CrimeNEWSನಮ್ಮರಾಜ್ಯ

KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಮಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಾರಿಗೆ ಸಿಬ್ಬಂದಿಯೇ ಚಾಕು ಇರಿಯಲು ಯತ್ನಿಸಿರುವ ಘಟನೆ ನಗರದ ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದೆ.

ಚಾಕುವಿನಿಂದ ದಾಳಿ ಮಾಡಿರುವ ಸಾರಿಗೆ ಸಿಬ್ಬಂದಿಯನ್ನು ಜೂನಿಯರ್ ಅಸಿಸ್ಟೆಂಟ್ ರಿತೇಶ್ ಎಂದು ಗುರುತಿಸಲಾಗಿದೆ. ಘಟನೆಯಿಂದ ಗಾಯಗೊಂಡಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿಸಿ ಮೇಲೆ ಮಾಡಿದ ರಿತೇಶ್ ಬಳಿಕ ಸ್ಥಳದಿಂದ ಪರಾರಿಯಾಗಿರುವುದಾಗಿದ್ದಾನೆ. ಸದ್ಯ ಚಾಕುವಿನಿಂದ ದಾಳಿ ಮಾಡುತ್ತಿದ್ದಾಗ ಕೈ ಅಡ್ಡ ಕೊಟ್ಟಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ‌. ಘಟನೆಯಿಂದಾಗಿ ಡಿಸಿ ಜಗದೀಶ್ ಕುಮಾರ್ ಅವರ ಎಡಗೈನ ಎರಡು ಬೆರಳುಗಳಿಗೆ ಗಾಯವಾಗಿದೆ.

ರಿತೇಶ್ ಹಾಜರಾತಿ ಸರಿಯಿಲ್ಲ ಎಂದು ಕುಟುಂಬವರನ್ನು ಕರೆಸಿ ಜಗದೀಶ್ ಕುಮಾರ್ ಅವರು ಕೌನ್ಸೆಲಿಂಗ್ ಮಾಡಿದ್ದರು. ಕುಟುಂಬದವರ ಮನವಿಯ ಮೇರೆಗೆ ಚಿಕ್ಕಮಗಳೂರಿನಿಂದ ಬೇಲೂರಿಗೆ ರಿತೇಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದರಿಂದ ಕುಪಿತಗೊಂಡಿದ್ದ ರಿತೇಶ್, ಗುರುವಾರ ಸಂಜೆ 7.30ರ ವೇಳೆಗೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ.

ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದ ಒಳಗೆಯೇ ಈ ಘಟನೆ ನಡೆದಿರುವುದು ಅಧಿಕಾರಿಗಳಿಗೆ ಆಘಾತ ಉಂಟು ಮಾಡಿದೆ. ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ರಿತೇಶ್ ನಾಪತ್ತೆಯಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ