NEWSನಮ್ಮಜಿಲ್ಲೆನಮ್ಮರಾಜ್ಯ

KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಕುಣಿಗಲ್ ಘಟಕದ ಚಾಲಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದು, ವಿಷಯ ತಿಳಿದ ಕೂಡಲೇ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ.

ಕೇಂದ್ರ ಕಚೇರಿಯ ಎಲ್ಲ ಅಧಿಕಾರಿಗಳು ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆಸ್ಪತ್ರೆಗೆ ಆಗಮಿಸಿ ಚಾಲಕ ನಾರಾಯಣ ಅವರ ಆರೋಗ್ಯ ವಿಚಾರಿಸಿ ನೌಕರನಿಗೆ ಧೈರ್ಯ ತುಂಬಿ ಸಾಂತ್ವಾನ ಹೇಳಿ, ಸಂಸ್ಥೆಯು ನಿಮ್ಮ ಪರವಾಗಿ ಇದೆ ಎಂದು ಮನವರಿಕೆ ಮಾಡಿದರು.

ಘಟನೆ ವಿವರ: ಡಿ.10ರಂದು ತುಮಕೂರು – ಮೈಸೂರು ನಡುವೆ ಮಾರ್ಗಾಚರಣೆಯಲ್ಲಿದ್ದಾಗ ತುಮಕೂರು ಲಾ ಕಾಲೇಜಿನ ಹತ್ತಿರ ಕುಣಿಗಲ್ ಘಟಕದ ಚಾಲಕ ನಾರಾಯಣ ಅವರಿಗೆ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಹಲ್ಲೆ ಮಾಡಿದ್ದಾರೆ.

ಹಲ್ಲೆಗೆ ಕಾರಣ ಬಸ್‌ ತುಂಬಾ ರಷ್‌ ಇದ್ದ ಕಾರಣ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕ ನಾರಾಯಣ ನೇತಾಡಿಕೊಂಡು ಬರಬೇಡಿ ಒಳಗೆ ಬನ್ನಿ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಬಸ್‌ ಇಳಿದು ಚಾಲಕನ ಸೀಟ್‌ ಬಳಿ ಬಂದು ಹಲ್ಲೆ ಮಾಡಿದ್ದಾರೆ.

ಚಾಲಕ ಕರ್ತವ್ಯದ ಮೇಲಿದ್ದಾಗಲೇ ಇಚ್ಛಾನುಸಾರವಾಗಿ ಹೊಡೆದಿರುವ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ಪೊಲೀಸರು ಸ್ಥಳ ಮಹಜರ್‌ ಮಾಡದೆ ವಿದ್ಯಾರ್ಥಿಗಳನ್ನು ಬಂಧಿಸದೆ ಸಬೂಬು ಹೇಳಿಕೊಂಡು ದೂರು ಕೊಟ್ಟ ಚಾಲಕ ಮತ್ತು ನಿರ್ವಾಹಕರನ್ನು ಅಲೆಸಿದ್ದಾರೆ.

ಗುರುವಾರ ಬೆಳಗ್ಗಿನಿಂದ ಸಂಜೆವರೆಗೂ ಕಾಯಿಸಿ ಬಳಿಕ ಸ್ಥಳ ಮಹಜರ್‌ ಮಾಡದೆ ನಾಳೆ ಬನ್ನಿ ಎಂದು ವಾಪಸ್‌ ಕಳಿಸಿದ್ದಾರೆ. ಜತೆಗೆ ಹಲ್ಲೆ ಮಾಡಿದವರ ವಿರುದ್ಧವೂ 48 ಗಂಟೆ ಕಳೆದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮನನೊಂದ ಚಾಲಕ ನಾರಾಯಣ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇತ್ತ ವಿಷ ಕುಡಿದಿರುವುದು ತಿಳಿದ ಕೂಡಲೇ ಅವರ ಸ್ನೇಹಿತರು ಕುಣಿಗಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಷ್ಟೆಲ್ಲವಾದರೂ ಕೂಡ ಸಾರಿಗೆ ಸಂಸ್ಥೆಯಿಂದ ಯಾವುದೇ ಅಧಿಕಾರಿಗಳು ಈ ಬಗ್ಗೆ ವಿಚಾರಿಸಿಲ್ಲ. ಚಾಲಕರ ನೋವಿಗೆ ಸ್ಪಂದಿಸಿಲ್ಲ. ಎಫ್ಐಆರ್ ಆದರೂ ಕೂಡ ಹಲ್ಲೆಕೋರರ ವಿರುದ್ಧ ಪೊಲೀಸರು ಕ್ರಮ ಜರುಗಿಸದೆ ಹೊರಗಡೆ ಬಿಟ್ಟಿರುವುದು ಅವಮಾನ ಆಗಿದೆ ಎಂದು ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆ ಎಂದು ಸಹೋದ್ಯೋಗಿಗಳು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ