NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು – ಕಿಮೀ ವರೆಗೆ ಟ್ರಾಫಿಕ್ ಜಾಮ್

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕರ್ನಾಟಕರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್​ಗಳು ರಸ್ತೆ ಮಧ್ಯೆ ಕೆಟ್ಟು ನಿಂತಿದ್ದರಿಂದ ಚಾರ್ಮಾಡಿ ಘಾಟ್​ನ ಅಣ್ಣಪ್ಪಸ್ವಾಮಿ ದೇವಾಲಯದ ಬಳಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಈ ಟ್ರಾಫಿಕ್ ಜಾಮ್‌ನಿಂದಾಗಿ ಪ್ರವಾಸಿಗರು, ಸ್ಥಳೀಯ ಪ್ರಯಾಣಿಕರು ಗಂಟೆಗಂಟೆಲೇ ತೊಂದರೆ ಅನುಭವಿಸುವಂತಾಗಿದೆ. ಅಲ್ಲದೆ ಕಿಲೋ ಮೀಟರ್ ಗಟ್ಟಲೆ ವಾಹನಹಳು ನಿಂತಿದ್ದು, ಹಿಂದಕ್ಕೂ ಹೋಗಲಾಗದೆ ಮುಂದೆಯೂ ಚಲಿಸಲಾಗದೆ ಸಮಸ್ಯೆಗೆ ಸಿಲುಕಿದ್ದಾರೆ ಜನರು.

ಇನ್ನು ಮಳೆಯು ಬೀಡುತ್ತಿದ್ದು, ಈ ಮಳೆಯಲ್ಲಿ ಯಾವ ಕಡೆ ಹೋಗಬೇಕು ಎನ್ನುವುದು ಗೊತ್ತಾಗದೆ ಪರದಾಡುತ್ತಿದ್ದಾರೆ. ಇದು ಚಿಕ್ಕಮಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಾಗಿರುವುದರಿಂದ ವಾಹನಗಳ ಓಡಾಟ ಹೆಚ್ಚಾಗಿರುತ್ತದೆ ಹೀಗಾಗಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಿವೆ.

ಇತ್ತ ನಿರಂತರ ಮಳೆಯಿಂದ ಪ್ರವಾಸಿಗರು ಪ್ರಯಾಣಿಕರು ಪರದಾಡಿದ್ದು ಇಂತಹ ಟ್ರಾಫಿಕ್​ನಲ್ಲಿ ಮಂಗಳೂರಿಗೆ ಹೋಗುತ್ತಿದ್ದ ಆಂಬುಲೆನ್ಸ್​ವೊಂದು ಕೂಡ ಸಿಲುಕಿಕೊಂಡಿದ್ದು ಒಳಗಿದ್ದ ರೋಗಿಯ ಜೀವ ಉಳಿಸಲು ಆಂಬುಲೆನ್ಸ್‌ ಸಿಬ್ಬಂದಿ ಹರಸಹಾಸ ಪಡುತ್ತಿದ್ದಾರೆ. ಇತ್ತ ಟ್ರಾಫಿಕ್ ಜಾಮ್‌ ಕ್ಲಿಯರ್ ಮಾಡಲು ಬಣಕಲ್ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!