KSRTC ಫೋನ್ಪೇ ಹಗರಣ: ತುಮಕೂರು ಸಾರಿಗೆ ಡಿಸಿ, ಡಿಟಿಒ ಸೇರಿ 5 ಮಂದಿಗೆ ನೋಟಿಸ್ ಜಾರಿ ಮಾಡಿದ ಎಂಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದಲ್ಲಿ ನಡೆದುಇದೆ ಎನ್ನಲಾದ ಸುಮಾರು 75500 ರೂಪಾಯಿ ಫೋನ್ಪೇ ಹಗರಣಕ್ಕೆ ಸಂಬಂಧಿಸಿದಂತೆ ತುಮಕೂರು ಸಾರಿಗೆ ಡಿಸಿ, ಡಿಟಿಒ ಸೇರಿ 5 ಮಂದಿಗೆ ಅಪಾದನ ಪತ್ರ ಜಾರಿ ಮಾಡಿರುವ ಎಂಡಿ ಅನ್ಬುಕುಮಾರ್ ಏಳು ದಿನದೊಳಗೆ ಉತ್ತರಿಸುವಂತೆ ತಾಕೀತು ಮಾಡಿದ್ದಾರೆ.
ನಿಗಮದ ತುಮಕೂರು ವಿಭಾಗದಲ್ಲಿ ಸುಮಾರು 75 ಸಾವಿರ ರೂಪಾಯಿಗೂ ಹೆಚ್ಚು ನಡೆದಿರುವ ಫೋನ್ ಪೇ ಹಗರಣದ ಬಗ್ಗೆ ಸಲ್ಲಿಸಿದ್ದ ದೂರು ಪ್ರಕರಣವನ್ನು ಮುಚ್ಚಿ ಹಾಕಲು 20000 ರೂ.ಗಳನ್ನು ಲಂಚವಾಗಿ ನನಗೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸಂಬಂಧಿಸಿದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಚಂದ್ರಶೇಖರ್ ಹಾಗೂ ವಿಭಾಗೀಯ ಸಂಚಲನಾಧಿಕಾರಿ ಕೆ.ಬಸವರಾಜು ಅವರನ್ನು ಅಮಾನುತು ಮಾಡಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರಿಗೆ ಸಿ.ನಾಗರಾಜು ಗೂಳೂರು ದಾಖಲೆ ಸಹಿತ ಕಳೆದ 2024ರ ಜನವರಿ 24ರಂದು ದೂರು ಸಲ್ಲಿಸಿದ್ದರು.
ಈ ದೂರಿನನ್ವಯ ಸಂಸ್ಥೆಯ ಎಂಡಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಚಂದ್ರಶೇಖರ್ ಹಾಗೂ ವಿಭಾಗೀಯ ಸಂಚಲನಾಧಿಕಾರಿ ಕೆ.ಬಸವರಾಜು ಸೇರಿದಂತೆ 5 ಮಂದಿ ವಿರುದ್ಧ ಪ್ರಕಣರ ದಾಖಲಿಸಿಕೊಂಡು ಅಪಾದನ ಪತ್ರವನ್ನು ನಿನ್ನೆ ಆರೋಪಿಗಳಿಗೆ ರವಾನಿಸಿದ್ದಾರೆ.
ಜನವರಿಲ್ಲಿ ಬೆಂಗಳೂರಿನ ಶಾಂತಿನಗರದಲ್ಲಿರುವ ಸಂಸ್ಥೆ ಕೇಂದ್ರ ಕೇಚೇರಿಗೆ ಹೋಗಿ ಜಾಗೃತ ವಿಭಾಗದ ನಿರ್ದೇಶಕಿ ನಂದಿನಿ ಅವರಿಗೆ ಲಂಚದ ರೂಪದಲ್ಲಿ ಕೊಟ್ಟಿದ್ದ 20000 ರೂ. ಹಣದ ಜತೆಗೆ ದಾಖಲೆಗಳನ್ನು ನೀಡಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಾಗರಾಜು ಒತ್ತಾಯಿಸಿದ್ದರು.
ಇದಕ್ಕೆ ಸಂಬಂಧಿಸಿದಂತೆ ತುಮಕೂರು ವಿಭಾಗದ ಡಿಸಿ ಮತ್ತು ಡಿಟಿಒ ಸಂಸ್ಥೆಯ ಮಾನ ಮರ್ಯಾದಿ ಕಳೆದು ಸಾವಿರ ರೂಪಾಯಿಗಾಗಿ ಭಿಕ್ಷೆ ಬೇಡುತ್ತಿದ್ದಾರೆ. ಹೀಗಾಗಿ ಇವರ ವಿರುದ್ಧ ಕಾನೂನು ಕ್ರಮ ಕೈಗೊಂಡು ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದ್ದರು.
ಇನ್ನು ತುಮಕೂರು ಬಸ್ ನಿಲ್ದಾಣದ ಸಂಚಾರ ನಿಯಂತ್ರಕರಿಂದ ಲಂಚ ವಸೂಲಿ ಮಾಡಿರುವ ಬಗ್ಗೆಯೂ ತನಿಖೆ ನಡೆಸಿ ಈ ಅಕ್ರಮದ ಹಿಂದೆ ಇರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಂಡು ಅಮಾನುತು ಮಾಡುವ ಮೂಲಕ ಭ್ರಷ್ಟರ ಹೆಡೆಮುರಿಕಟ್ಟಬೇಕು ಎಂದು ಕೋರಿದ್ದರು.
ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ವಿಭಾಗೀಯ ಸಂಚಲನಾಧಿಕಾರಿ ಬಸವರಾಜು ಅವರು ನನ್ನ ಮೇಲೆ ಇಲ್ಲ ಸಲ್ಲದ ರೀತಿಯಲ್ಲಿ ಒತ್ತಡ ತಂದು 03-01-2025 ರಂದು ನೀಡಿರುವ ದೂರಿನ ಅರ್ಜಿಯನ್ನು ವಾಪಸ್ ಪಡೆಯುವಂತೆ ಪೀಡಿಸುತ್ತಿದ್ದಾರೆ. ಅಲ್ಲದೆ ಇವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾಕ್ಷಿ ನಾಶಪಡಿಸಲು ಪ್ರಯತ್ನಿಸಿರುತ್ತಾರೆ ಎಂದು ಆರೋಪಿಸಿದ್ದರು.
ಜ.12ರಂದು 20 ಸಾವಿರ ಕೊಟ್ಟರು: 12-01-2025ರ ಭಾನುವಾರ ಮಧ್ಯಾಹ್ನ 12ರ ಸಮಯದಲ್ಲಿ ನನ್ನ ಸ್ನೇಹಿತರು ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಕಾರಣ ಹಾಗೂ ನಾನು ಬಸ್ ನಿಲ್ದಾಣದಲ್ಲಿರುವಾಗ ನಿಗಮ ತುಮಕೂರು ವಿಭಾಗದ ತುಮಕೂರು ಘಟಕ-1ಕ್ಕೆ ಸೇರಿದ ತುಮಕೂರು ನಗರದ ನೂತನ ಬಸ್ ನಿಲ್ದಾಣ ಡಿ. ದೇವರಾಜ ಅರಸ್ ಬಸ್ ನಿಲ್ದಾಣದ ಸಹಾಯಕ ಸಂಚಾರ ನರೀಕ್ಷಕ (ಎ.ಟಿ.ಐ) ಬಿ.ಆರ್ ನಾಗರಾಜು ಅವರು ಫೋನ್ ಪೇ ಹಗರಣದ ಪ್ರಕರಣದ ಬಗ್ಗೆ ಮಾತನಾಡಲು ಬಸ್ ನಿಲ್ದಾಣದ ಸಂಚಾರ ನಿಯಂತ್ರಕರ ವಿಶ್ರಾಂತಿ ಕೊಠಡಿಗೆ ಕರೆದುಕೊಂಡು ಹೋದರು.
ಅಲ್ಲಿ ನೀವು 03-01-2025 ರಂದು ನೀಟಿರುವ ಫೋನ್ ಪೇ ಹಗರಣದ ಪ್ರಕರಣದ ಬಗ್ಗೆ ಸಲ್ಲಿಸಿರುವ ದೂರು ಅರ್ಜಿಯನ್ನು ವಾಪಸ್ ಪಡೆದು ಪ್ರಕರಣವನ್ನು ಮುಚ್ಚಿಹಾಕುವಂತೆ ತಿಳಿಸಿ ತುಮಕೂರು ಬಸ್ ನಿಲ್ದಾಣದ ಶಿವಮೊಗ್ಗ ಅಂಕಣದ ಆಗಮನ-ನಿರ್ಗಮನಗಳ ಪುಸ್ತಕದ 17-07-2024 ರ ಪುಟ ಸಂಖ್ಯೆ 15-16ರ, ನಾಲ್ಕು ಹಾಳೆಗಳ ಮಧ್ಯೆ ಸುತ್ತಿ ನನ್ನ ಪ್ಯಾಂಟಿನ ಜೇಬಿಗೆ 20 ಸಾವಿರ ರೂ. ಹಣವನ್ನು ನಾಗರಾಜು ಅವರು ಬಲವಂತದಿಂದ ಏಕಾಏಕಿ ಇಟ್ಟರು.
ಈಗ ನಾನು (ನಾಗರಾಜು) ದೂರು ಮನವಿ ಪತ್ರದೊಂದಿಗೆ ನನಗೆ ನೀಡಿದ ಹಣದ ಕ್ರಮಸಂಖ್ಯೆಯಲ್ಲಿ ತಿಳಿಸಿರುವ ವಿವರದಂತೆ 500 ರೂ.ಗಳ ಮುಖ ಬೆಲೆಯ ಒಟ್ಟು 40 ನೋಟುಗಳ ಮೊತ್ತ 20000 ರೂಪಾಯಿ ನಗದು ಹಣವನ್ನು ಅಡಕಗೊಳಿಸಿರುತ್ತೇನೆ. ಹಾಗೂ ತುಮಕೂರು ಬಸ್ ನಿಲ್ದಾಣದ ಶಿವಮೊಗ್ಗ ಅಂಕಣದ ಆಗಮನ-ನಿರ್ಗಮನಗಳ ನಾಲ್ಕು ಪುಟಗಳ ಹಾಳೆಯಲ್ಲಿ ಸುತ್ತಿಕೊಟ್ಟಿದ್ದ ಹಾಳೆಯನ್ನು ಸಹ ಲಗತ್ತಿಸಿದ್ದೇನೆ ಎಂದು ದೂರು ಕೊಟ್ಟ ವೇಳೆ ವಿವರಿಸಿದ್ದರು.
ಈ ರೀತಿ ಫೋನ್ ವೇ ಹಗರಣ ನಡೆಸಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಹಾಗೂ ವಿಭಾಗೀಯ ಸಂಚಲನಾಧಿಕಾರಿಯಾದ ಕೆ.ಬಸವರಾಜು ಅವರು ಈ ಹಗರಣವನ್ನು ಮುಚ್ಚಿಹಾಕಲು ನನಗೆ ಲಂಚದ ರೂಪದಲ್ಲಿ ಈ ರೀತಿ 20,000 ರೂ.ಗಳ ಹಣವನ್ನು ನೀಡಿದ್ದು, ಈ ಇಬ್ಬರು ಅಧಿಕಾರಿಗಳ ವಿರುದ್ಧ ದಯೇ ದಕ್ಷಿಣೆ ತೋರದೆ ಸೂಕ್ತ ಕಾನೂನು ಕ್ರಮ ಕೈಗೊಂಡು ಅಮಾನತುಪಡಿಸಿ ತುಮಕೂರು ವಿಭಾಗದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕೊನೆ ಮೊಳೆ ಹೊಡೆಯಬೇಕು ಎಂದು ಎಂಡಿ ಅವರಲ್ಲಿ ಮನವಿ ಮಾಡಿದ್ದರು.
ನಾಗರಾಜು ಅವರ ಎಂಡಿಗೆ ಕೊಟ್ಟ ದೂರಿನ ಬಗ್ಗೆ ವಿಜಯಪಥ ಮೀಡಿಯಾ ಕೂಡ ಜನವರಿ 24ರಂದು ಸಮಗ್ರ ವರದಿ ಮಾಡಿತ್ತು. ನಾಗರಾಜು ಅವರು ಕೊಟ್ಟ ದೂರು ಹಾಗೂ ಮೀಡಿಯಾದಲ್ಲಿ ಬಂದಿರುವ ವರಧಿಯ ಪರಿಣಾಮ ಇಂದು ಭ್ರಷ್ಟ ಅಧಿಕಾರಿಗಳಿಗೆ ಎಂಡಿ ಆಪಾದನ ಪತ್ರ ಕೊಟ್ಟು ಕ್ರಮಕ್ಕೆ ಮುಂಗಿದ್ದಾರೆ.
ಇಲ್ಲಿ ನೌಕರರನ್ನು ಕಾಡುವ ಅಧಿಕಾರಿಗಳಿಗೆ ತಕ್ಕ ಕಾನೂನಿ ಪಾಠ ಕಲಿಸುವ ಅಗತ್ಯವಿದ್ದು ಈ ಬಗ್ಗೆ ವ್ಯವಸ್ಥಾಪಕ ನಿರ್ದೇಶಕರು ಯಾವುದೆ ಒತ್ತಡಕ್ಕೆ ಒಳಗಾಗದೆ ಲಂಚಬಾಕರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಸಂಸ್ಥೆಯ ಗೌರವವನ್ನು ಕಾಪಾಡಬೇಕಿದೆ ಎಂದು ನಾಗರಾಜ್ ಮನವಿ ಮಾಡಿದ್ದಾರೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...