CrimeNEWSನಮ್ಮಜಿಲ್ಲೆ

KSRTC ಬಸ್ ಹತ್ತುವಾಗ ಮಹಿಳೆಯ ಕೈ ಕಟ್ ಆಗಿಲ್ಲ: ಸುಳ್ಳಿನಿಂದ ಕೂಡಿದೆ ವೈರಲ್ ವಿಡಿಯೋ – ಸ್ಪಷ್ಟಪಡಿಸಿದ ನಿಗಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಹತ್ತಲು ಯತ್ನಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಕೈ ತುಂಡಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದು ವೈರಲ್ ಆಗುತ್ತಿದೆ.

ಆದರೆ, ಈ ವಿಡಿಯೋ ಸುಳ್ಳಿನಿಂದ ಕೂಡಿದ್ದು, ಇದು ಅಪಘಾತವೊಂದರಲ್ಲಿ ಆಗಿರುವುದು ಎಂಬ ಬಗ್ಗೆ ನಿಗಮವು ಟ್ವೀಟ್‌ ಮಾಡುವ ಮೂಲಕ  ಸ್ಪಷ್ಟನೆ ನೀಡಿದೆ.

ಈ ಮೂಲಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ವಿಡಿಯೋದ ಸತ್ಯಾಂಶ ಇದೀಗ ಬಯಲಾದಂತಾಗಿದೆ.

ಇದೇ ಜೂನ್ 18ರಂದು ಕೆಎಸ್‌ಆರ್‌ಟಿಸಿ ಚಾಮರಾಜನಗರ ವಿಭಾಗ ನಂಜನಗೂಡು ಘಟಕದ ಬಸ್ (KA-10-F-151) ನಂಜನಗೂಡಿನಿಂದ ತಿ.ನರಸೀಪುರಕ್ಕೆ ತೆರಳುತ್ತಿದ್ದ ವೇಳೆ ಅಂದು ಮಧ್ಯಾಹ್ನ ಸುಮಾರು 1:45ರಲ್ಲಿ ಬಸವನಪುರ ಸಮೀಪ  ಎದುರಿನಿಂದ ಬಂದ ಲಾರಿ (TN-77-Q-8735) ಬಸ್‌ನ ಬಲಭಾಗದ ಕಿಟಕಿ ಬಳಿಯ ಆಸನದಲ್ಲಿ ಕುಳಿತಿದ್ದ ಮಹಿಳೆಗೆ ತಾಗಿದೆ ಪರಿಣಾಮ ಮಹಿಳೆಯ ಬಲಕೈಗೆ ತುಂಡಾಗಿದೆ.

ತಕ್ಷಣವೇ ಗಾಯಗೊಂಡ ಆ ಮಹಿಳೆಯನ್ನು ಸಾರಿಗೆ ಅಧಿಕಾರಿಗಳು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಉತ್ತಮ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದರ ಜತೆಗೆ ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆ ಬಸ್‌ನ ಕಿಟಕಿಯಿಂದ ಹತ್ತುವಾಗ ಕೈ ಮುರಿದಿದೆ ಎಂಬಂತೆ ಅಪಪ್ರಚಾರ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಗಮ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಶಕ್ತಿ ಯೋಜನೆ ಬಗ್ಗೆ ಅಪಪ್ರಚಾರ: ರಾಜ್ಯಾದ್ಯಂತ ಮಹಿಳೆಯರಿಗೆ ಶಕ್ತಿ ಯೋಜನೆ ಪ್ರಯೋಜನಕಾರಿಯಾಗಿದೆ. ಈಗಾಗಲೇ ಮುಂದಿನ ಹಂತದಲ್ಲಿ ಈ ಯೋಜನೆಯನ್ನು ಕ್ರಮ ಬದ್ಧವಾಗಿ ನಡೆಸಲು ಸರ್ಕಾರ ಮುಂದಾಗಿದೆ. ಆದರೆ, ಫ್ರೀ ಬಸ್ ವಿಚಾರದಲ್ಲಿ ಎಲ್ಲೋ ಕೆಲವೆಡೆಗಳಲ್ಲಿ ನಡೆಯುತ್ತಿರುವ ಕೆಲವೇ ಕೆಲವು ಘಟನೆಗಳನ್ನು ಮುಂದಿಟ್ಟುಕೊಂಡು, ಈ ಯೋಜನೆಯೇ ಸರಿ ಇಲ್ಲ, ಜನರಿಗೆ ಪ್ರಯೋಜನವಾಗ್ತಿಲ್ಲ, ಸಮಸ್ಯೆಯಾಗುತ್ತಿದೆ ಎನ್ನುವಂತೆ ಬಿಂಬಿಸಲಾಗುತ್ತಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ.

ರಾಜ್ಯ ಸರ್ಕಾರ ಈಗಾಗಲೇ ಅಪಪ್ರಚಾರ ಹಾಗೂ ಸುಳ್ಳು ಸುದ್ದಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದೆ. ಆದರೆ ಈವರೆಗೆ ಯಾವುದೇ ಕ್ರಮಗಳಾದ ಬಗ್ಗೆ ಮಾಹಿತಿ ಇಲ್ಲ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ