CrimeNEWSನಮ್ಮಜಿಲ್ಲೆ

KSRTC ಬಸ್‌ಗಳ ಮುಖಾಮುಖಿ ಡಿಕ್ಕಿ: ಚಾಲಕರಿಗೆ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರೂ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್‌ನಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಅಪಘಾತವಾಗಿದ್ದು, ಇದರ ತೀವ್ರತೆಯಿಂದ ಇಬ್ಬರೂ ಚಾಲಕರು ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತಕ್ಕೆ ರಸ್ತೆ ಕಾಮಾಗಾರಿಯೇ ಕಾರಣ ಎಂದು ಹೇಳಲಾಗಿದೆ. ಇನ್ನು ಅಪಘಾತಕ್ಕೀಡಾದ 2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದರು ಎಂದು ತಿಳಿದು ಬಂದಿದೆ.

2019ರಲ್ಲಿ ಕುಸಿದಿದ್ದ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು ಇನ್ನೂ ಅದು ಮುಗಿದಿಲ್ಲ. ಹಾಗಾಗಿ ಈ ಭೀಕರ ಅಪಘಾತಕ್ಕೆ ಇದುವೇ ಪ್ರಮುಖಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ರಸ್ತೆ ಕಾಮಗಾರಿಯನ್ನು ಕೂಡಲೇ ಮುಗಿಸುವಂತೆ ಆಗ್ರಹಿಸಿದ್ದಾರೆ.

ಇನ್ನೂ ಅತೀ ಹೆಚ್ಚಾಗಿ ಮಂಜು ಕವಿದಿದ್ದು, ಅವಘಡಕ್ಕೆ ಕಾರಣವಾಗಿದೆ ಎಂದು ಕೆಲವರು ಹೇಳಿದ್ದಾರೆ. ಈಗಲೂ ಕೂಡ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಪ್ರಮಾಣದ ಮಂಜು ಕವಿದ ಹಿನ್ನೆಲೆ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಇನ್ನುಳಿದ ವಾಹನ ಸವಾರರು ಪರದಾಡಿದ ಘಟನೆಯು ನಡೆದಿದೆ.

ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಿಂದ ಟ್ರಾಫಿಕ್‌ ಜಾಮ್‌ ಉಂಟಾದ್ದರಿಂದ ಕೆಲ ಪ್ರಯಾಣಿಕರು 10 ಕಿ.ಮೀ.‌ ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ ಎಂದು ತಿಳಿದುಬಂದಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ