NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಇಂದು ಆದೇಶ ಹೊರಡಿಸಿದ್ದಾರೆ.

ಒಂಟಿ ಪೋಷಕರಾಗಿರುವ ನಿಗಮದ ಪುರುಷ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಸಂಬಂಧ ಜ.2-2025ರ ಗುರುವಾರ ಆದೇಶ ಹೊರಡಿಸುವ ಮೂಲಕ ಎಂಡಿ ಅನ್ಬುಕುಮಾರ್‌ ಅವರು ಸಂಸ್ಥೆಯಲ್ಲಿ ಕರ್ತವ್ಯ ನಿರತ ಒಂಟಿ ಪೋಷಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ರಾಜ್ಯ ಸರ್ಕಾರವು ಒಂಟಿ ಪೋಷಕರಾಗಿರುವ (Single male parent) ಅವಿವಾಹಿತ/ ವಿವಾಹ- ವಿಚ್ಛೇದಿತ / ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೆ ಮಕ್ಕಳ ಆರೈಕೆಗಾಗಿ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಅಂದರೆ 180 ದಿನಗಳಿಗೆ ಮೀರದಂತೆ ಸರ್ಕಾರದ ಆದೇಶ ಸಂಖ್ಯೆ: ಆಇ 4(ಇ) ಸೇನಿಸೇ 2021 ದಿನಾಂಕ 21.06.2021 ವಿಧಿಸಲಾದ ಷರತ್ತುಇಗಳನ್ನು ಸಂದರ್ಭಾನುಸಾರ ಅನ್ವಯಿಸಿಕೊಂಡು ಶಿಶುಪಾಲನಾ ರಜೆ ಮಂಜೂರು ಮಾಡುವ ಸೌಲಭ್ಯವನ್ನು ಸರ್ಕಾರದ ಆದೇಶ ಸಂಖ್ಯೆ: ಆಇ 3 (ಇ) ಸೇನಿಸೇ 2023, ದಿನಾಂಕ:09.06.2023 ರನ್ವಯ ಜಾರಿಗೆ ಬರುವಂತೆ ವಿಸ್ತರಿಸಿದೆ.

ಅದರಂತೆ. KSRTC ನಿಗಮದಲ್ಲಿ ಒಂಟಿ ಪೋಷಕರಾಗಿರುವ (Single male parent) ಅವಿವಾಹಿತ/ ವಿವಾಹ-ವಿಚ್ಛೇದಿತ /ವಿಧುರ ಪುರುಷ ನೌಕರರಿಗೆ ಮಕ್ಕಳ ಆರೈಕೆಗಾಗಿ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಅಂದರೆ 180 ದಿನಗಳಿಗೆ ಮೀರದಂತೆ ಸುತ್ತೋಲೆ ಸಂಖ್ಯೆ: 1696. ದಿನಾಂಕ:18.01.2022 ರ ಷರತ್ತು ಮತ್ತು ನಿಬಂಧನೆಗಳನ್ವಯ ಶಿಶುಪಾಲನಾ ರಜೆ ಮಂಜೂರು ಮಾಡಲು ನಿಗಮದ ನಿರ್ದೇಶಕ ಮಂಡಳಿ ಠರಾವು ಸಂಖ್ಯೆ: 10453, ದಿನಾಂಕ:13.11.2024 ರನ್ವಯ ಒಪ್ಪಿಗೆ ನೀಡಿದೆ.

ಹೀಗಾಗಿ ಯಾವುದೇ ಸಂದರ್ಭದಲ್ಲಿ ಶಿಶುಪಾಲನಾ ರಜೆಯನ್ನು ಪಡೆದ ಅವಧಿಯಲ್ಲಿ ಸಂಬಂಧಿತ ಪುರುಷ ನೌಕರರು ವಿವಾಹ ಮಾಡಿಕೊಂಡಲ್ಲಿ ಆ ದಿನಾಂಕದಿಂದ ಶಿಶುಪಾಲನಾ ರಜೆಯು ತಾನಾಗಿಯೇ ರದ್ದುಗೊಳ್ಳುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಸಾರಿಗೆ ನಿಗಮದ ಸಂಬಂಧಪಟ್ಟವರೆಲ್ಲರೂ ಈ ಆದೇಶವನ್ನು ಮನದಟ್ಟು ಮಾಡಿಕೊಂಡು ಅದರಂತೆ ಕ್ರಮ ಕೈಗೊಳ್ಳತಕ್ಕದ್ದು, ಜತೆಗೆ ಈ ಸುತ್ತೋಲೆಯು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ