NEWSದೇಶ-ವಿದೇಶನಮ್ಮರಾಜ್ಯ

KSRTC: ಕ್ರೀಡಾಭ್ಯಾಸ ನಿರತ ನೌಕರರಿಗೆ ಸೆ.1ರಿಂದ15ರವರೆಗೂ ಕರ್ತವ್ಯದ ಮೇಲೆಂದು ಪರಿಗಣಿಸಿ – ಕಾರ್ಮಿಕ ಕಲ್ಯಾಣಾಧಿಕಾರಿ ಆದೇಶ

ವಿಜಯಪಥ ಸಮಗ್ರ ಸುದ್ದಿ
  • ಸೆ.19ರಿಂದ 21ರವರೆಗೆ ವಿಶಾಖಪಟ್ಟಣಂನಲ್ಲಿ ASRTU ವತಿಯಿಂದ ದೇಶದ ಎಲ್ಲ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ನಡೆಯಲಿದೆ ಅಥ್ಲೆಟಿಕ್ ಕ್ರೀಡಾಕೂಟ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ASRTU ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವ ಸಂಸ್ಥೆಯ ಆಟಗಾರರಿಗೆ ಅಭ್ಯಾಸ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕರ್ತವ್ಯದ ಮೇಲೆ ಎಂದು ಪರಿಗಣಿಸಬೇಕು ಎಂದು ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಸಂಸ್ಥೆಯ ಹಿರಿಯ/ವಿಭಾಗೀಯ ನಿಯಂತ್ರಣಾಧಿಕಾರಿಗಳು ಬೆಂಗಳೂರು ಕೇಂದ್ರೀಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು ಗ್ರಾಮಾಂತರ, ಮೈಸೂರು ನಗರ, ಮಂಡ್ಯ, ಹಾಸನ, ಮಂಗಳೂರು, ಪುತ್ತೂರು, ಶಿವಮೊಗ್ಗ, ಚಿತ್ರದುರ್ಗ, ಕೆಂ.ಬಂ.ನಿ ವಿಭಾಗ ಕಾರ್ಯ ವ್ಯವಸ್ಥಾಪಕರು, ಪ್ರಾ.ಕಾ ಹಾಸನದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ASRTU ವತಿಯಿಂದ ದೇಶದ ಎಲ್ಲ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಅಥ್ಲೆಟಿಕ್ ಕ್ರೀಡಾಕೂಟವನ್ನು 19.09.2024 ರಿಂದ 21.09.2024 ರವರೆಗೆ ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗಿ. ಈ ಸಂಬಂಧ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ನಿಗಮದ ತಂಡಕ್ಕೆ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ.

ಆ ಮಾಡಲಾದ ಪಟ್ಟಿಯಲ್ಲಿರುವ ಮೇಲ್ವಿಚಾರಕ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಇತರೇ ಕ್ರೀಡಾಪಟುಗಳನ್ನು 01.09.2024 ರಿಂದ 15.09.2024 ರವರೆಗೆ ಕರ್ತವ್ಯದ ಮೇಲೆ ಎಂದು ಪರಿಗಣಿಸಿ ಕ್ರೀಡಾಭ್ಯಾಸಕ್ಕೆ ನಿಯೋಜಿಸಲು ಹಾಗೂ ತಮ್ಮ ವಿಭಾಗ ವ್ಯಾಪ್ತಿಯ ಜಿಲ್ಲಾ ಕ್ರೀಡಾಂಗಣದ ವ್ಯವಸ್ಥಾಪಕರನ್ನು ಸಂಪರ್ಕಿಸಿ, ಕ್ರೀಡಾಪಟುಗಳು ಈ ಅವಧಿಯಲ್ಲಿ ಅಭ್ಯಾಸ ಮಾಡಲು ವ್ಯವಸ್ಥೆ ಮಾಡಲು ಕೋರಿದ್ದಾರೆ.

ಮುಂದುವರಿದು, 16.09.2024ಕ್ಕೆ ವಿಶಾಖಪಟ್ಟಣಂಗೆ ರೈಲ್ವೆ ಪ್ರಯಾಣಕ್ಕೆ ಈಗಾಗಲೇ ಮೂಂಗಡವಾಗಿ ಟಿಕೆಟ್ ಅನ್ನು ಕಾಯ್ದಿರಿಸಿದ್ದು ಎಲ್ಲ ಕ್ರೀಡಾಪಟುಗಳು ಆ ದಿನ ಬೆಳಗ್ಗೆ ಬೆಂಗಳೂರಿನಲ್ಲಿ ಹಾಜರಿರುವಂತೆ ಸೂಚಿಸಿ, ಸಂಚಲನಾ ಆದೇಶ ನೀಡಲು ತಿಳಿಸಿದ್ದಾರೆ.

ನೇರ ನಿಗಾವಹಿಸಿ ಕ್ರೀಡಾಪಟುಗಳು ನಿರಂತರ ಅಭ್ಯಾಸದಲ್ಲಿರುವ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಂಡು ಆಗಿಂದ್ದಾಗೆ ಕೇಂದ್ರ ಕಚೇರಿಗೆ ಮಾಹಿತಿ ನೀಡುವಂತೆ ವಿಭಾಗದ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು ಸೂಚಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ