NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಮಡಿಕೇರಿ: ನೌಕರ ಆತ್ಮಹತ್ಯೆ ಯತ್ನ- ಪೊಲೀಸರಿಂದ ಹೇಳಿಕೆ ದಾಖಲು

ಡಿಎಂ ಗೀತಾ ಪರ ನಿಂತ ಡಿಸಿ ಜಯಕರ ಶೆಟ್ಟಿ, ವಿಚಾರಣೆಗೂ ಮುನ್ನಾ ಕ್ಲೀನ್‌ಚಿಟ್‌

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೆಎಸ್‌ಆರ್‌ಟಿಸಿ ಡಿಪೋ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ್ದು, ಹಿರಿಯ ಅಧಿಕಾರಿ ಕುರುಕುಳದಿಂದ ಬೇಸತ್ತು ಈ ರೀತಿ ಮಾಡಿಕೊಂಡಿದ್ದಾಗಿ ಆರೋಪ ಮಾಡಿದ್ದಾರೆ. ಸಂತ್ರಸ್ತನ ಹೇಳಿಕೆಯನ್ನು ಮಡಿಕೇರಿ ನಗರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆದರೆ, ಘಟನೆ ಇನ್ನೂ ಕೂಡ ಯಾವುದೇ ಎಫ್‌ಐಆರ್‌ ದಾಖಲಾಗಿಲ್ಲ.

ಆತ್ಮಹತ್ಯೆಗೆ ಯತ್ನಿಸಿದ ನೌಕರನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿಯಲ್ಲಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅಭಿಷೇಕ್ ತನ್ನ ತಂದೆ ನಿಧನರಾದ ನಂತರ ಅನುಕಂಪದ ಆಧಾರದ ಮೇಲೆ ಕಿರಿಯ ಸಹಾಯಕ ಹುದ್ದೆಯನ್ನು ಪಡೆದಿದ್ದು, ಸೇವೆ ಸಲ್ಲಿಸುತ್ತಿದ್ದಾರೆ.

ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗದಲ್ಲಿ ಅಭಿಷೇಕ್ ಆರು ತಿಂಗಳು ಸೇವೆ ಸಲ್ಲಿಸಿದ್ದು ನಂತರ 2.5 ವರ್ಷಗಳ ಹಿಂದೆ ಮಡಿಕೇರಿ ವಿಭಾಗಕ್ಕೆ ವರ್ಗಾವಣೆಗೊಂಡಿದ್ದರು. ಅಭಿಷೇಕ್‌ಗೆ ಕೆಲಸದ ಒತ್ತಡ ಜಾಸ್ತಿಯಾಗಿತ್ತು. ಮಡಿಕೇರಿ ಕೆಎಸ್‌ಆರ್‌ಟಿಸಿ ಡಿಪೋದ ವ್ಯವಸ್ಥಾಪಕಿ ಗೀತಾ ಅವರು ಅಭಿಷೇಕ್ ನನ್ನು ಟಾರ್ಗೆಟ್ ಮಾಡಿ ಶೋಷಣೆ ಮಾಡುತ್ತಿದ್ದಾರೆ ಎಂದು ಆಗಾಗ್ಗೆ ನನ್ನ ಬಳಿ ಹೇಳಿಕೊಳ್ಳುತ್ತಿದ್ದನು ಎಂದು ಅಭಿಷೇಕ್ ತಾಯಿ ಹೇಳಿದ್ದಾರೆ.

ಮಂಗಳವಾರ ಸಂಜೆ ಮಡಿಕೇರಿಗೆ ಭೇಟಿ ನೀಡಿದ್ದ ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ನೌಕರರ ಎದುರೇ ಅಭಿಷೇಕ್ ವಿಷ ಸೇವಿಸಿದ್ದಾನೆ. ನಿರ್ವಾಹಕಿ ಗೀತಾ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಅಭಿಷೇಕ್ ಅಧಿಕಾರಿಗಳ ಸಮ್ಮುಖದಲ್ಲಿ ವಿಷ ಸೇವಿಸಿ ಕುಸಿದು ಬಿದ್ದಿದ್ದನು.

ಆ ವೇಳೆ ಕೂಡಲೇ ಅಭಿಷೇಕ್ ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿದ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಅವರು ಡಿಪೋ ಮ್ಯಾನೇಜರ್ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಡಿಎಂ ಒಳ್ಳೆಯವರು ಎಂದು ಹೇಳಿದ್ದಾರೆ. ಆದರೆ, ಡಿಎಂ ಗೀತಾ ಅವರ ವಿರುದ್ಧ ಕಳೆದ ಮಾರ್ಚ್‌ 6ರಂದು ನೌಕರರಿಗೆ ಕಿರುಕುಳ ನೀಡುತ್ತಿದ್ದು ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ನೌಕರರ ಸಂಘಟನೆಗಳು ಎಂಡಿ ಅವರಿಗೆ ಮನವಿ ಮಾಡಿರುವ ಮನವಿ ಪತ್ರವು ಇದೆ.

ಆದರೆ, ಡಿಎಂ ನೀಡಿದ ಕಿರುಕುಳಗಳನ್ನು ಮರೆ ಮಾಚುತ್ತಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಅವರು ಡಿಪೋ ವ್ಯವಸ್ಥಾಪಕರು ಅವರ ಕೆಲಸ ಅವರು ಮಾಡಿದ್ದಾರೆ ಅಷ್ಟೆ ಇದರಲ್ಲಿ ಅವರ ತಪ್ಪು ಏನು ಇಲ್ಲ ಎಂದು ಮಾಧ್ಯಮಗಳ ಮುಂದೆಯೇ ಯಾವುದೇ ವಿಚಾರಣೆ ನಡೆಸದೆ ಕ್ಲೀನ್‌ಚಿಟ್‌ ನೀಡಿದ್ದಾರೆ. ಇದು ಕೂಡ ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ.

ಇನ್ನು ಘಟನೆ ಸಂಬಂಧ ಮಡಿಕೇರಿ ನಗರ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಅಭಿಷೇಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತನ ಔಪಚಾರಿಕ ದೂರಿನ ನಂತರವೇ ಎಫ್‌ಐಆರ್ ದಾಖಲಿಸಲಾಗುವುದು ಎಂದು ಇಲಾಖೆಯ ಮೂಲಗಳು ಖಚಿತಪಡಿಸಿವೆ. KSRTC ಡಿಸಿ, ಮಡಿಕೇರಿ ಡಿಎಂ ಕಿರುಕುಳ: ಸಹಾಯಕ ಲೆಕ್ಕಾಧಿಕಾರಿ ಆತ್ಮಹತ್ಯೆಗೆ ಯತ್ನ- ಸ್ಥಿತಿ ಗಂಭೀರ

ಆಸ್ಪತ್ರೆಗೆ ಭೇಟಿ ನೀಡಿದ ಇತರ ಕೆಲವು ನೌಕರರು ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕರ ಶೋಷಣೆ ವಿರುದ್ಧ ಧ್ವನಿ ಎತ್ತಿದ್ದಾರೆ. ಡಿಪೋ ಮ್ಯಾನೇಜರ್ ಗೀತಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೂ ಅವರು ಇಲ್ಲೇ ಇರುವುದಕ್ಕೆ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡುವುದರಲ್ಲೇ ಕಾಲ ಕಳೆಯುತ್ತಾ, ನೌಕರರಿಗೆ ಕಿರುಕುಳ ಕೊಡುವುದನ್ನು ಮುಂದುವರಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು