NEWSಉದ್ಯೋಗನಮ್ಮರಾಜ್ಯ

KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ

ಸಾಂದರ್ಭಿಕ ಚಿತ್ರ.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೌಕರರ ಕೋರಿಕೆ‌ ಮೇರೆಗೆ ಕೆಎಸ್ಆರ್‌ಟಿಸಿ ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ‌ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.

ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಬಂಧಿತ ಕಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ.5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ನೌಕರರ ಪತಿ ಅಥವಾ ಪತ್ನಿಯು ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಸ್ವಾಮ್ಯದ ಸಂಸ್ಥೆಯ ಅಧಿಕಾರಿ/ ನೌಕರರಾಗಿ ಬೇರೆ ಬೇರೆ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ.5 ರಷ್ಟು ಹುದ್ದೆಗಳನ್ನು ಮೀಸಲಿರಿಸಿದ್ದು, ಒಟ್ಟು ಶೇ.10 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ.

ಅದರಂತೆ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ 05-07-2023 ರ ಬೆಳಗ್ಗೆ 11ಗಂಟೆಯಿಂದ ಪ್ರಾರಂಭವಾಗಿ, 31-12-2023ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ http://ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಈಗ ಅರ್ಜಿ ಸಲ್ಲಿಸಿದ್ದವರ ಅಂತರ ನಿಗಮ ವರ್ಗಾವಣೆಯ ವಿವರಗಳು ಈ ರೀತಿ ಇವೆ. 1‌.ಅಂತರ ನಿಗಮ ಸಾಮಾನ್ಯ ವರ್ಗದಡಿ ವರ್ಗಾವಣೆಗೊಂಡ ನೌಕರರ ಸಂಖ್ಯೆ – 1175.

2.ನೌಕರರ ಪತಿ ಅಥವಾ ಪತ್ನಿಯು ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಸ್ವಾಮ್ಯದ ಸಂಸ್ಥೆಯ ಅಧಿಕಾರಿ/ ನೌಕರರಾಗಿ ಬೇರೆ ಬೇರೆ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕರಣಗಳನ್ನು ಪರಿಗಣಿಸಿ ವರ್ಗಾವಣೆಗೊಂಡಿರುವ ನೌಕರರ ಸಂಖ್ಯೆ – 72

  1. ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ತೀವ್ರ ತರಹದ ಅನಾರೋಗ್ಯ, ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್ ಕಾರ್ಡ್, ಕಿಡ್ನಿ ವೈಫಲ್ಯ ಹಾಗೂ ಮೆದಳು ಸಂಬಂಧಿಸಿದ ಕಾಯಿಲೆಗಳು) ಪ್ರಕರಣದಲ್ಲಿ ನೌಕರರ ಕೋರಿಕೆ ಪರಿಗಣಿಸಿ ವರ್ಗಾವಣೆಗೊಂಡಿರುವ ನೌಕರರ ಸಂಖ್ಯೆ – 61

ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ 1,308 ನೌಕರರು ಅಂತರ ನಿಗಮ ವರ್ಗಾವಣೆಗೆ ಅವರ ಕೋರಿಕೆ ಮೇರೆಗೆ ಅರ್ಹರಿರುತ್ತಾರೆ. ಈ ಸಂಭವನೀಯ ಅಂತರ ನಿಗಮ ವರ್ಗಾವಣೆ ಪಟ್ಟಿಯನ್ನು 28.11.2024 ರಂದು http://ksrtc.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಈ ಪಟ್ಟಿಗೆ 28.11.2024 ರಿಂದ 04.12.2024ರ ಸಂಜೆ 5.30 ರವರೆಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ನೌಕರರಿಗೆ ಅವಕಾಶವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ