NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಅ.5ರಂದು ಹಮ್ಮಿಕೊಂಡಿದ್ದ ಪ್ರತಿಭಟನೆ ಕೈಬಿಡಲಾಗಿದೆ: CITU

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್‌ 5ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ( CITU ) ಹಮ್ಮಿಕೊಂಡಿದ ಪ್ರತಿಭಟನೆಯನ್ನು ಕೈ ಬಿಡಲಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌. ಮಂಜುನಾಥ್ ತಿಳಿಸಿದ್ದಾರೆ.

ಸಿಐಟಿಯು ಅಧ್ಯಕ್ಷ ರೇವಪ್ಪ, ಉಪಾಧ್ಯಕ್ಷ ಡಾ. ಕೆ. ಪ್ರಕಾಶ್ ಹಾಗೂ ಫೆಡರೇಷನ್ ಪದಾಧಿಕಾರಿಗಳು ಸಾರಿಗೆ ಸಚಿವರಿಗೆ ನೌಕರರ ಸಮಸ್ಯೆ ಆಲಿಸುವ ಜತೆಗೆ ಪರಿಹರಿಸುವ ಸಂಬಂಧ ಸಭೆ ಕರೆಯುವಂತೆ ಒತ್ತಾಯಿಸಿದ್ದೆವು. ಆದರೆ ಇಲ್ಲಿವರೆಗೂ ಸಭೆ ಕರೆದು ಬೇಡಿಕೆಗಳ ಬಗ್ಗೆ ಚರ್ಚಿಸಿಲ್ಲ ಅಂತ ಅ.5ರಂದು ಪ್ರತಿಭಟನೆ ಹಮ್ಮಿಕೊಳ್ಳುವ ಬಗ್ಗೆ ಕಳೆದ ಸೆಪ್ಟೆಂಬರ್‌ನಲ್ಲಿ ತೀರ್ಮಾನ ತೆಗೆದುಕೊಂಡಿದ್ದೆವು.

ಈ ಮಧ್ಯೆ ಸಾರಿಗೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿ ಸಭೆ ಕರೆಯುವಂತೆ ಮನವಿ ಮಾಡಿದ್ದೆವು. ಸಾರಿಗೆ ಸಚಿವರು KSRTCಯ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದ ಮೇರೆಗೆ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಿಗಮದ ಎಲ್ಲ ಹಿರಿಯ ಅಧಿಕಾರಿಗಳನ್ನೊಳಗೊಂಡು CITU ಫೆಡರೇಷನ್ ನೀಡಿದ್ದ ಬೇಡಿಕೆಗಳ ಬಗ್ಗೆ 30.09.202 ರ ಶನಿವಾರ KSRTC ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಿತು.

ಈ ಸಭೆಯಲ್ಲಿ ಬೇಡಿಕೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿಲಾಯಿತು. ಫೆಡರೇಷನ್ ಮುಖಂಡರ ಜತೆ ನಡೆದ ಸಭೆಯಲ್ಲಿ ನಾವಿ ಇಟ್ಟಿರುವ ಬೇಡಿಕೆಗಳ ಅಂಶಗಳ ನಡಾವಳಿಯನ್ನು ಮಾಡಿ ಸಚಿವರ ಅಧ್ಯಕ್ಷತೆಯಲ್ಲಿ ಪುನಃ ಸಭೆ ನಡೆಸುವುದಾಗಿ ಎಂಡಿ ತಿಳಿಸಿದರು. ಸಚಿವರು ಸಹ ಸಭೆಯನ್ನು ನಡೆಸೋಣ ಅಂತ ಹೇಳಿದ್ದಾರೆ ಎಂದು ತಿಳಿಸಿದರು.

ನಾವು ಸಹ ವಿಳಂಬವಿಲ್ಲದೆ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದೆವು. ಅಂತಿಮವಾಗಿ ವ್ಯವಸ್ಥಾಪಕ ನಿರ್ದೇಶಕರು ಬೇಡಿಕೆಗಳ ಬಗ್ಗೆ ಚರ್ಚೆ ಮಾಡಿದ್ದು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ಪುನಃ ಸಭೆಯನ್ನು ಕರೆದು ಚರ್ಚಿಸಿ ಬೇಡಿಕೆಗಳನ್ನು ಇತ್ಯರ್ಥಪಡಿಸುವ ಪ್ರಯತ್ನದಲ್ಲಿ ಮುಂದುವರಿಯುವುದರಿಂದ 5.10.2023 ರಂದು ನಡೆಸಲು ತೀರ್ಮಾನಿಸಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಪದಾಧಿಕಾರಿಗಳು ಚರ್ಚೆ ಮಾಡಿ 05.10.2023 ರಂದು ನಡೆಸಲು ತೀರ್ಮಾನಿಸಿದ್ದ ಪ್ರತಿಭಟನೆಯನ್ನು ಕೈ ಬಿಡಲು ನಿರ್ಧರಿಸಲಾಗಿದೆ ಎಂದು ಮಂಜುನಾಥ್‌ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು