KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
- ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ ಒಗ್ಗಟ್ಟಿಲ್ಲ ಎಂಬುವುದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ಅದಕ್ಕೆ ಮತ್ತೊಂದು ತಾಜಾ ನಿದರ್ಶನ ಹಿರಿಯೂರಿಗೆ ರಾತ್ರಿ ಹೋಗುತ್ತಿದ್ದ ಸಂಸ್ಥೆಯ ನಿರ್ವಾಹಕಿ ಅನುಭವಿಸಿದ ಯಾತನೆಯಾಗಿದೆ.
ಹೌದು! ಗುರುವಾರ ರಾತ್ರಿ 9.30ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶಿರಾ ಘಟಕದಲ್ಲಿ ನಿರ್ವಾಹಕಿ ಕರ್ತವ್ಯ ನಿರ್ವಹಿಸುತ್ತಿದ್ದು. ಕರ್ತವ್ಯ ಮುಗಿಸಿ ರಾತ್ರಿ ಸುಮಾರು 9:30 ಸಮಯದಲ್ಲಿ ಶಿರಾ ದಿಂದ ಹಿರಿಯೂರಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ತಮ್ಮದೇ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಕಲಬುರ್ಗಿ ಘಟಕ-2ರ ಚಾಲಕ ಮತ್ತು ನಿರ್ವಾಹಕ ಇಬ್ಬರು ಸರಿಯಾಗಿ ತಮ್ಮ ಡ್ಯೂಟಿ ಮಾಡದೆ ರಾತ್ರಿ ಟೋಲ್ ಬಳಿ ಇಳಿಸಿ ಉದ್ಧಟತನ ಮೆರೆದಿದ್ದಾರೆ.
ಇನ್ನು ಹಿರಿಯೂರು ಬಸ್ ನಿಲ್ದಾಣಕ್ಕೆ ಹೋಗದೆ ಬೈಪಾಸ್ ನಲ್ಲಿರುವ ಟಿಬಿ ಸರ್ಕಲ್ ಅಲ್ಲಿಯಾದರೂ ನಿಲ್ಲಿಸಿ ಎಂದು ಸಹೋದ್ಯೋಗಿ ನಿರ್ವಾಹಕಿ ಕೇಳಿಕೊಂಡಿದ್ದರು ಸಹ ಚಾಲಕ ಮತ್ತು ನಿರ್ವಾಹಕ ಇಬ್ಬರು ನಾವು ಹಿರಿಯೂರಿಗೆ ಹೋಗುವುದಿಲ್ಲ ಎಂದು ಹಿರಿಯೂರಿನ ಬಳಿ ರಿಂಗ್ ರೋಡ್ ರಸ್ತೆಯ ಮುಖಾಂತರ ಹೋಗಿದ್ದಾರೆ.
ಈ ವೇಳೆ ನಿರ್ವಾಹಕಿ ಎಷ್ಟೇ ಕೇಳಿಕೊಂಡರು ಸಹ ಅವರನ್ನೇ ಹೆದರಿಸಿ ಮೊಬೈಲನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೆ ಹಿರಿಯೂರಿನಿಂದ ಸುಮಾರು ಹದಿನೈದು ಕಿಲೋಮೀಟರ್ ದೂರದಲ್ಲಿರುವ ಅರ್ತಿಕೋಟೆ ಟೋಲ್ ಬಳಿ ತಮ್ಮ ಸಹೋದ್ಯೋಗಿ ಮಹಿಳಾ ಕಂಡಕ್ಟರನ್ನು ಇಳಿಸಿ ಹೋಗಿದ್ದಾರೆ.
ಆ ಸಮಯದಲ್ಲಿ ನಿರ್ವಾಹಕಿ ತಮ್ಮ ಪತಿಗೆ ಫೋನ್ ಕರೆ ಮಾಡಿ ವಿಚಾರ ತಿಳಿಸಿದ್ದು, ಬಳಿಕ ಪತಿ ಬಾಡಿಗೆ ಕಾರನ್ನು ಮಾಡಿಕೊಂಡು ಸುಮಾರು ಹನ್ನೊಂದು ಗಂಟೆಗೆ ಹೋಗಿ ಪತ್ನಿಯನ್ನು ಕ್ಷೇಮವಾಗಿ ಮನೆಗೆ ಕರೆದುಕೊಂಡು ಹೋಗಿದ್ದಾರೆ.
ಸಾರಿಗೆ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಅದೂ ಕೂಡ ತಮ್ಮ ಸಹೋದ್ಯೋಗಿಗೆ ಇವರು ಸ್ಟಾಪ್ ಕೊಡಲಿಲ್ಲ. ಜತೆಗೆ ತಾವು ತೆರಳಬೇಕಿರುವ ಮಾರ್ಗಬಿಟ್ಟು ಅನ್ಯ ಮಾರ್ಗದಲ್ಲಿ ಹೋಗಿದ್ದಾರೆ ಎಂದರೆ ಇದು ಎಷ್ಟರ ಮಟ್ಟಿಗೆ ಸರಿ. ಜತೆಗೆ ನೀನು ಬೇಕಾದರೆ ಕಲಬುರ್ಗಿಗೆ ಬಾ, ನಾನು ನಿನ್ನನ್ನು ಹಿಡಿಸುವುದಿಲ್ಲ ಎಂದು ಏಕವಚನದಲ್ಲಿ ಸಹೋದ್ಯೋಗಿ ಮಹಿಳೆ ಅವಾಜ್ಕೂಡ ಹಾಕಿದ್ದಾರೆ.

ಇನ್ನು ಇವರು ಒಬ್ಬ ಹೆಣ್ಣು ಮಗಳನ್ನು ರಾತ್ರಿ ಸಮಯದಲ್ಲಿ ಸುಮಾರು ಹದಿನೈದು ಕಿಲೋಮೀಟರ್ ದೂರದಲ್ಲಿರುವ ಅರ್ತಿಕೋಟೆ ಟೋಲ್ ಬಳಿ ಇಳಿಸಿ ಹೋಗುತ್ತಾರೆ ಎಂದರೆ ಇವರಲ್ಲಿ ಮಾನವೀಯತೆ ಇದೆಯೇ? ಹೋಗಲಿ ತಮ್ಮ ಸಹೋದ್ಯೋಗಿ ಎಂಬುದನ್ನು ಲೆಕ್ಕಿಸದೆ ಹೀಗೆ ನಡೆದುಕೊಂಡಿರುವುದು ಇವರಲ್ಲಿ ಇರುವ ಒಗ್ಗಟ್ಟು ಏನು ಎಂದು ತೋರಿಸುತ್ತಿದೆ. ಅಲ್ಲದೆ, ಹೀಗೆ ಪದೇಪದೆ ಸಹೋದ್ಯೋಗಿಗಳನ್ನೇ ಕೀಳಾಗಿ ಕಾಣುತ್ತಿರುವುದು ಸರಿಯೇ?
ಹೀಗಾಗಿ ಈ ರೀತಿ ರಾತ್ರಿ ಸಮಯದಲ್ಲಿ ಹದಿನೈದು ಕಿಲೋಮೀಟರ್ ದೂರದ ಅರ್ತಿಕೋಟೆ ಟೋಲ್ ಬಳಿ ಇಳಿಸಿ ಹೋಗಿರುವುದು ಅಲ್ಲದೆ ಮಾರ್ಗ ಬದಲಿಸಿಕೊಂಡು ಹೋಗಿರುವ ಈ ಇಬ್ಬರು ಚಾಲನಾ ಸಿಬ್ಬಂದಿಗಳನ್ನು ಕೂಡಲೇ ಅಮಾನತು ಮಾಡಬೇಕೆಂದು ಶಿರಾ ಘಟಕದ ನೌಕರರು ಒತ್ತಾಯಿಸಿದ್ದಾರೆ.
Related


You Might Also Like
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...
ಮೈಸೂರು-ಮನಕಲಕುವ ಘಟನೆ: ಆಸ್ಪತ್ರೆ ಬಿಲ್ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜತೆ ಭಿಕ್ಷೆ ಬೇಡಿದ ಕುಟುಂಬ
ಮೈಸೂರು: ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆಯ ಬಿಲ್ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ. ಹೌದು....
ವರದಕ್ಷಿಣೆ ಕಿರುಕುಳ ಆರೋಪ: ಚಲನಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ FIR ದಾಖಲು
ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಲನಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಸೊಸೆಯೇ ದೂರು...
ಡಾ.ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ಸರ್ಕಾರ ಘೊಷಣೆ- ಅಭಿಮಾನಿಗಳಲ್ಲಿ ಹರ್ಷ
ಬೆಂಗಳೂರು: ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ನಮ್ಮ ದಶಕಗಳ ಬೇಡಿಕೆ ಫಲಿಸಿದೆ ಎಂದು...
ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ....