NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಶಿವಮೊಗ್ಗ ವಿಭಾಗ ಸಂಸ್ಥೆ ವಾಹನ ಸ್ವಂತಕ್ಕೆ ಬಳಕೆ: ಆದರೂ ಅಧಿಕಾರಿ, ಚಾಲಕನ ವಿರುದ್ಧ ಕ್ರಮಕ್ಕೆ ಮೇಲಧಿಕಾರಿಗಳ ಹಿಂದೇಟು!

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅಧಿಕಾರಿಗಳು ಸಂಸ್ಥೆಯ ಕೆಲಸದ ವೇಳೆ ಉಪಯೋಗಿಸಬೇಕಾದ ವಾಹನವನ್ನು ತಮ್ಮ ಸ್ವಂತಕ್ಕೆ ಬಳಿಸಿಕೊಳ್ಳುವ ಮೂಲಕ ಅದು ಕೂಡ ಮನೆಗೆ ಕುಡಿಯುವ ನೀರನ್ನು ಈ ವಾಹನದಲ್ಲೇ ತರುವಷ್ಟರ ಮಟ್ಟಿಗೆ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.

ವಾಹನ ಸಂಖ್ಯೆ ಕೆ.ಎ.57 ಎಫ್-5249 ಈ ವಾಹನವು ಸಾರಿಗೆ ಸಂಸ್ಥೆಯ ವಾಹನವಾಗಿದೆ. ಇದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಶಿವಮೊಗ್ಗ ವಿಭಾಗಕ್ಕೆ ಸೇರಿದ್ದು, ವಿಭಾಗದ ಅಧಿಕಾರಿಗಳು ಸರಿಯಾದ ಸಮಯಕ್ಕೆ ಆಫೀಸಿಗೆ ಹೋಗಿ ಬರುವುದಕ್ಕೆ ನೀಡಿದಂತ ವಾಹನವಾಗಿದೆ.

ಆದರೆ, ಈ ವಾಹನವನ್ನು ಅಧಿಕಾರಿಗಳು ಹಾಗೂ ಈ ಜೀಪಿನ ಚಾಲಕ ಇಬ್ಬರು ತಮ್ಮ ಸ್ವಂತಕ್ಕೆ ಮನಸ್ಸಿಗೆ ಬಂದ ಹಾಗೆ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಜೀಪನ್ನು ಅಧಿಕಾರಿಗಳ ತಮ್ಮ ಸ್ವಂತಕ್ಕೆ ಬಳಿಸಿಕೊಳ್ಳುವುದಲ್ಲದೇ, ಈ ಜೀಪೀನ ಚಾಲಕನಿಗೂ ಆತನ ಹೆಂಡತಿ ಮಕ್ಕಳೊಂದಿಗೆ ಶಾಪಿಂಗ್ ಮಾಲ್‌ ಸೇರಿದಂತೆ ಇತರ ಸ್ವಂತಕ್ಕೆ ಉಪಯೋಗಿಸಿಕೊಳ್ಳುವುದಕ್ಕು ಪರೋಕ್ಷವಾಗಿ ಅನುಮತಿ ನೀಡಿದ್ದಾರೆ ಎಂಬ ಆರೋಪವಿದೆ.

ನಿಗಮದ ವಾಹನದಲ್ಲಿ ಅಧಿಕಾರಿಯ ಮಕ್ಕಳು ಮತ್ತು ಚಾಲಕನ ಮಕ್ಕಳನ್ನು ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಜೀಪಿನಲ್ಲಿ ರೌಂಡ್ಸ್ ಕರೆದು ಕೊಂಡು ಹೋಗುವುದು ಮಾಡುತ್ತಿದ್ದಾರೆ. ಅಲ್ಲದೆ ಕರ್ತವ್ಯದ ವೇಳೆ ಅಧಿಕಾರಿಗಳನ್ನು ಕಚೇರಿಗೆ ಬಿಟ್ಟು ಊಟ/ ಉಪಾಹಾರಕ್ಕೆ ಮನೆಗೆ ಜೀಪಿನಲ್ಲಿ ಬಂದು ಹೋಗುವುದು ಮಾಡುತ್ತಿದ್ದಾರೆ.

ಹೀಗೆ ಮಾಡುತ್ತಿರುವುದರಿಂದ ಪ್ರತಿ ತಿಂಗಳು ನೂರಾರು ಲೀಟರ್ ಡೀಸೆಲ್ ಈ ಅಧಿಕಾರಿ ಮತ್ತು ಚಾಲಕನ ಕುಟುಂಬದವರಿಗಾಗಿ ಖರ್ಚು ಮಾಡಿಂತಾಗುತ್ತಿದೆ. ಇದರಿಂದ ಸಂಸ್ಥೆಗೆ ಸಾವಿರಾರು ರೂಪಾಯಿಗಳ ನಷ್ಟ ಉಂಟಾಗುತ್ತಿದೆ. ಈ ವಿಷಯವು ಶಿವಮೊಗ್ಗ ವಿಭಾಗದ ಎಲ್ಲ ಅಧಿಕಾರಿಗಳಿಗೆ ತಿಳಿದಿದ್ದರೂ ಸಹ ಸಂಬಂಧ ಪಟ್ಟ ಮೇಲಧಿಕಾರಿಗಳು ಈವರೆಗೂ ಯಾವುದೇ ರೀತಿಯ ಶಿಸ್ತು ಕ್ರಮ ಕೈಗೊಂಡಿಲ್ಲ.

ಶಿವಮೊಗ್ಗ ಸಾರಿಗೆ ವಿಭಾಗದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತೆ ಇದೆ. ಅದನ್ನು ಯಾರಾದರೂ ಸಿಬ್ಬಂದಿಗಳು ಪ್ರಶ್ನೆ ಮಾಡಿದರೆ ಪ್ರಶ್ನೆ ಮಾಡುವ ‌ಸಿಬ್ಬಂದಿಗಳನ್ನೇ ಟಾರ್ಗೆಟ್ ಮಾಡಿ ಬೇರೆಡೆಗೆ ವರ್ಗಾವಣೆ ಮಾಡುವುದು ಶಿವಮೊಗ್ಗ ವಿಭಾಗದ ಅಧಿಕಾರಿಗಳ ಕಾಯಕವಾಗಿದೆ.

ಸಂಸ್ಥೆಯ ಬಸ್‌ಗಳಲ್ಲಿ ಓರ್ವ ಪ್ರಯಾಣಿಕರಿಗೆ ಕಂಡಕ್ಟರ ಟಿಕೆಟ್ ಹಂಚಿಕೆ ಮಾಡಿಲ್ಲದಿದ್ದರೆ ತಕ್ಷಣವೇ ಪೂರ್ವ ಪರ ವಿಚಾರಣೆ ಮಾಡದೆ ನಿರ್ವಾಹಕನನ್ನು ಅಮಾನರು ಮಾಡುವ ಈ ಅಧಿಕಾರಿಗಳು ಈ ರೀತಿಯಾಗಿ ಸಂಸ್ಥೆಯ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಂಸ್ಥೆಯ ಗೌರವ-ಘನತೆಗೆ ಚ್ಯುತಿ ಬರುವಂತೆ ಸಂಸ್ಥೆಯ ವಾಹನಗಳನ್ನು ದುರುಪಯೋಗ ಪಡಿಸಿಕೊಂಡಿರುವ ತಪ್ಪಿತಸ್ಥ ಅಧಿಕಾರಿಗಳಾಗ ವಿರುದ್ಧವೇಕೆ ಕ್ರಮ ಶಿಕ್ಷೆ ಆಗುತ್ತಿಲ್ಲ.

ಸಾರಿಗೆಯ ನಿಗಮಗಳಲ್ಲಿ ಕಾರ್ಮಿಕರಿಗೆ ಒಂದು ನ್ಯಾಯ ಅಧಿಕಾರಿಗಳಿಗೆ ಒಂದು ನ್ಯಾಯಾವೇ? ಸಂಸ್ಥೆಗೆ ಬಂದಿರುವ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎನ್ನಿಸಿ ಕೊಂಡಿರುವ ಸಂಸ್ಥೆಯ ಎಂಡಿ ಅನ್ಬುಕುಮಾರ್‌ ಅವರು ಈ ಬಗ್ಗೆ ಕಂಡು ಕಾಣಿಸದಂತೆ ಜಾಣ ಕುರುಡು ಅನ್ನುವಂತೆ ನಡೆದುಕೊಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ.

ಇನ್ನಾದರೂ ಈ ಬಗ್ಗೆ ಗಮನ ಹರಿಸಿ ಭ್ರಷ್ಟ ಅಧಿಕಾರಿಗಳ ನಡೆಯಿಂದ ನಿಗಮಕ್ಕೆ ಆಗುತ್ತಿರುವ ಆರ್ಥಿಕ ನಷ್ಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡು ಶಿವಮೊಗ್ಗ ವಿಭಾಗದ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕೂಡಲೇ ಅಮಾನತು ಮಾಡುವ ಮೂಲಕ ಸೂಕ್ತ ಶಿಸ್ತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ವಿಭಾಗ ನೌಕರರು ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ