NEWSಕೃಷಿನಮ್ಮಜಿಲ್ಲೆ

KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಹಳೇ ಮೈಸೂರು ಭಾಗದ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆ ಭರ್ತಿಯಾಗಿದ್ದು, ಡ್ಯಾಂನಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರನ್ನು ಹರಿಯ ಬಿಡಲಾಗಿದೆ. ಇದರಿಂದ ಕಾವೇರಿ ಭೋರ್ಗರೆಯುತ್ತಿರುವುದರಿಂದ ಕಾವೇರಿ ಕೊಳ್ಳದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಹಳೇ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ ಭರ್ತಿಯಾಗಿದೆ. ಇನ್ನೂ ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗಿದೆ. ಹೀಗಾಗಿ ಕಾವೇರಿ ನದಿಯ ಅಕ್ಕಪಕ್ಕದ ಜನರಲ್ಲಿ ಪ್ರವಾಹ ಸಂಕಷ್ಟ ಎದುರಾಗಿದೆ.

ಕೆಆರ್‌ಎಸ್ ಅಣೆಕಟ್ಟೆಯಿಂದ ಒಂದು ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಟ್ಟಿರುವ ಪರಿಣಾಮ ಜಿಲ್ಲಾ ವ್ಯಾಪ್ತಿಯಲ್ಲಿ ಹಲವು ಅವಘಡಗಳು ಜರುಗಿವೆ. ಒಂದು ಕಡೆ ಕಾವೇರಿ ನದಿ ಅಕ್ಕಪಕ್ಕದ ಜಮೀನುಗಳು ಜಲಾವೃತಗೊಂಡು ಅಲ್ಲಿನ ಬೆಳೆಗಳು ಮುಳುಗಡೆಯಾಗಿವೆ.

ಮತ್ತೊಂದೆಡೆ, ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ಹಿನ್ನೆಲೆ ನದಿಗೆ ಇಳಿಯದಂತೆ ಭಕ್ತರಿಗೆ ನಿಷೇಧ ಹೇರಲಾಗಿದೆ. ಶ್ರೀರಂಗಪಟ್ಟಣ ಕೋಟೆ ಗಣಪತಿ ದೇವಸ್ಥಾನ ಕಾವೇರಿ ನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ವಿಘ್ನೇಶ್ವರನಿಗೆ ಪೂಜೆ ಇಲ್ಲದಂತಾಗಿದೆ.

ಇನ್ನು ಸುಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೂ ಜಲಕಂಟಕ ಎದುರಾಗಿದೆ. ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆ ರಂಗನತಿಟ್ಟಿನ 25 ನಡುಗಡ್ಡೆಗಳ ಪೈಕಿ ಬಹುತೇಕ ನಡುಗಡ್ಡೆಗಳು ಮುಳುಗಡೆಯಾಗಿವೆ. ಇದರಿಂದ ಇಲ್ಲಿನ ಪಕ್ಷಿ ಸಂಕುಲಗಳು ತಮ್ಮ ಗೂಡು, ಮೊಟ್ಟೆ, ಮರಿಗಳ ರಕ್ಷಣೆಗೆ ಪರದಾಡುತ್ತಿವೆ. ಅಲ್ಲದೇ ರಂಗನತಿಟ್ಟಿನ ವಾಕಿಂಗ್ ಪಾಥ್‌ ಸಹ ಮುಳುಗಡೆಯಾಗಿದೆ.

ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಡಿಸಿ ಡಾ.ಕುಮಾರ, ಜಿಪಂ ಸಿಇಒ ತನ್ವೀರ್ ಸೇಠ್ ಆಸೀಫ್ ಅವರು ಪ್ರವಾಹದಿಂದ ಆಗಿರುವ ಸಮಸ್ಯೆಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಮುಂದೆ 1.50 ಲಕ್ಷ ಕ್ಯುಸೆಕ್ ನೀರು ಬಿಟ್ಟರೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಜತೆಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಚಿಂತನೆ ಮಾಡಿದ್ದಾರೆ. ಇನ್ನು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕಾವೇರಿಯಿಂದ ಪ್ರವಾಹ ಸಮಸ್ಯೆಯನ್ನು ಎದುರಿಸುವ ಆತಂಕದಲ್ಲಿರುವ ಜನರಿಗೆ ರಕ್ಷಣೆ ನೀಡುವ ಮೂಲಕ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ