CrimeNEWSಕೃಷಿ

ಕೊಡಗು: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಬಲಿಯಾದ ಕಾಫಿ ಬೆಳೆಗಾರ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊಡಗಿನಲ್ಲಿ ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ನಿಲ್ಲುವಂತೆ ಕಾಣಿಸುತ್ತಿಲ್ಲ. ಮೇಲಿಂದ ಮೇಲೆ ಕಾಡಾನೆ ದಾಳಿಗೆ ಬಲಿಯಾಗುತ್ತಿರುವ ಪ್ರಕರಣಗಳು ನಡೆಯುತ್ತಿದ್ದು, ಸೋಮವಾರ ಬೆಳಗ್ಗೆ ದಕ್ಷಿಣಕೊಡಗಿನಲ್ಲಿ ಕಾಡಾನೆ ಬೆಳೆಗಾರರೊಬ್ಬರನ್ನು ಬಲಿ ಪಡೆದಿದೆ.

ಅಯ್ಯಮಾಡ ಮಾದಯ್ಯ(63) ಕಾಡಾನೆ ದಾಳಿಗೆ ಬಲಿಯಾದವರು. ಇವರು ಬೆಳಗ್ಗೆ 6.45ರ ಸಮಯದಲ್ಲಿ ತೋಟಕ್ಕೆ ತೆರಳುತ್ತಿದ್ದ ಸಂದರ್ಭ ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ದಿಢೀರ್ ಬಂದ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈಗಾಗಲೇ ಕೊಡಗಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಹಲವರನ್ನು ಬಲಿಪಡೆದಿದೆ. ಆದರೆ ಅರಣ್ಯ ಇಲಾಖೆ ಯಾವುದೇ ರೀತಿಯ ಕ್ರಮಕೈಗೊಳ್ಳದ ಕಾರಣದಿಂದ ಮೇಲಿಂದ ಮೇಲೆ ಘಟನೆಗಳು ನಡೆಯುತ್ತಿವೆ.

ಇದೀಗ ಬೆಳೆಗಾರರು ಮೃತಪಟ್ಟ ಪ್ರದೇಶದಲ್ಲಿ ಕಾಡಾನೆ ಹಾವಳಿ ಜಾಸ್ತಿಯಾಗಿದೆ. ಇನ್ನು ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ವಿವಿಧ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಅವುಗಳು ತೋಟದಲ್ಲಿ ಎಲ್ಲೆಂದರಲ್ಲಿ ಅಡ್ಡಾಡುತ್ತಿರುವುದರಿಂದ ಕಾಫಿ ತೋಟ ನಾಶವಾಗುತ್ತಿದೆ.  ಜತೆಗೆ ಜನ ಅಡ್ಡಾಡಲು ಭಯಪಡುವಂತಾಗಿದೆ.

ಕಾಡಾನೆಗಳ ಹಾವಳಿಯಿಂದಾಗಿ ರೈತರು ಕಾಫಿ, ಬೆಳೆಗಾರರು, ಕಾರ್ಮಿಕರು ಇಲ್ಲಿ ಬದುಕುವುದೇ ಕಷ್ಟವಾಗಿದೆ ವನ್ಯಪ್ರಾಣಿಗಳ ಉಪಟಳದಿಂದ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ಅಳಲು ತೋಡಿಕೊಂಡಿದ್ದಾರೆ.

ಬಿಸಿಲಿನಿಂದಾಗಿ ಅರಣ್ಯದಲ್ಲಿ ಮೇವು ಮತ್ತು ನೀರಿಲ್ಲದ ಕಾರಣ ಕಾಡಾನೆಗಳೆಲ್ಲವೂ ನಾಡಿನತ್ತ ಲಗ್ಗೆಯಿಡುತ್ತಿದ್ದು ಇದರಿಂದ ಈ ವ್ಯಾಪ್ತಿಯಲ್ಲಿ ತೋಟದಲ್ಲಿ ಕೆಲಸ ಮಾಡಲು ಜನ ಹೆದರುವಂತಾಗಿದೆ.

ಎಷ್ಟೇ ಜಾಗ್ರತೆ ವಹಿಸಿದರೂ ತೋಟದ ನಡುವೆ ಇರುವ ಕಾಡಾನೆಗಳು ಗೊತ್ತೇ ಆಗದಂತೆ ದಾಳಿ ಮಾಡಿಬಿಡುತ್ತವೆ. ಹೀಗಾಗಿ ತೋಟದಲ್ಲಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ತನಕ ಈ ವ್ಯಾಪ್ತಿಯ ಜನ ನೆಮ್ಮದಿಯಾಗಿ ಇರಲು ಸಾಧ್ಯವಾಗದಂತಾಗಿದೆ.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು