NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಶಕ್ತಿ ಯೋಜನೆ : 500ನೇ ಕೋಟಿ ಪ್ರಯಾಣಿಕರಾಗಿ ಟಿಕೆಟ್‌ ಪಡೆಯುವ ಮಹಿಳೆಗೆ ವಿಶೇಷ ಸನ್ಮಾನ- ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ
  • 500 ಕೋಟಿಯತ್ತ ಶಕ್ತಿಯೋಜನೆ- ಮಹಿಳೆಯರಿಗೆ 500 ಕೋಟಿ ಉಚಿತ ಟಿಕೆಟ್‌ ವಿತರಿಸಿ ದಾಖಲೆ ನಿರ್ಮಿಸುವತ್ತ ಸಾರಿಗೆ ನಿಗಮಗಳು

ಬೆಂಗಳೂರು: 2023ರ ಜೂನ್‌ 11ರಂದು ರಾಜ್ಯದಲ್ಲಿ ಜಾರಿಗೆ ಬಂದ ‘ಶಕ್ತಿ’ ಯೋಜನೆಯಡಿ ನಮ್ಮ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಉಚಿತ ಪ್ರಯಾಣ ಮಾಡುವ ಹತ್ತಿರ ಸಲುಪಿದ್ದು, ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಮಾಡುವ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಗಳ ಹಿಂದೆ ಆರಂಭಿಸಲಾದ ಈ ಶಕ್ತಿ ಯೋಜನೆಯಡಿ ಇದೇ ಜು.14 ಅಥವಾ 15ಕ್ಕೆ 500 ಕೋಟಿ ಉಚಿತ ಪ್ರಯಾಣವನ್ನು ರಾಜ್ಯದ ಮಹಿಳೆಯರಿಗೆ ನೀಡಿದ ಗುರಿ ತಲುಪಲಿದೆ.

ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯವಾಗಿಸಲು ವಿಶೇಷ ಕಾರ್ಯಕ್ರಮ ಆಯೋಜಿಸುವ ಕುರಿತು ಚಿಂತನೆಯಿದೆ. ಹೀಗಾಗಿ ಈ ಬಗ್ಗೆ ಮುಖ್ಯಮಂತ್ರಿ ಸೇರಿದಂತೆ ಇತರರೊಂದಿಗೆ ಚರ್ಚಿಸಲಾಗುವುದು. ಜತೆಗೆ 500 ಕೋಟಿ ಉಚಿತ ಪ್ರಯಾಣದ ಟಿಕೆಟ್ ಪಡೆಯುವ ಪ್ರಯಾಣಿಕ ಮಹಿಳೆಗೆ ವಿಶೇಷ ಬಹುಮಾನ ನೀಡುವ ಚಿಂತನೆಯಿದೆ ಎಂದು ಹೇಳಿದರು.

ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಉಚಿತ ಪ್ರಯಾಣ ನೀಡಿದ್ದು ನಮ್ಮ ರಾಜ್ಯವೇ ಮೊದಲಾಗುತ್ತಿದ್ದು, ಇದು ದಾಖಲೆಯಾಗಿದೆ. ಶಕ್ತಿ ಯೋಜನೆ ಅನುಷ್ಠಾನಗೊಂಡಾಗ ಹಲವು ಸವಾಲುಗಳು ನಮ್ಮೆದುರಿದ್ದವು. ಸಿಬ್ಬಂದಿ, ಬಸ್‌ಗಳ ಕೊರತೆಗಳಿದ್ದವು. ಈ ಕೊರತೆಯ ನಡುವೆ ರಾಜ್ಯದ ನಾಲ್ಕೂ ನಿಗಮಗಳ ಸಾರಿಗೆ ಸಿಬ್ಬಂದಿ ಜನರ ಸೇವೆಯಲ್ಲಿ ನಿರತರಾಗಿ ಈ ಗುರಿ ತಲುಪಲು ಶ್ರಮಿಸಿದ್ದಾರೆ. ಇದರ ಎಲ್ಲ ಕ್ರೆಡಿಟ್‌ಗಳು ಸಾರಿಗೆ ನಿಗಮಗಳ ಎಲ್ಲ ನೌಕರರಿಗೆ ಸಲ್ಲಬೇಕು ಎಂದು ಹೇಳಿದರು.

ಇನ್ನು ಕೊರೊನಾ ಅವಧಿಯಲ್ಲಿ 3,800 ಬಸ್‌ಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ 9 ಸಾವಿರ ಜನರನ್ನು ನೇಮಕಾತಿ ಮಾಡಿಕೊಳ್ಳಲಾಗಿದ್ದು, 5,100 ಬಸ್‌ಗಳನ್ನು ಸೇರ್ಪಡೆಯಾಗಿವೆ.

ಜತೆಗೆ 1.54 ಲಕ್ಷ ಶೆಡ್ಯೂಲ್‌ಗಳಿಗೆ ಹೆಚ್ಚುವರಿಯಾಗಿ 20 ಸಾವಿರ ಶೆಡ್ಯೂಲ್‌ಗಳನ್ನು ಸೇರಿಸಲಾಗಿದೆ. ಹಾಗೆಯೇ, ಶಕ್ತಿ ಯೋಜನೆ ಜಾರಿ ನಂತರ ಪ್ರತಿ ದಿನ 84 ಲಕ್ಷ ಇದ್ದ ಪ್ರಯಾಣಿಕರ ಸಂಖ್ಯೆ 1 ಕೋಟಿ ಮೀರಿದೆ. ಜತೆಗೆ ಈವರೆಗೆ ₹12,534 ಕೋಟಿ ಮೌಲ್ಯದ ಟಿಕೆಟ್‌ಗಳು ಖರೀದಿಯಾಗಿವೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ