NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಪಘಾತದಿಂದ ಮೃತಪಟ್ಟ ನಾಲ್ವರು ನೌಕರರ ಕುಟುಂಬಕ್ಕೆ ತಲಾ 1ಕೋಟಿ ರೂ. ಚೆಕ್‌ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನೌಕರರ ಕುಟುಂಬದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಂಸ್ಥೆಯ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ತಲಾ ಒಂದು ಕೋಟಿ ರೂಪಾಯಿ
ಪರಿಹಾರದ ಚೆಕ್‌ ವಿತರಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ KSRTC ಅಪಘಾತ ವಿಮೆ (ಸಾರಿಗೆ ಸುರಕ್ಷಾ) ಅಡಿಯಲ್ಲಿ ಈ ಚೆಕ್ಕ ವಿತರಿಲಸಾಯಿತು. ಇದರ ಜತೆಗೆ ನಿಗಮದ ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆಯಡಿ ಅಪಘಾತ ಹೊರತುಪಡಿಸಿ ವಿವಿಧ ಕಾಯಿಲೆಗಳಿಂದ ಮೃತಪಟ್ಟ 23 ನೌಕರರ ಅವಲಂಬಿತರಿಗೆ ತಲಾ 10 ಲಕ್ಷ ರೂ. ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಂಚರಿಸುವ ವೇಳೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಪ್ರಯಾಣಿಕರ ಅವಲಂಬಿತರಿಗೆ ತಲಾ 10 ಲಕ್ಷ ರೂ.ಗಳ ಚೆಕ್‌ ವಿತರಿಸಿದರು.

ಬಳಿಕ ಮಾತನಾಡಿದ ಸಚಿವರು, ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಪ್ರಯಾಣಿಕರಿಗಾಗಿ ನಿಗಮವು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ, ಜಾರಿಗೊಳಿಸಿದೆ. ಮೃತಪಟ್ಟವರ ಜೀವವು ಅಮೂಲ್ಯವಾಗಿದ್ದು, ಅದನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ, ಅವರ ಕುಟುಂಬದ ಆರ್ಥಿಕ ಭದ್ರತೆಗಾಗಿ ನಿಗಮವು ಒಂದು ಕೋಟಿ ರೂ. ವಿಮೆ ಯೋಜನೆ ದೂರದೃಷ್ಟಿಯನ್ನು ಹೊಂದಿದೆ ಎಂದು ತಿಳಿಸಿದರು.

ಇನ್ನು ಇಲ್ಲಿಯವರೆಗೆ ಅಪಘಾತದಲ್ಲಿ ಮೃತಪಟ್ಟ ನಿಗಮದ 17 ಮಂದಿಯ ಕುಟುಂಬಕ್ಕೆ ಈ ವಿಮೆ ತಲುಪಿದೆ. ಕುಟುಂಬದ ಸದಸ್ಯರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಮನೆ ನಿರ್ಮಾಣಕ್ಕೆ ಈ ಮೊತ್ತವನ್ನು ಬಳಸಿಕೊಳ್ಳಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದರು.

ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಗಮದ ನೌಕರರು, ಅಧಿಕಾರಿಗಳು ಮತ್ತು ನೌಕರರ ಮುಖಂಡರನ್ನು ಇದೇ ವೇಳೆ ಅಭಿನಂದಿಸಿ, ವಿದ್ಯಾ ಚೇತನ ಯೋಜನೆಯಡಿ ವಿದ್ಯಾರ್ಥಿ ವೇತನದ ಮೊತ್ತವನ್ನು ಹೆಚ್ಚಿಸುವ ಆಧ್ಯತೆಯನ್ನು ಅನ್ವೇಷಿಸಲು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಸೂಚಿಸಿದರು.

ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ನಿಗಮದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಶ್ರಮಜೀವಿಗಳು. ಅವರಿಗೆ ಸಲ್ಲಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು. ಈಗ ಪರಿಹಾರ ಮೊತ್ತ ಪಡೆದವರು ಅದನ್ನು ಸಮರ್ಪಕವಾಗಿ ಬಳಕೆಮಾಡಿಕೊಂಡು ಕುಟುಂಬವನ್ನು ಸ್ವಾವಲಂಬಿಯನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು.

ಇನ್ನು ಅಪಘಾತ ಹೊರತುಪಡಿಸಿ ಅನಾರೋಗ್ಯದಿಂದ ಮೃತಪಟ್ಟ 23 ಸಿಬ್ಬಂದಿಯ ಕುಟುಂಬಕ್ಕೆ ತಲಾ 10 ಲಕ್ಷ ರೂ. ವಿತರಿಸಲಾಯಿತು. ಈ ಯೋಜನೆ ಜಾರಿಯಾದ ಮೇಲೆ ಒಟ್ಟು 39 ನೌಕರರಿಗೆ ಈ ವಿಮೆ ಪರಿಹಾರ ನೀಡಲಾಗಿದೆ. ನಿಗಮದ ಬಸ್‌ಗಳು ಅಪಘಾತಕ್ಕೀಡಾಗಿ ಮೃತಪಟ್ಟ ನಾಲ್ವರು ಪ್ರಯಾಣಿಕರ ಕುಟುಂಬಕ್ಕೆ ಅಪಘಾತ ಪರಿಹಾರ ವಿಮೆಯಡಿ ತಲಾ 10 ಲಕ್ಷ ರೂ. ನೀಡಲಾಗಿದೆ.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ನೌಕರರ ಸಂಘಟನೆಗಳ ಮುಖಂಡರಾದ ಅನಂತಸುಬ್ಬರಾವ್, ವಿಜಯಭಾಸ್ಕರ್, ರೇವಪ್ಪ, ಮಂಜುನಾಥ್, ಚಂದ್ರಶೇಖರ್, ನಾಗರಾಜು, ವೆಂಕಟರಮಣಪ್ಪ, ಜಯರಾಜ ಅರಸು ಸೇರಿದಂತೆ ಇತರರು ಭಾಗವಹಿಸಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ