CrimeNEWSಕೃಷಿ

ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊಡಗಿನಲ್ಲಿ ವನ್ಯ ಪ್ರಾಣಿಗಳ ಹಾವಳಿಗೆ ಜನ ತತ್ತರಿಸಿಹೋಗುತ್ತಿದ್ದಾರೆ. ಈಗಾಗಲೇ ಕಾಡಾನೆ ಮತ್ತು ಹುಲಿಗಳು ಜನರ ಪ್ರಾಣ ತೆಗೆಯುತ್ತಿದ್ದು, ಅರಣ್ಯ ಇಲಾಖೆ ಯಾವುದೇ ರೀತಿಯ ಕ್ರಮ ಕೈಗೊಳ್ಳದ ಕಾರಣ ಒಂದೆರಡು ದಿನಗಳ ಅಂತರದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ದನಕರುಗಳನ್ನು ಮೇಯಿಸುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕ ಮುಝೀದ್ ರೆಹಮಾನ್ (55) ಎಂಬಾತನ ಮೇಲೆ ದಾಳಿ ಮಾಡಿದ ಹುಲಿ ಆತನ ಶಿರವನ್ನು ತಿಂದುಹಾಕಿದೆ.

ಇನ್ನು ಈಗಾಗಲೇ ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಬೀರುಗ ಬಳಿ ಕಾಡಾನೆ ದಾಳಿಗೆ ಬೆಳೆಗಾರರೊಬ್ಬರು ಬಲಿಯಾಗಿದ್ದರು. ಆ ಘಟನೆ ಮಾಸುವ ಮುನ್ನವೇ ತಾಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಹುಲಿಯೊಂದು ಅಸ್ಸಾಂ ಮೂಲದ ರೆಹಮಾನ್ ನನ್ನು ಬಲಿಪಡೆದಿದೆ.

ಮುಝೀದ್ ರೆಹಮಾನ್ ಜಾಗಲೆ ಗ್ರಾಮದ ಕಾಫಿಬೆಳೆಗಾರ ಮಲಚೀರ ಅವಿನಾಶ್ ಎಂಬುವರ ಮನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಗುರುವಾರ ಸಂಜೆ ದನಕರುಗಳನ್ನು ಗದ್ದೆಯಲ್ಲಿ ಮೇಯಿಸುತ್ತಿದ್ದರು ಈ ವೇಳೆ ದಾಳಿ ಮಾಡಿದ ಹುಲಿ ಆತನನ್ನು ಬಲಿ ಪಡೆದಿದೆ.

ಕೆಲ ದಿನಗಳ ಹಿಂದಷ್ಟೇ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ತಿಂದಿದ್ದ ಹುಲಿ ದನ ಮೇಯಿಸುತ್ತಿದ್ದ ಸ್ಥಳಕ್ಕೆ ಗುರುವಾರ ಬಂದಿದ್ದು, ಅಲ್ಲಿ ದನ ಮೇಯಿಸುತ್ತಿದ್ದ ಕಾರ್ಮಿಕ ಮೇಲೆಯೇ ದಾಳಿ ಮಾಡಿ ಆತನ ಕತ್ತು ಮತ್ತು ತಲೆಭಾಗಕ್ಕೆ ಕಚ್ಚಿ ಗಾಯಗೊಳಿಸಿದ ಪರಿಣಾಮ ರೆಹಮಾನ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈಗಾಗಲೇ ಮೇಲಿಂದ ಮೇಲೆ ಜಿಲ್ಲೆಯಲ್ಲಿ ಕಾಡಾನೆ ಮತ್ತು ಹುಲಿಗಳು ದಾಳಿ ಮಾಡಿ ಜನರ ಪ್ರಾಣ ತೆಗೆಯುತ್ತಿರುವುದಕ್ಕೆ ಜಿಲ್ಲೆಯ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ