ ಸುಸಜ್ಜಿತ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ: ಡಿಸಿ ಆದೇಶ

ಕಲಬುರಗಿ: ಕರ್ತವ್ಯದ ಅವಧಿಯಲ್ಲಿ ಸಾರಿಗೆ ಸಿಬ್ಬಂದಿಗಳು ಗಾಯಗೊಂಡಲ್ಲಿ ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆದೇಶ ಮಾಡಿದ್ದಾರೆ.
ಘಟಕ ವ್ಯವಸ್ಥಾಪಕರು ಕಲಬುರಗಿ ಘಟಕ-2, 3 ಆಳಂದ, ಜೇವರ್ಗಿ, ಅಫಜಲಪೂರ ವಿಭಾಗೀಯ ಕಾರ್ಯಧೀಕ್ಷಕರು ಈ ವಿಷಯಕ್ಕೆ ಸಂಬಂಧಿಸಿದಂತೆ, ವಿಭಾಗದ ಎಲ್ಲ ಘಟಕಗಳ ಮತ್ತು ವಿಭಾಗೀಯ ಕಾರ್ಯಗಾರದಲ್ಲಿ ಕರ್ತವ್ಯ ನಿರ್ವಹಿಸುವಾಗ ಸಿಬ್ಬಂದಿಗಳು ಅಪಘಾತಗಳಲ್ಲಿ ಮತ್ತು ಅವಘಡಗಳಲ್ಲಿ ಗಾಯಗೊಂಡಾಗ ತಕ್ಷಣ ಈ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಸೂಚಿಸಿದ್ದಾರೆ.
1) ನಮ್ಮ ಸಂಸ್ಥೆಯ ವಾಹನಗಳು ಅಪಘಾತವಾದ ತಕ್ಷಣ ಮಾಹಿತಿಯನ್ನು ವಾಟ್ಸಾಪ್ ಮೂಲಕ ಅಥವಾ ಕರೆ ಮಾಡುವುದರ ಮೂಲಕ ತಿಳಿಸಿ, 24 ಗಂಟೆಯೊಳಗೆ ಸಂಪೂರ್ಣ ವರದಿಯನ್ನು ಕಾರ್ಮಿಕ ಶಾಖೆಗೆ ನೀಡಬೇಕು.
2) ಗಾಯಗೊಂಡ ಸಿಬ್ಬಂದಿಗಳಿಗೆ ಕೂಡಲೇ ಹತ್ತಿರದ ಸುಸಜ್ಜಿತ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆಗೆ ಕ್ರಮಹಿಸಬೇಕು.
3) ಸಂಬಂಧಿಸಿದ ಘಟಕ ವ್ಯವಸ್ಥಾಪಕರು, ಸಿಬ್ಬಂದಿ ಮೇಲ್ವಿಚಾರಕರು, ಲೆಕ್ಕ ಪತ್ರ ಮೇಲ್ವಿಚಾರಕರು, ಸಂಚಾರ ನಿರೀಕ್ಷಕರು, ಪಾರುಪತ್ತೆಗಾರರು ಅಥವಾ ಘಟಕ ವ್ಯವಸ್ಥಾಪಕರು ಘಟಕದಲ್ಲಿನ ಇತರೆ ಸಿಬ್ಬಂದಿಗಳನ್ನು ನಿಯೋಜಿಸಿದ್ದಲ್ಲಿ ಸದರಿಯವರು ಗಾಯಾಳು ಸಿಬ್ಬಂದಿಗಳು ಚಿಕೆತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ತುರ್ತು ಚಿಕಿತ್ಸಾ ನಿಧಿಯಾಗಿ 10 ಸಾವಿರ ರೂ.ಗಳನ್ನು ನೀಡುವುದು ಮತ್ತು ಹೆಚ್ಚಿನ ವೆಚ್ಚಕ್ಕಾಗಿ ಆಸ್ಪತ್ರೆಯಿಂದ ಅಂದಾಜು ಪಟ್ಟಿಯನ್ನು ಪಡೆದು ಕಾರ್ಮಿಕ ಶಾಖೆಗೆ ಕಳುಹಿಸಬೇಕು.
4) ಕಲಬುರಗಿ ಕೇಂದ್ರ ಭಾಗದಲ್ಲಿ ವಿಭಾಗ-02 ಮತ್ತು ಸಂಸ್ಥೆಯ ಯಾವುದೇ ವಿಭಾಗದ ಸಿಬ್ಬಂದಿಗಳು ಕರ್ತವ್ಯದಲ್ಲಿ ಅಪಘಾತವಾದಾಗ ಮೇಲಿನ ನಿರ್ದೇಶನಗಳನ್ನು ತಪ್ಪದೆ ಪಾಲಿಸಬೇಕು.
5) ಅಪಘಾತದ ಸಂಪೂರ್ಣ ವರದಿಯೊಂದಿಗೆ ಮತ್ತು ಅಗತ್ಯ ವೈದ್ಯಕೀಯ ದಾಖಲೆಗಳನ್ನು ಅಡಕಗೊಳಿಸಿ ವಿಳಂಬವಿಲ್ಲದೆ ಐಓಡಿ ಮಂಜೂರಿಗೆ ಕಾರ್ಮಿಕ ಶಾಖೆಗೆ ಕಳುಹಿಸಬೇಕು.
6) ಅಪಘಾತ ಮತ್ತು ತುರ್ತು ಸಮಯದಲ್ಲಿ ಎಲ್ಲ ಘಟಕ ವ್ಯವಸ್ಥಾಪಕರು ಮತ್ತು ಎಲ್ಲಾ ಮೇಲ್ವಿಚಾರಕ ಸಿಬ್ಬಂದಿಗಳು ವಿಭಾಗೀಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳ ಸಲಹೆಯಂತೆ ಕಾರ್ಯನಿರ್ವಹಿಸಬೇಕು. ಅಲ್ಲದೆ ಈ ವಿಷಯವನ್ನು ಗಂಭೀರ ಎಂದು ಪರಿಗಣಿಸಬೇಕು. ಇನ್ನು ಈ ಎಲ್ಲ ನಿರ್ದೇಶನಗಳನ್ನು ಯಾವುದೇ ದೂರುಗಳಿಗೆ ಆಸ್ಪದ ಕೊಡದೇ ನಿರ್ವಹಿಸಬೇಕು ಎಂದು ಅದೇಶಿಸಿದ್ದಾರೆ.
ಇಂಥ ಅಧಿಕಾರಿಗಳು ಎಲ್ಲ ವಿಭಾಗಗಳಲ್ಲೂ ಬೇಕಿರುವುದು. ಈ ರೀತಿ ಕ್ರಮ ತೆಗೆದುಕೊಂಡರೆ ನೌಕರರು ಯಾವುದೇ ಒತ್ತಡವಿಲ್ಲದೆ ತುಸು ನಮ್ಮದಿಯಿಂದ ಡ್ಯೂಟಿ ಮಾಡಲು ಸಾಧ್ಯವಾಗುತ್ತದೆ. ಈ ರೀತಿ ನಾಲ್ಕೂ ನಿಗಮಗಳ ಪ್ರತಿ ವಿಭಾಗದಲ್ಲೂ ಆಗಬೇಕು. ಜತೆಗೆ ಅಪಘಾತದಲ್ಲಿ ಗಾಯಗೊಂಡ ಸಿಬ್ಬಂದಿಯ ನೆರವಿಗೆ ತಕ್ಷಣ ಧಾವಿಸುವ ಕಾರ್ಯವಾಗಬೇಕಿದೆ. ನಿಜಕ್ಕೂ ಕಲಬುರಗಿ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿಗಳ ನಡೆ ಶ್ಲಾಘನೀಯವಾದುದು.
Related

You Might Also Like
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...
ಅಧಿಕೃತ ಪರವಾನಿಗೆ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ
ಬೆಂಗಳೂರು ಗ್ರಾಮಾಂತರ: ಅಧಿಕೃತ ರಸಗೊಬ್ಬರ ಮಾರಾಟದ ಪರವಾನಿಗೆ ಇಲ್ಲದೆ ರಸಗೊಬ್ಬರ ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು...
ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಉಪಮುಖ್ಯಮಂತ್ರಿ ಡಿಕೆಶಿ ಸಲಹೆ
ಬೆಂಗಳೂರು: ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು...
KSRTC: ನಡು ರಸ್ತೆಯಲ್ಲೇ ಸುಟ್ಟು ಬೂದಿಯಾದ ಬಸ್ – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಬನ್ನೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೈಸೂರು ವಿಭಾಗದ ಬಸ್ ಇಂಜಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನ ಮುಂದಿನ ಭಾಗ ಸುಟ್ಟು ಬೂದಿಯಾಗಿರುವ ಘಟನೆ ಇಂದು...