KSRTC: ಮೊಬೈಲ್ನಲ್ಲಿ ಮಾತನಾಡಿಕೊಂಡು ಬಸ್ ಚಾಲನೆ – ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ
ಬೆಂಗಳೂರು: ಮೊಬೈಲ್ನಲ್ಲಿ ಮಾತನಾಡಿಕೊಂಡು ಚಾಲಕ ಬಸ್ ಓಡಿಸುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ, ಈ ರೀತಿ ಬೇಜವಾಬ್ದಾರಿಯ ಚಾಲಕನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ದಾವಣಗೆರೆ ಘಟಕ 1ರ KA 51 F 0067 ಸೂಪರ್ ಪ್ಲಸ್ ಎಲೆಕ್ಟ್ರಿಕ್ ಎ/ಸಿ ಬಸ್ ಇದಾಗಿದ್ದು, ಗುರುವಾರ ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಮೊಬೈಲ್ನಲ್ಲಿ ಮಾತನಾಡುತ್ತಲೇ ಚಾಲಕ ಸುನೀಲ್ ಕುಮಾರ್ ಬಸ್ ಚಾಲನೆ ಮಾಡಿದ್ದಾರೆ.
ಮೊಬೈಲ್ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದ ವಿಡಿಯೋ ಸಿಕ್ಕಿದ್ದು, ಚಾಲಕನ ಈ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಈ ನಿರ್ಲಕ್ಷ್ಯಕ್ಕೆ ಚಾಲಕನ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಈ ರೀತಿ ಮೊಬೈಲ್ ಫೋನ್ನಲ್ಲಿ ಮಾತನಾಡಿಕೊಂಡು ಬಸ್ ಓಡಿಸುವಾಗ ಏನಾದರೂ ಅವಘಡ ಸಂಭವಿಸಿದೆ ಬಸ್ನಲ್ಲಿರುವ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವ ಮಟ್ಟದಲ್ಲಿ ತೊಂದರೆ ಆಗುತ್ತದೆ ಎಂಬುವುದನ್ನು ಊಹಿಸಿಕೊಳ್ಳುವುದಕ್ಕೂ ಅಸಾಧ್ಯವಾಗುತ್ತದೆ. ಹೀಗಾಗಿ ಆದಷ್ಟು ಫೋನ್ಗಳನ್ನು ಬಳಸದೆ ಚಾಲಕರು ತಮ್ಮ ಚಾಲನೆಯತ್ತ ಗಮನ ಹರಿಸಬೇಕಿದೆ.
ಚಾಲಕರನ್ನೇ ನಂಬಿ 50ಕ್ಕೂ ಹೆಚ್ಚು ಪ್ರಯಾಣಿಕರು ಬಸ್ನಲ್ಲಿ ಅರಾಮವಾಗಿ ಪ್ರಯಾಣಿಸುತ್ತಿರುತ್ತಾರೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಚಾಲಕರು ತಮ್ಮ ಕರ್ತವ್ಯ ನಿಷ್ಠೆ ಮೆರೆದರೆ ಯಾವುದೆ ತೊಂದರೆ ಆಗುವುದಿಲ್ಲ. ಹೀಗಾಗಿ ಚಾಲನಾ ಸಿಬ್ಬಂದಿಗಳು ತಮ್ಮ ಕರ್ತವ್ಯದ ಮೇಲೆ ಹೆಚ್ಚು ಗಮನಕೊಡಬೇಕಿದೆ.
Related
You Might Also Like
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್ ಮೇಲೇರಿತು!
ರಾಮನಗರ: ಮುಂದೆ ಹೋಗುತ್ತಿದ್ದ ಕಾರು ಚಾಲಕ ಅಚಾನಕ್ಕಾಗಿ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ವೇಗವಾಗಿ ಬಂದ ಕಾರು ಅದರ ಮೇಲೇರಿರುವ ಘಟನೆ ಜಿಲ್ಲೆಯ ಲಂಬಾಣಿ ತಾಂಡಾ ಬಳಿ ಬಳಿ...
ರೈತ ನಾಯಕ ಕುರುಬೂರು ಶಾಂತಕುಮಾರ್ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪಂಜಾಬ್ನ ಪಟಿಯಾಲ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶುಕ್ರವಾರ ಕರ್ನಾಟಕದ ರೈತ ನಾಯಕ ಕುರುಬೂರು ಶಾಂತಕುಮಾರ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಅವರು ಪಟಿಯಾಲದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ....
ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ
ನ್ಯೂಡೆಲ್ಲಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಜನರು ದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಮೃತಪಟ್ಟಿರುವ ದುರಂತ ಘಟನೆ ರಾತ್ರಿ ಸಂಭವಿಸಿದೆ. ಪ್ರಯಾಗ್ರಾಜ್ ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ...
ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು...
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ
ಬೆಂ.ಗ್ರಾಮಾಂತರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿಯಲ್ಲಿ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲಿ ವಿವಿಧೋದ್ದೇಶ ಪುನರ್ವಸತಿ...
ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ 8 ವಲಯಗಳಲ್ಲೂ ನಗರದಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರು ಪ್ರತಿನಿತ್ಯ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಾರೆ. ಪ್ರತಿ ದಿನ ಹಸಿ ಕಸ ಸಂಗ್ರಹಿಸಲು ಆಟೋ...
KSRTC ರಿಯಾಯಿತಿ ದರದ ಪಾಸ್ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !!
ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಅಧಿಕಾರಿಗಳ ಅಂಧ ದರ್ಬಾರ್ಗೆ ಇದೇ ಸಾಕ್ಷಿ ಅಧಿಕಾರಿಗಳು ಮತ್ತು ಕುಟುಂಬಕ್ಕೆ ಶೇ.50ರಷ್ಟು ರಿಯಾಯಿತಿ ನೌಕರರು ಮತ್ತು ಕುಟುಂಬಕ್ಕೆ ಶೇ.25ರಷ್ಟು ರಿಯಾಯಿತಿ ಸಾರಿಗೆಯಲ್ಲಿ ಊಸರವಳ್ಳಿ...
ಪಂಜಾಬ್ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು
ಪಟಿಯಾಲ: ಕರ್ನಾಟಕದ ರೈತ ಮುಖಂಡ, ರೈತ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕ ಕುರುಬೂರು ಶಾಂತಕುಮಾರ್ ಸಂಚರಿಸುತ್ತಿದ್ದ ಕಾರು ಅಪಘಾಕ್ಕೀಡಾಗಿದ್ದು ಸಣ್ಣಪುಟ್ಟಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಂಜಾಬ್ನಲ್ಲಿ ಆಯೋಜಿಸಿದ್ದ...
ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ- ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬಿಬಿಎಂಪಿ...