NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ ವಿದ್ಯಾ ಸಹಾಯ ನಿಧಿಯ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ವಿದ್ಯಾ ಸಹಾಯ ನಿಧಿಯಿಂದ ಪಾವತಿಸಲಾಗುವ ವಿದ್ಯಾರ್ಥಿ ವೇತನವನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ನಿಗಮದ ಕೇಂದ್ರ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ಸುತ್ತೋಲೆಯನ್ವಯ ಸಂಸ್ಥೆಯ ನೌಕರರ/ಅಧಿಕಾರಿಗಳ ಅರ್ಹ ಮಕ್ಕಳಿಗೆ ವಿವಿಧ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ 2022-2023 ಹಾಗೂ 2023-2024 ರ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ ನೌಕರರ ಅಧಿಕಾರಿಗಳ ಅರ್ಹ ಮಕ್ಕಳಿಗೆ ವಿದ್ಯಾರ್ಥಿ ವೇತನ ಮೊತ್ತವನ್ನು ಪರಿಷ್ಕರಿಸಿ vn.ksrtc.in ಪೊರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಶೈಕ್ಷಣಿಕ 2024-2025ನೇ ಸಾಲಿನ ವಿದ್ಯಾರ್ಥಿ ವೇತನ ಮೊತ್ತವನ್ನು ಪಡೆಯಲು 10.06.2024 ರಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇನ್ನು ಮುಂದುವರಿದಂತೆ, 2022-2023ರ ಶೈಕ್ಷಣಿಕ ಸಾಲಿನ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ 15.06.2024 ಹಾಗೂ 2023-24ನೇ ಸಾಲಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಕೊನೆಯ ದಿನ 31.10.2024 ಆಗಿದೆ.

ಇನ್ನುಮುಂದೆ, ಪ್ರಸಕ್ತಸಾಲಿನ ಶೈಕ್ಷಣಿಕ ಅರ್ಜಿಗಳನ್ನು ಮುಂದಿನ ವರ್ಷದ ಅಕ್ಟೋಬರ್ 31ರವರೆಗೆ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ. ಹೀಗಾಗಿ ಈ ಮಾಹಿತಿಯನ್ನು ಎಲ್ಲ ಸಿಬ್ಬಂದಿಗಳ ಗಮನಕ್ಕೆ ತರಬೇಕು ಎಂದು ನಿಗಮದ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಮಾಹಿತಿಯನ್ನು ಎಲ್ಲಾ ಶಾಖಾ ಮುಖ್ಯಸ್ಥರು, ಕರಾರಸಾ.ನಿಗಮ, ಕೇಂದ್ರ ಕಚೇರಿ, ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ, ಬೆಂಗಳೂರು – ಹಾಸನ – ಸಹಾಯಕ ಕಾರ್ಯ ಅಭಿಯಂತರರು, ಬೆಂಗಳೂರು – ಮೈಸೂರು- ಹಾಸನ ಹಾಗೂ ತುಮಕೂರು ಪ್ರಾಂಶುಪಾಲರು, ನಿಗಮದ ತರಬೇತಿ ಕೇಂದ್ರ, ಮಾಲೂರು- ಹಾಸನ -ಹೊಳಲ್ಕೆರೆ-ಮಳವಳ್ಳಿಯ ಅಧಿಕಾರಿಗಳು ಸಂಬಂಧಪಟ್ಟ ನೌಕರರ, ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ