NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಧಿಕ ಪಿಂಚಣಿ ಸಂಬಂಧ ಎಂಡಿ ಜತೆ ಚರ್ಚೆ- ಶೀಘ್ರ ಪರಿಹಾರದ ಭರವಸೆ ಕೊಟ್ಟ ಅನ್ಬುಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನಿವೃತ್ತ ನೌಕರರ ಅಧಿಕ ಪಿಂಚಣಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ಪದಾಧಿಕಾರಿಗಳು ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಂಘದ ಪದಾಧಿಕಾರಿಗಳು ಒಟ್ಟಾಗಿ ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ಅವರ ಕಚೇರಿಯಲ್ಲಿ ಗುರುವಾರ ಭೇಟಿ ಮಾಡಿ, ಸಂಸ್ಥೆಯ ನಿವೃತ್ತ ನೌಕರರ ಅಧಿಕ ಪಿಂಚಣಿಗೆ ಸಂಬಂಧ ಸುದೀರ್ಘ ಚರ್ಚೆ ನಡೆಸಿದರು.

ಭೇಟಿ ವೇಳೆ ಪದಾಧಿಕಾರಿಗಳನ್ನು ಬರಮಾಡಿಕೊಂಡ ಸಂಸ್ಥೆಯ ಮುಖ್ಯಸ್ಥರು, ಹರ್ಷ ವ್ಯಕ್ತಪಡಿಸಿ ತಾವೆಲ್ಲರೂ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದೀರಿ, ನಿವೃತ್ತಿಯ ನಂತರ ನಿಮ್ಮ ಕಷ್ಟ ಏನೆಂದು ನಮಗೆ ತಿಳಿದಿದೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಂಡಿ ಭರವಸೆ ನೀಡಿದ್ದಾರೆ.

ಅಲ್ಲದೆ ನೀವು ಕೊಟ್ಟಿರುವ ಮನವಿಯನ್ನು ಪರಾಮರ್ಶಿಸಿದ, ನೌಕರರ ಸೇವಾ ವಿವರಗಳಲ್ಲಿ ಯಾವುದೇ ದೋಷವಿದ್ದಲ್ಲಿ ಅದನ್ನು ಸರಿಪಡಿಸಲು, ಸಂಸ್ಥೆಯ ವತಿಯಿಂದ ಸಿಬ್ಬಂದಿಯನ್ನು ನಿಯೋಜಿಸಿ, ಎರಡು ಕಂಪ್ಯೂಟರ್ ಸೆಂಟರ್ ತೆರೆಯಲಾಗುವುದು ಎಂದು ತಿಳಿಸಿದರು.

ಇನ್ನು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಶೀಘ್ರ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಪಿಎಫ್ಒ ಅಧಿಕಾರಿಗಳಿಗೆ ಕೂಡಲೇ ಪತ್ರ ಸಿದ್ಧಪಡಿಸುವಂತೆ ಹಾಗೂ ಮನವಿ ಪತ್ರಗಳ ಸಂಪೂರ್ಣ ವಿವರವನ್ನು ತಮಗೆ ಮಂಡಿಸುವಂತೆ ತಮ್ಮ ಆಪ್ತ ಕಾರ್ಯದರ್ಶಿಗೆ ನಿರ್ದೇಶಿಸಿದರು.

ಒಟ್ಟಾರೆ, ಸಂಸ್ಥೆಯ ಮುಖ್ಯಸ್ಥರ ಜತೆ ನಡೆದ ಚರ್ಚೆ ಅತ್ಯಂತ ಸೌಹಾರ್ತವಾಗಿದ್ದು, ಎಂಡಿ ಅವರಿಗೆ ನೀಡಿದ ಮನವಿ ಪತ್ರದಲ್ಲಿ ನಾವು ಸಂಸ್ಥೆಯಲ್ಲಿ ಸಲ್ಲಿಸಿದ ಸೇವೆ ಹಾಗೂ ಈವರವಿಗೂ ನಡೆಸಿದ ಹೋರಾಟದ ಪ್ರತಿಯೊಂದು ಅಂಶಗಳನ್ನು ಉಲ್ಲೇಖಿಸಿದ್ದು, ಅವುಗಳನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಲಾಗಿದೆ ಎಂದು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಪದಾಧಿಕಾರಿಗಳಾದ ಶಂಕರ್‌ ಕುಮಾರ್‌, ಸುಬ್ಬಣ್ಣ, ಡೋಲಪ್ಪ, ಕೃಷ್ಣಮೂರ್ತಿ, ಜಿಎಸ್‌ಎಂ ಸ್ವಾಮಿ, ಕುಲಕರಣಿ, ವೀರಕುಮಾರ್‌ ಗಡದ್‌, ಬ್ರಹ್ಮಚಾರಿ, ವೇಲೂರು ಅಮರ್‌ ಇತರರು ಇದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ