NEWSನಮ್ಮಜಿಲ್ಲೆನಮ್ಮರಾಜ್ಯ

ಕೆ.ಆರ್.ಪೇಟೆ: ಕಕ್ಷಿದಾರರಿಗೆ ಶೀಘ್ರ ನ್ಯಾಯದಾನ ನೀಡಲು ವಕೀಲರು ಕೈಜೋಡಿಸಿ ಪ್ರಧಾನ ನ್ಯಾಯಾಧೀಶೆ ಕೃಪಾ ಸಲಹೆ

ವಕೀಲರ ಸಂಘದಿಂದ ಹೃದಯಸ್ಪರ್ಶಿ ಸ್ವಾಗತ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ಕಕ್ಷಿದಾರರಿಗೆ ಶೀಘ್ರವಾಗಿ ನ್ಯಾಯದಾನ ನೀಡಲು ವಕೀಲರು ನ್ಯಾಯಾಂಗ ವ್ಯವಸ್ಥೆಯೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು ಎಂದು ನೂತನ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೃಪಾ ಸಲಹೆ ನೀಡಿದರು.

ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಸ್ವಾಗತ ನೂತನ ನ್ಯಾಯಾಧೀಶರಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.

ನ್ಯಾಯಾಧಿಕರಣದ ರಥವನ್ನು ಮುನ್ನಡೆಸಲು ವಕೀಲರು ಸಹಕಾರ ನೀಡಬೇಕು. ಅದರಂತೆ ತಮ್ಮ ಕಕ್ಷಿದಾರರಿಗೆ ಶೀಘ್ರವಾಗಿ ನ್ಯಾಯದಾನ ನೀಡಲು ನ್ಯಾಯಾಂಗ ವ್ಯವಸ್ಥೆಯೊಂದಿಗೆ ಕೈಜೋಡಿಸ ಬೇಕು ಎಂದರು.

ನ್ಯಾಯಾಂಗದ ರಥಕ್ಕೆ ವಕೀಲರು ಮತ್ತು ನ್ಯಾಯಾಧೀಶರು ಎರಡು ಚಕ್ರಗಳಿದ್ದಂತೆ. ವಕೀಲರು ಶೀಘ್ರ ನ್ಯಾಯದಾನಕ್ಕೆ ಪೂರಕವಾಗಿ ನ್ಯಾಯಾಂಗ ವ್ಯವಸ್ಥೆಗೆ ಪೂರಕವಾಗಿ ಕೆಲಸ ಮಾಡಿ ಸಮರ್ಥವಾಗಿ ವಾದ ಮಂಡಿಸುವ ಮೂಲಕ ಕೈಜೋಡಿಸಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಹಿರಿಯ ಶ್ರೇಣಿ ಸಿವಿಲ್ ನೂತನ ನ್ಯಾಯಾಧೀಶರಾದ ಮಂಜುನಾಥ್ ಮಾತನಾಡಿ, ವಕೀಲರಿಗೆ ಕಾನೂನು ಪುಸ್ತಕಗಳೇ ರಾಮಾಯಣ, ಮಹಾಭಾರತ ಗ್ರಂಥಗಳಿದ್ದಂತೆ ಆದ್ದರಿಂದ ಕೇಸುಗಳ ಆಳಕ್ಕೆ ಇಳಿದು ಕಾನೂನು ಪುಸ್ತಗಳನ್ನು ಓದಿಕೊಂಡು ಸಮರ್ಥವಾಗಿ ವಾದ ಮಂಡಿಸಿ ಕಕ್ಷಿದಾರರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದರು.

ಅಪರ ಸಿವಿಲ್ ನ್ಯಾಯಾಧೀಶರಾದ ಶಕುಂತಲಾ, ಅರ್ಪಿತಾ, ವಕೀಲರ ಸಂಘದ ಅಧ್ಯಕ್ಷ ರವಿಶಂಕರ್, ಪ್ರಧಾನ ಕಾರ್ಯದರ್ಶಿ ರಾಜೇಗೌಡ, ಹಿರಿಯ ವಕೀಲರಾದ ಎಸ್.ಸಿ. ವಿಜಯಕುಮಾರ್, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಇದ್ದರು.
l ವರದಿ ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ