CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕರ್ತವ್ಯ ನಿರತ ಚಾಲಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಶುಕ್ರವಾರ ರಾತ್ರಿ ಸುಮಾರು 8.30ರ ಸಮಯದಲ್ಲಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ KSRTC ಮಂಡ್ಯ ಘಟಕದ ಚಾಲಕ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಯಿಂದ ಚಾಲಕನ ನಾಲಿಗೆ ಕೂಡ ಕಟ್ಟಾಗಿದ್ದು, ಎಡಗೈ ಊದಿಕೊಂಡಿದೆ.

ಹಲ್ಲೆಕೋರ ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮದ ವ್ಯಕ್ತಿ ಎಂದು ತಿಳಿದು ಬಂದಿದ್ದು, ಆತನ ವಿರುದ್ಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆ ವಿವರ: ಶುಕ್ರವಾರ ಅಂದರೆ ಜ.10ರ ರಾತ್ರಿ 8.30ರ ಸುಮಾರಿಗೆ ಮಂಡ್ಯ ಬಸ್‌ನಿಲ್ದಾಣದಿಂದ ಅರಕೆರೆ ಮಾರ್ಗವಾಗಿ ಬನ್ನೂರಿಗೆ ಬಸ್‌ ಹೊರಟಿತ್ತು. ಈ ವೇಳೆ ಬಸ್‌ ರಶ್‌ ಆಗಿದೆ. ಈ ನಡುವೆ ಮಾರ್ಗಮಧ್ಯೆ ಮಹಿಳೆಯೊಬ್ಬರನ್ನು ಬಸ್‌ಗೆ ಹತ್ತಿಸುವುದಕ್ಕೆ ಕೋರಿಕೆ ನೀಲುಗಡೆ ಕೋರಿದ್ದಾರೆ. ಆದರೆ, ಬಸ್‌ ರಶ್‌ ಆಗಿದ್ದರಿಂದ ಚಾಲಕ ಬಸ್‌ನಿಲ್ಲಿಸಿಲ್ಲ. ಇದರಿಂದ ಕೋಪಗೊಂಡ ವ್ಯಕ್ತಿ ಬೈಕ್‌ನಲ್ಲಿ ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಬಳಿ ಹೋಗಿ ಗಲಾಟೆ ಮಾಡಿದ್ದಾನೆ.

ಹೀಗೆ ಇಬ್ಬರ ನಡುವೆ ಮತಿನ ಚಕಮಕಿ ನಡೆದು ಬಳಿಕ ಹಲ್ಲೆ ಮಾಡುವ ಹಂತಕ್ಕೆ ಹೋದ ವ್ಯಕ್ತಿ ಚಾಲಕನಿಗೆ ಮನಬಂದಂತೆ ಥಳಿಸಿದ್ದಾನೆ. ಈ ವೇಳೆ ಚಾಲಕನ ನಾಲಿಗೆ ಕಟ್‌ಆಗಿದ್ದು, ಎಡಗೈ ಊದಿಕೊಂಡಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಬಸ್‌ಅನ್ನು ಅಲ್ಲೆ ಬಿಟ್ಟು ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಬೇರೆ ಬಸ್‌ಗೆ ಕಳುಹಿಸಲಾಯಿತು ಎಂದು ನಿರ್ವಾಹಕರು ಮಾಹಿತಿ ನೀಡಿದ್ದಾರೆ.

ಕರ್ತವ್ಯ ನಿರತ ಸಂಸ್ಥೆಯ ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಬಾರದು ಎಂದು ಎಷ್ಟೇ ಎಚ್ಚರಿಕೆ ನೀಡಿದರು ಕೆಲ ವ್ಯಕ್ತಿಗಳು ಹೀಗೆ ಹಲ್ಲೆ ಮಾಡುತ್ತಿದ್ದಾರೆ. ಬಳಿಕ ಕೇಸ್‌ ಆಗಿ ಜೈಲುಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಇನ್ನಾದರೂ ಪ್ರಯಾಣಿಕರು ಎಚ್ಚೆತ್ತುಕೊಳ್ಳಬೇಕಿದೆ.

ಡ್ಯೂಟಿ ಮೇಲಿರುವ ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದರೆ ಸಾರ್ವಜನಿಕ ಸೇವಾ ನಿರತ ನೌಕರರ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ನಿಮಿಷದ ಕೋಪಕ್ಕೆ ಬುದ್ಧಿಕೊಟ್ಟು ಈ ರೀತಿ ಮಾಡಿ ವರ್ಷಾನುಗಟ್ಟೆಲೆ ಜೈಲಿನಲ್ಲಿ ಮುದ್ದೆ ಮುರಿಯುವುದು ಬೇಕಾ? ಇನ್ನಾದರೂ ಎಚ್ಚೆತ್ತುಕೊಳ್ಳಿ ಎಂದು ಪೊಲೀಸ್‌ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ