NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಬಸ್‌ ಮುಂದಿನ ಟಯರ್‌ ಬರ್ಸ್ಟ್‌ಆಗಿ 20 ಅಡಿ ಕಂದಕಕ್ಕೆ ಬಿದ್ದ ಬಸ್‌- ಹಲವರಿಗೆ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ನ ಚಾಲಕರ ಸೈಡಿನ ಮುಂದಿನ ಭಾಗದ ಟಯರ್‌ ಬರ್ಸ್ಟ್‌ಆದ ಪರಿಣಾಮ ಸುಮಾರು 20 ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಇಂದು (ಭಾನುವಾರ) ರಾತ್ರಿ ನಡೆದಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಚಿಕ್ಕತೊರೆಪಾಳ್ಯದ ಹತ್ತಿರ ಘಟನೆ ನಡೆದಿದ್ದು, ಈ ವೇಳೆ 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ರಾಮನಗರ ವಿಭಾಗ ಮಾಗಡಿ ಘಟಕದ ಕೆಎಸ್ಆರ್‌ಟಿಸಿ ಬಸ್‌  60 ರಿಂದ 70 ಜನ ಪ್ರಯಾಣಿಕರನ್ನು ಮಾಗಡಿಯಿಂದ ಬೆಂಗಳೂರಿಗೆ ಹೊತ್ತೊಯ್ಯುತ್ತಿದ್ದ ವೇಳೆ ಬಸ್‌ ಚಿಕ್ಕತೊರೆಪಾಳ್ಯದ ಬಳಿ ಸೇತುವೆಯಿಂದ ಸುಮಾರು 20 ಟಡಿ ಕಂದಕಕ್ಕೆ ಉರುಳಿ ಬಿದ್ದಿದೆ.

ಘಟನೆಯಿಂದ ಹಲವರಿಗೆ ಗಂಭೀರ ಗಾಯಗಳಾಗಿದ್ದು,  ಅವಘಡದಿಂದ ಪ್ರಾಣಹಾನಿ ಆಗಿರುವ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ.

ಚಾಲಕ ಸೇರಿದಂತೆ ಹಲವು ಮಂದಿ ಗಾಯಾಳುಗಳನ್ನು ಮಾಗಡಿ ಸರ್ಕಾರಿ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್‌ನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ  ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿದ್ದೇವೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ