KSRTC ಸ್ಕ್ರ್ಯಾಪ್ ಬಸ್ಗಳನ್ನೇ ತೆಗೆದುಕೊಂಡು ಹೋಗಬೇಕು: ಚಾಲನಾ ಸಿಬ್ಬಂದಿಗೆ ಡಿಎಂ ತಾಕೀತು
ಚಿಕ್ಕಮಗಳೂರು: ಚಿಕ್ಕಮಗಳೂರು ವಿಭಾಗದ ಸಕಲೇಶಪುರ ಘಟಕದ ಕೆಎಸ್ಆರ್ಟಿಸಿಯ ಚಾಲಕರು ಮತ್ತು ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿಯ ಮೇಲೆ ದೌರ್ಜನ್ಯ, ಏಕವಚನ ಪದ ಪ್ರಯೋಗ, ಅಧಿಕಾರಿಗಳ ಅಮಾನವೀಯತೆಗೆ ಹಿಡಿದ ಕನ್ನಡಿಯಾಗಿದೆ.
ಸಕಲೇಶಪುರ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಗನ್ನಾಥ್ ಎಂಬುವರು ಹುದ್ದೆಯಲ್ಲಿ ಎಡಬ್ಲ್ಯೂಎಸ್ ಆಗಿದ್ದಾರೆ. ಅದರ ಜತೆಗೆ ಸದ್ಯ ಸಕಲೇಶಪುರ ಘಟಕದ ಪ್ರಭಾರಿ ಘಟಕ ವ್ಯವಸ್ಥಾಪಕರಾಗಿ ನೇಮಕಗೊಂಡಿದ್ದಾರೆ.
ಆದರೆ, ಘಟಕದಲ್ಲಿ ಬಸ್ಗಳನ್ನು ದುರಸ್ತಿಗೊಳಿಸುವುದಕ್ಕೆ ಮಾತ್ರ ಮುಂದಾಗುವುದಿಲ್ಲ. ಈ ಬಗ್ಗೆ ಚಾಲಕ ನಿರ್ವಾಹಕರು ಕೇಳಿದರೆ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ ಕಳುಹಿಸುತ್ತಾರೆ.
ಇವರು ಬಾಯಿ ಬಿಟ್ಟರು ಎಂದರೆ ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳಿಗೆ ಕೆಟ್ಟ ಪದಗಳ ಪ್ರಯೋಗವನ್ನೇ ಮಾಡುವುದು. ಇವರ ಸೊಂಟದ ಕೆಳಗಿನ ಬೈಗುಳಗಳಿಂದ ಘಟಕದ ನೌಕರರು ಬೇಸತ್ತುಹೋಗಿದ್ದಾರೆ.
ಇನ್ನು ಘಟಕದಲ್ಲಿ ಎಕ್ಸ್ಪ್ರೆಸ್ ಅನುಸೂಚಿಗಳನ್ನು ಕಾರ್ಯಾಚರಣೆ ಮಾಡುತ್ತಿರುವಂತಹ ಚಾಲನಾ ಸಿಬ್ಬಂದಿಗಳಿಂದ ಮಂತ್ಲಿ ನೀಡಬೇಕಂತೆ. ಒಂದು ವೇಳೆ ಕೊಡದಿದ್ದರೆ, ಮುಗಿದೆ ಹೋಯಿತು. ನಾವು ಮೇಲಿನವರಿಗೆ ಕೊಡಬೇಕು. ನೀವು ಹೀಗೆ ಮಾಡಿದರೆ ಹೇಗೆ ಎಂದು ಇನ್ನಷ್ಟು ಸೊಂಟದ ಕೆಳಗಿನ ಪದ ಪ್ರಯೋಗ ಮಾಡಿ ಹಿಂಸೆ ನೀಡುತ್ತಿದ್ದಾರೆ ಎಂದು ನೌಕರರು ಅಲವತ್ತುಕೊಂಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮೇಲಧಿಕಾರಿಗಳು ಇಂಥ ಕೆಳಹಂತದ ಅಧಿಕಾರಿಗಳಿಗೆ ತಿಂಗಳಿಗೆ ಇಂತಿಷ್ಟು ಎಂಬ ಸೂಟ್ಕೇಸ್ಸಂಸ್ಕೃತಿ ಅಳವಡಿಸಿಕೊಂಡಿದ್ದಾರೆ. ಅದನ್ನು ಕೆಳಹಂತದ ಅಧಿಕಾರಿಗಳು ಕೇಳದಿದ್ದರೆ ಅವರನ್ನು ವರ್ಗಾವಣೆ ಇಲ್ಲ ಯಾವುದಾದರು ಒಂದು ಪ್ರಕರಣದಲ್ಲಿ ಸಿಲುಕಿಸಿ ಮಾನಸಿಕ ಹಿಂಸೆ ನೀಡುತ್ತಾರೆ.
ಇನ್ನು ಈ ಮೇಲಧಿಕಾರಿಗಳ ಕಿರುಕುಳದಿಂದ ತಪ್ಪಿಸಿಕೊಳ್ಳಲು ಈ ಕೆಳಹಂತದ ಅಧಿಕಾರಿಗಳು ಚಾಲನಾ ಮತ್ತು ತಾಂತ್ರಿಕಾ ಸಿಬ್ಬಂದಿಯ ರಕ್ತಬಸಿಯಲು ಮುಂದಾಗುತ್ತಾರೆ. ಇಲ್ಲಿ ಕೊನೆಯದಾಗಿ ಕಷ್ಟಕ್ಕೆ ಸಿಲುಕಿಕೊಳ್ಳುವವರು ಈ ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳು ಮಾತ್ರ.
ಇನ್ನು ಸರಿಯಾಗಿ ಫಿಟ್ನೆಸ್ಇರುವ ಬಸ್ಗಳನ್ನು ಕೊಡದೆ. ಚಾಲನಾ ಸಿಬ್ಬಂದಿಯನ್ನು ನಿಂದಿಸುವುದು. ಹೌದು! ಇದು ಸ್ಕ್ರ್ಯಾಪ್ಗಾಡಿ ಇದನ್ನೇ ನೀನು ತೆಗೆದುಕೊಂಡು ಹೋಗಬೇಕು ಎಂದು ತಾಕೀತು ಮಾಡುವುದು. ಸ್ಕ್ರ್ಯಾಪ್ಗಾಡಿಗಳನ್ನು ತೆಗೆದುಕೊಂಡು ಹೋಗಿ ಪ್ರಯಾಣಿಕರಿಗೆ ತೊಂದರೆ ಆದರೆ, ಕಾರಣ ಕೇಳಿ ಮೆಮೋ ಕೊಡುವುದು.
ಒಟ್ಟಾರೆ, ಡಿಪೋ ಮಟ್ಟದಲ್ಲಿ ನಡೆಯುವ ಮತ್ತು ಅಧಿಕಾರಿಗಳು ನಡೆದುಕೊಳ್ಳುವ ನಡೆಯನ್ನು ನಿಯಂತ್ರಿಸುವಲ್ಲಿ ಯಾವುದೇ ನೌಕರರ ಪರ ಸಂಘಟನೆಗೂ ಬೀಜ ಇಲ್ಲದಿರುವುದರಿಂದ ನೌಕರರು ಈ ರೀತಿಯ ತೊಂದರೆ ಅನುಭವಿಸುವಂತಾಗಿದೆ. ಇನ್ನು ಕಾನೂನಿನ ಪ್ರಕಾರ ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾದ ಅಧಿಕಾರಿಗಳೆ ವಾಮ ಮಾರ್ಗದಲ್ಲಿ ಹೋದರೆ ಕೇಳುವವರಾರು?
ಇನ್ನಾದರೂ ಚಿಕ್ಕಮಗಳೂರು ವಿಭಾಗದ ಸಕಲೇಶಪುರ ಘಟಕದ ಪ್ರಭಾರಿ ವ್ಯವಸ್ಥಾಪಕರ ಬಾಯಿಗೆ ಬೀಗಹಾಕಿ ನೌಕರರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳುವುದಕ್ಕೆ ತಾಕೀತು ಮಾಡಬೇಕು. ಜತೆಗೆ ಈತನ ಲಂಚಗುಳಿತನದ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ ಮಾರ್ಗಗಳಿಗೆ ನೀಡುವ ಬಸ್ಗಳು ಫಿಟ್ನೆಸ್ಆಗಿರಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.
Related
You Might Also Like
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್ ಮೇಲೇರಿತು!
ರಾಮನಗರ: ಮುಂದೆ ಹೋಗುತ್ತಿದ್ದ ಕಾರು ಚಾಲಕ ಅಚಾನಕ್ಕಾಗಿ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ವೇಗವಾಗಿ ಬಂದ ಕಾರು ಅದರ ಮೇಲೇರಿರುವ ಘಟನೆ ಜಿಲ್ಲೆಯ ಲಂಬಾಣಿ ತಾಂಡಾ ಬಳಿ ಬಳಿ...
ರೈತ ನಾಯಕ ಕುರುಬೂರು ಶಾಂತಕುಮಾರ್ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪಂಜಾಬ್ನ ಪಟಿಯಾಲ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶುಕ್ರವಾರ ಕರ್ನಾಟಕದ ರೈತ ನಾಯಕ ಕುರುಬೂರು ಶಾಂತಕುಮಾರ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಅವರು ಪಟಿಯಾಲದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ....
ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ
ನ್ಯೂಡೆಲ್ಲಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಜನರು ದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಮೃತಪಟ್ಟಿರುವ ದುರಂತ ಘಟನೆ ರಾತ್ರಿ ಸಂಭವಿಸಿದೆ. ಪ್ರಯಾಗ್ರಾಜ್ ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ...
ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು...
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ
ಬೆಂ.ಗ್ರಾಮಾಂತರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿಯಲ್ಲಿ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲಿ ವಿವಿಧೋದ್ದೇಶ ಪುನರ್ವಸತಿ...
ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ 8 ವಲಯಗಳಲ್ಲೂ ನಗರದಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರು ಪ್ರತಿನಿತ್ಯ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಾರೆ. ಪ್ರತಿ ದಿನ ಹಸಿ ಕಸ ಸಂಗ್ರಹಿಸಲು ಆಟೋ...
KSRTC ರಿಯಾಯಿತಿ ದರದ ಪಾಸ್ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !!
ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಅಧಿಕಾರಿಗಳ ಅಂಧ ದರ್ಬಾರ್ಗೆ ಇದೇ ಸಾಕ್ಷಿ ಅಧಿಕಾರಿಗಳು ಮತ್ತು ಕುಟುಂಬಕ್ಕೆ ಶೇ.50ರಷ್ಟು ರಿಯಾಯಿತಿ ನೌಕರರು ಮತ್ತು ಕುಟುಂಬಕ್ಕೆ ಶೇ.25ರಷ್ಟು ರಿಯಾಯಿತಿ ಸಾರಿಗೆಯಲ್ಲಿ ಊಸರವಳ್ಳಿ...
ಪಂಜಾಬ್ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು
ಪಟಿಯಾಲ: ಕರ್ನಾಟಕದ ರೈತ ಮುಖಂಡ, ರೈತ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕ ಕುರುಬೂರು ಶಾಂತಕುಮಾರ್ ಸಂಚರಿಸುತ್ತಿದ್ದ ಕಾರು ಅಪಘಾಕ್ಕೀಡಾಗಿದ್ದು ಸಣ್ಣಪುಟ್ಟಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಂಜಾಬ್ನಲ್ಲಿ ಆಯೋಜಿಸಿದ್ದ...
ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ- ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬಿಬಿಎಂಪಿ...