NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನಾಲ್ಕೂ ನಿಗಮಗಳ ಎಲ್ಲ ತರಬೇತಿ ನೌಕರರಿಗೂ ಪ್ರತಿ ತಿಂಗಳು ತರಬೇತಿ ಭತ್ಯೆ 14 ಸಾವಿರ ರೂ. ನಿಗದಿಪಡಿಸಿ ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ತರಬೇತಿ ನೌಕರರ ತರಬೇತಿ ಭತ್ಯೆಯನ್ನು 14 ಸಾವಿರ ರೂಪಾಯಿಗೆ ಪರಷ್ಕರಿಸಿ ಇದೇ ಆ.1ರಿಂದ ಜಾರಿಗೆ ಬರುವಂತೆ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ನಿನ್ನೆ ಅಂದರೆ ಸೋಮವಾರ ಆ.19ರಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅವರು ಆದೇಶ ಹೊರಡಿಸಿದ್ದು, ಹುದ್ದೆವಾರು ಇದ್ದ ವೇತನ ತಾರತಮ್ಯತೆ ನಿವಾರಿಸುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಿಗಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತರಬೇತಿ ನೌಕರರಿಗೆ ಉಲ್ಲೇಖ-01 ರನ್ವಯ (ಸುತ್ತೋಲೆ ಸಂಖ್ಯೆ- 1558/2015, ದಿನಾಂಕ: 14-09-2015) ನಿಗದಿಪಡಿಸಲಾಗಿದ್ದ ತರಬೇತಿ ಭತ್ಯೆಯನ್ನು ಉಲ್ಲೇಖ-02 ರನ್ವಯ ( ಸುತ್ತೋಲೆ ಸಂಖ್ಯೆ – 1720/2024, ದಿನಾಂ: 30-01-2024) ತಾಂತ್ರಿಕ ಸಹಾಯಕ ಹುದ್ದೆಗೆ ಮಾತ್ರ ಪರಿಷ್ಕರಿಸಲಾಗಿತ್ತು.

ಆದರೆ ಪ್ರಸ್ತುತ ತರಬೇತಿ ಭತ್ಯೆ ನೀಡುವಲ್ಲಿ ಏಕರೂಪತೆ ಕಾಯ್ದುಕೊಳ್ಳುವ ಉದ್ದೇಶದಿಂದ ಇದೇ ಆಗಸ್ಟ್‌ 1-2024 ರಿಂದ ಜಾರಿಗೆ ಬರುವಂತೆ ಉಳಿದ ವೃಂದಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ತರಬೇತಿ ನೌಕರರಿಗೂ ಪ್ರತಿ ತಿಂಗಳೂ ಸಹ 14,000 ರೂ.ಗಳನ್ನು ನಿಗದಿಪಡಿಸಿ ಆದೇಶ ಹೊರಡಿಸಿದ್ದಾರೆ.

ಇನ್ನು ಈ ಸಂಬಂಧ ವ್ಯವಸ್ಥಾಪಕ ನಿರ್ದೇಶಕರು, ಬೆಂ.ಮ.ನ.ಸಾ.ಸಂಸ್ಥೆ/ವಾ.ಕ.ರ.ಸಾ.ಸಂಸ್ಥೆ/ಈ.ಕ.ರ.ಸಾ.ಸಂಸ್ಥೆ ಅವರ ಮಾಹಿತಿಗಾಗಿ ಹಾಗೂ ಸೂಕ್ತ ಕ್ರಮಕ್ಕಾಗಿ ಆದೇಶ ಪ್ರತಿಯನ್ನು ಕಳುಹಿಸಿದ್ದಾರೆ.

ಅಲ್ಲದೆ ನಿರ್ದೇಶಕರು (ಸಿಬ್ಬಂದಿ:ಜಾಗೃತ) ಕ.ರಾ.ರ.ಸಾ.ನಿಗಮ, ಕೇಂದ್ರ ಕಚೇರಿ, ಬೆಂಗಳೂರು ಅವರ ಮಾಹಿತಿಗಾಗಿ. ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು. ಕ.ರಾ.ರ.ಸಾ.ನಿಗಮ / ಬೆಂ.ಮ.ನ.ಸಾ.ಸಂಸ್ಥೆ/ ವಾ.ಕ.ರ.ಸಾ.ಸಂಸ್ಥೆ ಕ.ಕ.ರಾ.ನಿಗಮ ಅವರ ಮಾಹಿತಿಗಾಗಿ ಹಾಗೂ ಸೂಕ್ತ ಕ್ರಮಕ್ಕಾಗಿ ಕಳುಹಿಸಿದ್ದಾರೆ.

ಇದರ ಜತೆಗೆ ಎಲ್ಲ ಹಿರಿಯ/ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು ಕೇಂದ್ರೀಯ/ಪ್ರಾದೇಶಿಕ ಕಾರ್ಯಗಾರ ಬೆಂಗಳೂರು /ಹಾಸನ, ಪ್ರಾಂಶುಪಾಲರು ಕೇಂದ್ರೀಯ/ಪ್ರಾದೇಶಿಕ ತರಬೇತಿ ಕೇಂದ್ರ ಬೆಂಗಳೂರು /ಹಾಸನ/ ಮಳವಳ್ಳಿ, ಹೊಳಲ್ಲೆರೆ ಮತ್ತು ಮಾಲೂರು ಅವರ ಮಾಹಿತಿಗಾಗಿ ಹಾಗೂ ಸೂಕ್ತ ಕ್ರಮಕ್ಕಾಗಿ ಆದೇಶ ಪ್ರತಿಯನ್ನು ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ