NEWSನಮ್ಮಜಿಲ್ಲೆನಮ್ಮರಾಜ್ಯ

ಕೊಡಗು: ವಿದ್ಯುತ್ ತಂತಿ ತಗುಲಿ ಧಗ ಧಗ ಉರಿದ ಟ್ರ್ಯಾಕ್ಟರ್​​ನಲ್ಲಿದ್ದ ಹುಲ್ಲು

ವಿಜಯಪಥ ಸಮಗ್ರ ಸುದ್ದಿ

ಕೊಡಗು: ಟ್ರ್ಯಾಕ್ಟರ್​​ನಲ್ಲಿ ಹುಲ್ಲು ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಟ್ರ್ಯಾಕ್ಟರ್‌ ಪಾರಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದ ಮಾರಿಗುಡಿ ಬಳಿ ನಡೆದಿದೆ.

ಸಾಮರ್ಥ್ಯಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಟ್ರ್ಯಾಕ್ಟರ್​ನಲ್ಲಿ ಹುಲ್ಲು ತುಂಬಿಕೊಂಡು ಹೋಗುತ್ತಿದ್ದರು. ಈ ವೇಳೆ ಗ್ರಾಮದ ಮಾರಿಗುಡಿ ಬಳಿ ಬರುವಾಗ ಮೇಲಿನಿಂದ ಹಾದು ಹೋಗಿದ್ದ ಕರೆಂಟ್ ವೈರ್ ತಗುಲಿದೆ. ತಕ್ಷಣ ಬೆಂಕಿಹೊತ್ತುಕೊಂಡು ಉರಿಯುತ್ತಿತ್ತು.

ಈ ವೇಳೆ ಟ್ರ್ಯಾಕ್ಟರ್​ ಚಾಲಕನ ಚಾಣಾಕ್ಷತೆಯಿಂದ ಟ್ರಾಲಿಯಲ್ಲಿದ್ದ ಹುಲ್ಲನ್ನು ಲಿಫ್ಟ್​ ಮಾಡುವ ಮೂಲಕ ಕೆಳಗೆ ಸುರಿದಿದ್ದಾನೆ. ಹೀಗಾಗಿ ಚಾಲಕ ಪಾರಾಗಿದ್ದಲ್ಲದೇ ಟ್ರ್ಯಾಕ್ಟರ್‌ಅನ್ನು ಕೂಡ ಸೇಫ್ ಮಾಡಿ ಆಗುವ ಅನಾಹುತ ತಪ್ಪಿಸಿದ್ದಾನೆ.

ಈ ಹುಲ್ಲು ಕುಂದಳ್ಳಿ ಗ್ರಾಮದ ಪ್ರವೀಣ್ ಎನ್ನುವರಿಗೆ ಸೇರಿದ್ದು ಬೆಟ್ಟದಳ್ಳಿಯಿಂದ ಮಸಗೋಡಿಗೆ ತೆಗೆದುಕೊಂಡು ಹೋಗಲಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್