NEWSದೇಶ-ವಿದೇಶನಮ್ಮಜಿಲ್ಲೆನಮ್ಮರಾಜ್ಯ

KSRTCಗೆ ಏಷ್ಯಾದ ಅತ್ಯುತ್ತಮ ಬ್ರಾಂಡ್ ಉದ್ಯೋಗದಾತ ಪ್ರಶಸ್ತಿ: ಆ.17ರಂದು ಸಿಂಗಾಪೂರ್‌ನಲ್ಲಿ ಪ್ರದಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮತ್ತೊಂದು ಗರಿ ಮೂಡಿಗೆರಿದೆ. ಏಷ್ಯಾದ ಅತ್ಯುತ್ತಮ ಬ್ರಾಂಡ್ ಉದ್ಯೋಗದಾತ ಪ್ರಶಸ್ತಿ ಅಂದರೆ ಏಷ್ಯಾಸ್ ಬೆಸ್ಟ್ ಎಂಪ್ಲಾಯರ್ ಅವಾರ್ಡ್ ಲಭಿಸಿದೆ. ಈ ಪ್ರಶಸ್ತಿಯನ್ನು ಇದೇ ಆಗಸ್ಟ್‌ ತಿಂಗಳಿನಲ್ಲಿ ಸಿಂಗಾಪೂರ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ರಾಜ್ಯದ ರಸ್ತೆ ಸಾರಿಗೆ ನಿಗಮ ನಾಡಿನ ಕೋಟ್ಯಂತರ ಜನರಿಗೆ ನಿತ್ಯ ಬಸ್ ಸೇವೆಗಳನ್ನು ಒದಗಿಸುತ್ತಿದೆ ಕರ್ನಾಟಕದ ಮೂಲೆ ಮೂಲೆಯಲ್ಲಿಯೂ KSRTC ಬಸ್‌ ಸಂಪರ್ಕ ಕಲ್ಪಿಸಿದೆ. ಇದರಿಂದಾಗಿ ಹಳ್ಳಿ ಹಳ್ಳಿಯಲ್ಲಿನ ಮಕ್ಕಳು ಅಥವಾ ಉದ್ಯೋಗಿಗಳು ತಮ್ಮ ತಮ್ಮ ಕೆಲಸಕ್ಕೆ ಹೋಗಲು ಅನುಕೂಲಕರವಾಗಿದೆ.

ಈಗ ಸರ್ಕಾರ KSRTC ಬಸ್ ಸಂಪರ್ಕವನ್ನು ಹಳ್ಳಿಯ ಮೂಲೆ ಮೂಲೆಗೂ ಕಲ್ಪಿಸಿದ್ದು, ಜನರಿಗೆ ಬಹಳ ಅನುಕೂಲವಾಗಿದೆ. ಸಿಬ್ಬಂದಿಗಳ ಸಮಾಧಾನಕರ ಸೇವೆ ವಾಹನ ಚಾಲನೆ ಸರಿಯಾದ ಸಮಯಕ್ಕೆ ಬಸ್ ಬರುವುದು ಮೊದಲಾದ ಕಾರಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಈ ಪ್ರಶಸ್ತಿಗೆ ಭಾಜನವಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಬೆಸ್ಟ್ ಬ್ರಾಂಡ್ ಎಂಪ್ಲಾಯರ್ ಪ್ರಶಸ್ತಿಯನ್ನು ‘ಆರ್ಗನೈಜೇಷನ್ ವಿಥ್ ಇನೋವೇಟಿವ್ ಎಚ್ ಆರ್ ಪ್ರಾಕ್ಟಿಸಸ್’ ವಿಭಾಗದಲ್ಲಿ ನೀಡಲಾಗಿದೆ. ಮಂಗಳವಾರ ಅಂದರೆ ಆಗಸ್ಟ್ 8 2023ರಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬ್ರಾಂಡ್ ಕಾಂಗ್ರೆಸ್‌ನ 14ನೇ ಆವೃತ್ತಿಯಲ್ಲಿ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಈ ಪ್ರಶಸ್ತಿ ನಿಗಮಕ್ಕೆ ಸಂದಿರುವುದಕ್ಕೆ ಸಂತಸಗೊಂಡಿರುವ ಸಂಸ್ಥೆಯ ಮುಖ್ಯಸ್ಥರು ಆಗಸ್ಟ್ 17, 2023ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಿರುವುದರ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ನಿಗಮಕ್ಕೆ ಈ ಪ್ರಶಸ್ತಿ ಲಭಿಸಿರುವುದು ಮುಖ್ಯವಾಗಿ ನೌಕರರ ಅವಿರತ ಸೇವೆಯ ಶ್ರಮದಿಂದ, ಅಧಿಕಾರಿಗಳ ಶ್ರಮವು ಇದರಲ್ಲಿ ಇದೆ. ಆದರೆ ಸರಿಯಾದ ಸಮಯಕ್ಕೆ ಸೇವೆ ಒದಗಿಸುವ ನಿಟ್ಟಿನಲ್ಲಿ ಚಾಲನಾ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಈ ಪ್ರಶಸ್ತಿಯ ಹಿರಿಮೆ ಚಾಲನಾ ಸಿಬ್ಬಂದಿಗೆ ಸಲ್ಲಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖುಷಿ ಹಂಚಿಕೊಂಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು