NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅತೀ ಶೀಘ್ರದಲ್ಲೇ ರಸ್ತೆಗಿಳಿಯಲಿವೆ ನಿಗಮದ ಲಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಸ್ತುತ KSRTC ತನ್ನ ಸರಕು ಸಾಗಾಣಿಕೆಗಳನ್ನು ಬಸ್‌ಗಳಲ್ಲೇ ಸಾಗಣೆ ಮಾಡುತ್ತದೆ. ಹೀಗಾಗಿ ಇನ್ನು ಮುಂದೆ ಪಾರ್ಸಲ್‌ ಮೂಲಕ ಸರಕು ಸಾಗಣೆ ಮಾಡುತ್ತಿರುವುದನ್ನು ನಿಲ್ಲಿಸಿ ಭವಿಷ್ಯದಲ್ಲಿ ಲಾರಿಗಳ ಮೂಲಕ ಅದೂ KSRTC ಲಾರಿಗಳ ಮೂಲಕ ಸರಕು ಸಾಗಣೆ ಮಾಡುವುದಕ್ಕೆ ಮುಂದಾಗಿ.

ಈ ಸರಗು ಸಾಗಣೆ ವ್ಯವಹಾರದ ಮೇಲೆ ಕಣ್ಣಿಟ್ಟು ಲಾರಿಗಳನ್ನು ಖರೀದಿಸಲು ಮುಂದಾಗಿದೆ. ಇದಿಷ್ಟೇ ಅಲ್ಲದೆ ಶೀಘ್ರದಲ್ಲೇ ಲಾರಿಗಳ ಸೇವೆ ಒದಗಿಸಲಾಗುವುದು ಎಂಬ ಬಗ್ಗೆ ಅಧಿಕೃತ ಮಾಹಿತಿ ಕೂಡ ಹೊರಬಿದ್ದಿದೆ.

ಈ ಮೂಲಕ ಸರಕು ಸಾಗಾಣಿಕೆಗಾಗಿಯೇ ಪ್ರತ್ಯೇಕ ವಾಹನಗಳ ಸೇವೆ ಒದಗಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದ್ದು, ತನ್ನ ಆರ್ಥಿಕ ಶಕ್ತಿಯನ್ನು ವೃದ್ಧಿಸಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿ ಮುಳುಗಿದೆ.

ಇನ್ನು ಪ್ರಸ್ತುತ KSRTC ತನ್ನ ಸರಕು ಸಾಗಾಣಿಕೆಗಳನ್ನು ಬಸ್‌ಗಳಲ್ಲೇ ಪಾರ್ಸೆಲ್ ಮೂಲಕ ಸಾಗಣೆ ಮಾಡುತ್ತದೆ. ಈಗಲೂ ಕೂಡ ಆ ಪಾರ್ಸೆಲ್‌ಗಳಿಗೆ ಬಾಡಿಗೆಯನ್ನು ತೆಗೆದುಕೊಳ್ಳುತ್ತಿದೆ. ಆದರೆ ದೊಡ್ಡಮಟ್ಟದಲ್ಲಿ ಸರಕು ಸಾಗಣೆ ಮಾಡಲಾಗುತ್ತಿಲ್ಲ. ಹೀಗಾಗಿ ದೊಡ್ಡ ಮಟ್ಟದಲ್ಲೇ ಸರಕುಗಳನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಸಾಗಿಸಲು ಮುಂದಾಗುತ್ತಿದೆ.

ನಿಗಮದಿಂದ ಸರಕು ಲಾರಿಗಳನ್ನು ರಸ್ತೆಗಿಳಿಸಲಾಗುತ್ತದೆ ಎಂದು ತಿಳಿಸಿದ್ದು, ಇದಕ್ಕೆ ಚಾಲಕರನ್ನು ನಿಗಮದಿಂದ ನೇರ ನೇಮಕಾತಿ ಮಾಡಿಕೊಳ್ಳುತ್ತದೆಯೋ ಇಲ್ಲ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಬೇಕೊ ಎಂಬ ಬಗ್ಗೆ ಇನ್ನು ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.

ಈ ನಡುವೆ ಈಗಗಾಲೇ ಬಸ್‌ಗಳಲ್ಲಿ ಚಾಲಕ ಮತ್ತು ನಿರ್ವಾಹಕರ ಸಂಖ್ಯೆ ತಿಂಗಳಿಂದ ತಿಂಗಳಿಗೆ ಕ್ಷೀಣಿಸುತ್ತಿದ್ದು, ನಿವೃತ್ತಾರದ ನೌಕರರ ಸ್ಥಾನಕ್ಕೆ ಖಾಸಗಿಯಾಗಿ ಚಾಲನಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವುದಕ್ಕೆ ಮುಂದಾಗಿದೆ. ಆದರೆ ಅಂದು ಕೊಂಡಷ್ಟರ ಮಟ್ಟಿಗೆ ಈ ಗುತ್ತಿಗೆ ಆಧಾರದ ಮೇಲೆ ನೇಮಕವಾಗುತ್ತಿಲ್ಲ ಎಂದು ಕೂಡ ಹೇಳಲಾಗುತ್ತಿದೆ.

ಇತ್ತ ಲಾರಿಗಳನ್ನು ನಿಗಮದಿಂದ ಲಾರಿಗಳನ್ನು ರಸ್ತೆಗಳಿಸುವುದು ಸರಿಯಾದ ನಿರ್ಧಾರವೇ ಆಗಿದ್ದರೂ ಕೂಡ ಆ ಲಾರಿಗಳ ಚಾಲಕರನ್ನು ಹೇಗೆ ನೇಮಿಸಿಕೊಳ್ಳಬೇಕು ಎಂಬ ಬಗ್ಗೆ ದೃಢ ನಿರ್ಧಾರ ತೆಗೆದುಕೊಳ್ಳಬೇಕಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ