NEWSಆರೋಗ್ಯನಮ್ಮಜಿಲ್ಲೆ

KSRTC ರಾಮನಗರ:  ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ – ಅನ್ನದಾನೇಶ್ವರನಾಥ ಸ್ವಾಮೀಜಿ ಸಲಹೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಪ್ರತಿಯೊಬ್ಬರೂ ತಮ್ಮ ತಮ್ಮ ಒತ್ತಡದ ಜೀವನದ ನಡುವೆಯೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಹೇಳಿದರು.

ರಾಮನಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ರೋಟರಿ ಬಿಜಿಎಸ್ ಕಾಂಗರೂ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಎಲ್ಲರ ಆರೋಗ್ಯದಲ್ಲಿ ಯಾವಾಗ ಬೇಕಾದರೂ ಏರುಪೇರು ಆಗಬಹುದು, ಒತ್ತಡದ ಜೀವನ, ಜಂಕ್ ಫುಡ್ ಸೇವನೆ, ನಿಗದಿತ ವ್ಯಾಯಾಮ ಇಲ್ಲದ ಕಾರಣ, ರಕ್ತದೊತ್ತಡ, ಸಕ್ಕರೆ ಕಾಯಿಲೆಯಂತಹ ಅನೇಕ ಕಾಯಿಲೆಗಳಿಂದ ಮನುಷ್ಯ ಬಳುತ್ತಿದ್ದಾನೆ, ಈ ನಿಟ್ಟಿನಲ್ಲಿ ಪ್ರತಿ ತಿಂಗಳಿಗೊಮ್ಮೆಯಾದರೂ ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದು ಕರೆ ನೀಡಿದರು.

ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ, ಬಿಜಿಎಸ್ ಭಕ್ತವೃಂದ ಮತ್ತು ಕೆಎಸ್‌ಆರ್‌ಟಿಸಿ ನೌಕರರು ಕಳೆದ 9 ವರ್ಷಗಳಿಂದ ಅರವಂಟಿಗೆ ನಡೆಸಿಕೊಂಡು ಜಾತ್ರೆಗೆ ತೆರಳುವ ಭಕ್ತರಿಗೆ ಅನ್ನದಾನ, ಬಸ್ ವ್ಯವಸ್ಥೆ ಮಾಡುತ್ತಿರುವುದು ಶ್ಲಾಘನೀಯ, 10 ನೇ ವರ್ಷದ ಅರವಂಟಿಗೆಯ ನೆನಪಿಗೆ ಕಾಂಗರೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದಾರೆ ಭಕ್ತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಬಿಜಿಎಸ್ ಭಕ್ತವೃಂದದ ಸಿದ್ದಲಿಂಗೇಗೌಡ (ಮಧು) ಮಾತನಾಡಿ, 10 ನೇ ವರ್ಷದ ಅರವಂಟಿಗೆಯನ್ನು ಅದ್ದೂರಿಯಾಗಿ ಮಾಡಬೇಕೆಂಬ ಆಸೆಗೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಅಡ್ಡಿಯಾಯಿತು. ಕೇವಲ 4 ದಿನಗಳಲ್ಲಿ ಭಕ್ತರ ಮತ್ತು ದಾನಿಗಳ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಿ, 8000 ಮಂದಿಗೆ ಅನ್ನದಾನ ಮತ್ತು 1600 ಮಂದಿಗೆ ಆರೋಗ್ಯ ತಪಾಸಣೆಯನ್ನು ಆಸ್ಪತ್ರೆಯ ಸಿಬ್ಬಂದಿ ಮಾಡಿದ್ದಾರೆ ಎಂದರು.

ಅರವಂಟಿಗೆಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್, ಘಟಕ ವ್ಯವಸ್ಥಾಪಕರಾದ ರಾಘವೇಂದ್ರ, ಪ್ರದೀಪ್, ಸಂಚಾರ ನಿಯಂತ್ರಕರು, ಸಾರಿಗೆ ಸಿಬ್ಬಂದಿ, ಬಿಜಿಎಸ್ ಭಕ್ತವೃಂದದ ಪದಾಧಿಕಾರಿಗಳು, ಒಕ್ಕಲಿಗ ಸರ್ಕಾರಿ ನೌಕರರ ಸಂಘ ಮತ್ತು ನೇಗಿಲಯೋಗಿ ಟ್ರಸ್ಟ್ ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು