Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

KSRTC 4 ನಿಗಮಗಳ ಬಸ್‌ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಿ ಇದೇ ಜ.5ರಿಂದ ಜಾರಿಗೆ ಬಂದಿದೆ. ಆದರೆ ಈ ಪರಿಷ್ಕೃತ ದರ ನಿರ್ವಾಹಕರಿಗೆ ಭಾರಿ ತಲೆನೋವಾಗಿ ಪರಿಣಮಿಸಿದ್ದು ಪ್ರಯಾಣಿಕರೊಂದಿಗೆ ಚಿಲ್ಲರೆಗಾಗಿ ಜಗಳವಾಡಿಕೊಂಡೆ ಡ್ಯೂಟಿ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂಗಗಳೂರು ಮಹಾನರಗ ಸಾರಿಗೆ ನಿಗಮದ ನೂತನ ಚೀಟಿ ದರ‌ 6, 12, 18, 23, 24, 28 ರೂಪಾಯಿ ಮಾಡಲಾಗಿದೆ. ಇದರಿಂದ ಪ್ರಯಾಣಿಕರು 6 ರೂಪಾಯಿ ಬದಲಿಗೆ 10 ರೂಪಾಯಿ ಹಾಗೂ 12 ರೂ. ಬದಲಿಗೆ 15 ಅಥವಾ 20 ರೂ. ಹಾಗೂ 24-28 ರೂ. ಬದಲಿಗೆ 30 ರೂ. ಇಲ್ಲ 40 ರೂ. ಕೊಡುತ್ತಿದ್ದಾರೆ. ಇದರಿಂದ ನಿರ್ವಾಹಕರು ಚಿಲ್ಲರೆ ಸಮಸ್ಯೆ ಎದುರಿಸುವಂತಾಗಿದೆ.

ಇತ್ತ ಪ್ರಯಾಣಿಕರು ಚಿಲ್ಲರೆ ತೆಗೆದುಕೊಂಡು ಬರುವ ಮೂಲಕ ನಿರ್ವಾಹಕರಿಗೆ ಸಾಥ್‌ ನೀಡಬೇಕಿದೆ. ಹೀಗೆ ಮಾಡಿದರೆ ಸಮಸ್ಯೆ ಇಲ್ಲ. ಆದರೆ ಬಹುತೇಕ ಪ್ರಯಾಣಿಕರು 10, 20, 25, 30 ಇಲ್ಲ 40 ರೂಪಾಯಿ ನೀಡುತ್ತಿರುವುದರಿಂದ ಅವರಿಗೆ 1, 2, 3, 4, 7, 8, ರೂಪಾಯಿ ಚಿಲ್ಲರೆ ವಾಪಸ್‌ ನೀಡುವುದಕ್ಕೆ ಆಗುತ್ತಿಲ್ಲ.

ಹೌದು! ಚಿಲ್ಲರೆ ತರಬೇಕಾದದ್ದು ಪ್ರಯಾಣಿಕರ ಕರ್ತವ್ಯವೇ. ಆದರೆ‌ ಪ್ರಯಾಣಿಕರು ನಿರ್ವಾಹಕರಿಗೆ ಕೇಳುವ ಪ್ರಶ್ನೆ ಚಿಲ್ಲರೆ ಎಲ್ಲಿಂದ ತರಲಿ ಎಂದು. ಇದರಿಂದ ನಿರ್ವಾಹಕರಿಗೆ ಈ ಎರಡು ದಿನದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು ಅಲ್ಲದೆ ಪ್ರಯಾಣಿಕರೊಂದಿಗೆ ದಿನವಿಡೀ ಜಗಳ ಮಾಡಿಕೊಂಡೇ ಕರ್ತವ್ಯ ನಿರ್ವಹಿಸುವಂತಾಗಿದೆ.

ಇನ್ನು ಇದರಿಂದ ಕೆಲ ನೌಕರರು ಈ ದಿನ ಕರ್ತವ್ಯಕ್ಕೆ ಹೋಗಬೇಕೇ ಬೇಡವೇ ಎಂದು ಯೋಚಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ನೌಕರರು ಚೀಟಿದರವನ್ನು ಚಿಲ್ಲರೆ ಮುಕ್ತಗೊಳಿಸುವ ರೀತಿಯಲ್ಲಿ ಮಾಡಬೇಕು. ಇಲ್ಲ ಇದು ಹೀಗೆಯೇ ಮುಂದುವರಿದರೆ ನಿರ್ವಾಹಕರಿಗೆ ಮುಂದಿನ ದಿನಗಳಲ್ಲಿ ಪೈಲ್ಸ್‌, ಬಿಪಿ, ಶುಗರ್ ಎಲ್ಲ ರೋಗಗಳು ಬರುತ್ತವೆ.

ದಯಮಾಡಿ ಮೇಲಧಿಕಾರಿಗಳು ಈ ಚಿಲ್ಲರೆ ಸಮಸ್ಯೆಗೆ ಪರಿಹಾರ ನೀಡಿ. ಆದಷ್ಟೂ ಬೇಗ ನಗದು ರಹಿತ ಅಂದರೆ UPI ಪದ್ಧತಿ ಜಾರಿಯಾದಲ್ಲಿ ಸ್ವಲ್ಪ ಮಟ್ಟಿಗಾದರೂ ನೆಮ್ಮದಿಯಾಗುತ್ತದೆ ಎಂದು ನೌಕರರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...