CrimeNEWSಉದ್ಯೋಗನಮ್ಮಜಿಲ್ಲೆ

KSRTC: ಹೊರಗುತ್ತಿಗೆ ಚಾಲಕರ ನೇಮಕಕ್ಕೆ 30-40 ಸಾವಿರ ರೂ. ಲಂಚ – ಭ್ರಷ್ಟರಿಗೆ ಕಡಿವಾಣವೇ ಇಲ್ಲ!

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಚಾಲಕರ ಹೊರಗುತ್ತಿಗೆ ಹುದ್ದೆಯ ನೇಮಕಾತಿಯಲ್ಲೂ ಕೂಡ ಗೋಲ್ಮಾಲ್ ನಡೆಯುತ್ತಿದ್ಯಾ ಎಂಬ ಪ್ರಶ್ನೆ ಈ ಹಿಂದಿನಿಂದಲೂ ಕಾಡುತ್ತಿದೆ. ಈಗ ಅದಕ್ಕೆ ಪುಷ್ಠಿ ನೀಡುವಂತೆ ವಿಡಿಯೋವೊಂದು ವೈರಲ್ ಆಗಿದೆ.

ಕೆಎಸ್‌ಆರ್‌ಟಿಸಿ ಚಾಲಕರ ಹುದ್ದೆ ಹೊರಗುತ್ತಿಗೆ ನೌಕರಿಯಲ್ಲಿ ಲಂಚ ಕೊಟ್ಟವರಿಗೆ ಕೆಲಸ ಕೊಡುತ್ತಿದ್ದಾರೆ ಎಂದು ಚಾಲಕರೊಬ್ಬರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಹಣ ಕೊಟ್ಟರೆ ಟ್ರ‍್ಯಾಕ್ ಪರೀಕ್ಷೆ ಕೂಡ ಪಾಸ್ ಮಾಡುತ್ತಿದ್ದಾರೆ ಎಂದು ಮಾತನಾಡಿದ್ದಾರೆ.

ಚಾಮರಾಜನಗರ ಬಸ್ ನಿಲ್ದಾಣದಲ್ಲಿ ಚಾಲಕ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಟ್ರ‍್ಯಾಕ್ ಪರೀಕ್ಷೆ ಪಾಸ್ ಆದರೆ 30 ಸಾವಿರ ರೂಪಾಯಿ ಕೊಟ್ಟರೆ ಸಾಕು, ಟ್ರ‍್ಯಾಕ್ ಪರೀಕ್ಷೆ ಪಾಸ್ ಆಗಿಲ್ಲ ಅಂದ್ರೆ 40 ಸಾವಿರ ರೂಪಾಯಿ ಕೊಡಬೇಕೆಂದು ಮತ್ತೊಬ್ಬ ವ್ಯಕ್ತಿಗೆ ಹೇಳುತ್ತಿದ್ದಾರೆ.

ಇನ್ನು ನಾನು ಕೂಡ ಹಣ ಕೊಟ್ಟು ಟ್ರ‍್ಯಾಕ್ ಪರೀಕ್ಷೆ ಪಾಸ್ ಆದೆ ಎಂದು ಡ್ರೈವರ್ ಹೇಳುತ್ತಿದ್ದು, ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಲಂಚ ಪಡೆದು ಪರೀಕ್ಷೆ ಪಾಸ್ ಮಾಡುತ್ತಿದ್ದಾರೆ ಎಂದು ಸಾರಿಗೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಶಕ್ತಿ ಯೋಜನೆ ಬಳಿಕ ಸಾವಿರಾರು ಪ್ರಯಾಣಿಕರು ಬಸ್‌ನಲ್ಲಿ ಸಂಚಾರ ಮಾಡುತ್ತಿದ್ದಾರೆ. ನೂರಾರು ಜನರನ್ನು ಹೊತ್ತೊಯ್ಯುವ ಬಸ್ ಚಾಲಕನನ್ನು ಹಣ ಪಡೆದು ನೇಮಕಾತಿ ಮಾಡಿದರೆ ಜನರ ಪ್ರಾಣಕ್ಕೆ ಹೊಣೆ ಯಾರೆಂಬ ಪ್ರಶ್ನೆ ಎದ್ದಿದೆ.

ಸದ್ಯ ಈ ಬಗ್ಗೆ ಸಾರಿಗೆ ಅಧಿಕಾರಿಗಳ ವಿರುದ್ಧ ಕನ್ನಡ ಪರ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಲನೆ ಬಾರದವರನ್ನು ಅಕ್ರಮವಾಗಿ ನೇಮಕ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅಪಘಾತ ಸಂಭವಿಸಿ ಜನರ ಪ್ರಾಣಕ್ಕೂ ಕೂಡ ಕುತ್ತು ಉಂಟಾಗಲಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ