CRIMENEWSVideosನಮ್ಮಜಿಲ್ಲೆ

ಭ್ರಷ್ಟ ಕಾರ್ಮಿಕ ಅಧಿಕಾರಿಗೆ ಕೆಆರ್‌ಎಸ್ ಪಕ್ಷದಿಂದ ನಾಗರೀಕ ಸನ್ಮಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾರ್ಮಿಕ ಪರವಾನಿಗೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಗೆ ಸಿಕ್ಕಿದ ಕಾರ್ಮಿಕ ಅಧಿಕಾರಿಗೆ ಕೆಆರ್‌ಎಸ್ ಪಕ್ಷದ ವತಿಯಿಂದ ಸನ್ಮಾನ ಮಾಡಲು ಕಚೇರಿಗೆ ಹೋದಾಗ ಅಧಿಕಾರಿ ಇಲ್ಲದ ಕಾರಣ ಅವರ ಭಾವಚಿತ್ರಕ್ಕೆ ಸನ್ಮಾನ ಮಾಡಲಾಯಿತು.

ಸೆ.9ರಂದು ಬೆಂಗಳೂರಿನ ಬಾಗಲಗುಂಟೆಯಲ್ಲಿರುವ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ 10,000  ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ದಾಳಿಗೆ ಒಳಗಾದ ಭ್ರಷ್ಟ ಕಾರ್ಮಿಕ ಅಧಿಕಾರಿ ಶ್ಯಾಮರಾವ್‌ಗೆ ನಾಗರಿಕ ಸನ್ಮಾನ ಮಾಡುವ ಮೂಲಕ ಭ್ರಷ್ಟರಿಗೆ ಅವಮಾನ ಮಾಡುವ ವಿನೂತನ ಪ್ರತಿಭಟನೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸದಸ್ಯರು ಇಂದು ಆಯೋಜಿಸಿದರು.

ಭ್ರಷ್ಟ ಕಾರ್ಮಿಕ ಅಧಿಕಾರಿ ಕಚೇರಿಯಲ್ಲಿ ಇಲ್ಲವಾದುದರಿಂದ ಅವರು ಕುಳಿತುಕೊಳ್ಳುತ್ತಿದ್ದ ಕುರ್ಚಿಯ ಮೇಲೆ ಅವರ ಭಾವಚಿತ್ರ ಇಟ್ಟು, ಮೈಸೂರು ಪೇಟ ಹಾಕಿ ಶಾಲು ತೊಡಿಸಿ ಹಾರ ಹಾಕುವ ಮೂಲಕ ಅವಮಾನದ ಸನ್ಮಾನವನ್ನು ಮಾಡಿದರು.

ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ಬೆಂಗಳೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ನರಸಿಂಹ ರೆಡ್ಡಿ ಕೆ ಎಲ್, ದೇವರಾಜ್, ಲೋಕೇಶ್, ಬಾಲಕೃಷ್ಣ, ಶ್ರೀನಿವಾಸ ಮೂರ್ತಿ, ವಾಸುದೇವ, ಕೀರ್ತಿ ಗೌಡ ಹಾಗೂ ಬೆಂಗಳೂರಿನ ಪದಾಧಿಕಾರಿಗಳು ಹಾಗೂ ಸೈನಿಕರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ