CrimeNEWSನಮ್ಮಜಿಲ್ಲೆ

KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕೆ ಹೊಡೆದ ಪರಿಣಾಮ ಆಕೆ ಕಾಲು ಮುರಿದಿರುವ ಘಟನೆ ನಗರದ ಬಸ್ ಟರ್ಮಿನಲ್ ಬಳಿ ನಡೆದಿದೆ.

ಘಟನೆಯ ವಿಡಿಯೋ ವೈರಲ್‌ ಆಗಿದ್ದು, ತುಮಕೂರಿನ ಬಸ್ ಟರ್ಮಿನಲ್ ಬಳಿ ರಸ್ತೆ ದಾಟುತ್ತಿದ್ದಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.

ಬಸ್‌ ಬರುತ್ತಿರುವುದನ್ನು ಗಮನಿಸದೆ ಮಹಿಳೆ ರಸ್ತೆ ದಾಟುತ್ತಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಆಕೆಗೆ ಗುತ್ತಿದೆ. ಪರಿಣಾಮ ಕುಸಿದು ಬಿದ್ದ ಮಹಿಳೆಯನ್ನು ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಲು ಮುಂದಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಬಳಿಕ ತುಮಕೂರಿನ ತುರ್ತು ಸೇವೆ ಸಿಬ್ಬಂದಿ ಸ್ಥಳಕ್ಕೆ ಬಂದು ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.

ಕರ್ನಾಟಕ ಪೋರ್ಟ್‌ ಪೋಲಿಯೊ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ ವಿಡಿಯೋ ವೈರಲ್‌ ಆಗಿದೆ. ಕೆಎಸ್ಆರ್ಟಿಸಿ ಬಸ್ ವೇಗವಾಗಿ ಚಲಿಸುತ್ತಿದ್ದಾಗ ಎದುರಿಗೆ ಬರುತ್ತಿದ್ದ ವಾಹನದ ಬಗ್ಗೆ ಅರಿವಿಲ್ಲದ ಮಹಿಳೆ ರಸ್ತೆ ದಾಟಲು ಮುಂದಾಗಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ವಿಡಿಯೋ ನೋಡಿದರೆ ಮಹಿಳೆ ಬಸ್‌ ಬರುವುದನ್ನು ಗಮನಿಸದಿರುವುದನ್ನು ಕಾಣ ಬಹುದು. ಅದರಂತೆ ಚಾಲಕ ಕೂಡ ಮಹಿಳೆ ರಸ್ತೆ ದಾಟುತ್ತಿರುವುದನ್ನು ಕೂಡ ಗಮನಿಸಿಲ್ಲ. ಹೀಗಾಗಿ ಬಸ್‌ ಆಕೆಗೆ ಡಿಕ್ಕಿ ಹೊಡೆದ್ದಿದ್ದರಿಂದ ಗಂಭೀರ ಗಾಯಗೊಂಡು ಆಕೆ ಕುಸಿದೇ ಬಿದ್ದಿರುವುದು ಅಪಘಾತದ ತೀವ್ರತೆಯನ್ನು ಹೇಳುತ್ತಿತ್ತು.

ಮಹಿಳೆಯ ಕಾಲು ಮೇಲೆ ಬಸ್‌ ಹರಿದಿರುವುದರಿಂದ ಒಂದು ಕಾಲಿಗೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಹಿಳೆ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ